Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 3:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿನ್ನ ಅಭಿಷಿಕ್ತನಿಗಾಗಿಯೂ ಮತ್ತು ನಿನ್ನ ಪ್ರಜೆಯ ರಕ್ಷಣೆಗಾಗಿಯೂ ನೀನು ಯಾವಾಗಲೂ ಮುಂದಾಗಿರುತ್ತಿ; ದುಷ್ಟರ ಮನೆಯ ಮುಖ್ಯಸ್ಥರನ್ನು ಸದೆಬಡೆದು ಅವರ ಕುಟುಂಬಗಳನ್ನು ಬುಡಸಮೇತವಾಗಿ ಜನರ ಮುಂದೆ ಬೆತ್ತಲೆಯಾಗಿ ಮಾಡುವಿ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹೊರಟಿರುವೆ ನಿನ್ನ ಪ್ರಜೆಗಳ ರಕ್ಷಣೆಗೆ ನಿನ್ನ ಅಭಿಷಿಕ್ತನ ಜೀವೋದ್ಧಾರಕೆ. ಬಡಿದುಹಾಕಿರುವೆ ದುರುಳನ ಬುರುಡೆಯನು ನೆಲಸಮಮಾಡಿರುವೆ ಅವನ ಮನೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿನ್ನ ಪ್ರಜೆಯ ರಕ್ಷಣೆಗೆ, ನಿನ್ನ ಅಭಿಷಿಕ್ತನ ಉದ್ಧಾರಕ್ಕೆ ಹೊರಟಿದ್ದೀ; ತಲೆಯನ್ನು ಕುತ್ತಿಗೆಯ ಬುಡದವರೆಗೆ ಹೊಡೆದುಹಾಕಿದ ಹಾಗೆ ತಳಾದಿಯು ಬೈಲಾಗುವಷ್ಟರ ಮಟ್ಟಿಗೆ ನೀನು ದುಷ್ಟನ ಮನೆಯನ್ನು ಹೊಡೆದಿದ್ದೀ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿನ್ನ ಜನರನ್ನು ರಕ್ಷಿಸಲು ನೀನು ಬಂದೆ. ನೀನು ಆರಿಸಿದ್ದ ರಾಜನನ್ನು ಜಯದ ಕಡೆಗೆ ನಡಿಸುವುದಕ್ಕಾಗಿ ಬಂದೆ. ಪ್ರತೀ ದುಷ್ಟ ಕುಟುಂಬದ ನಾಯಕನನ್ನು ನೀನು ಸಂಹರಿಸಿದೆ. ಭೂಲೋಕದಲ್ಲಿದ್ದ ಪ್ರಮುಖನಿಂದಿಡಿದು ಪ್ರಮುಖನಲ್ಲದವನವರೆಗೂ ನೀನು ಹತಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿನ್ನ ಜನರ ರಕ್ಷಣೆಗೋಸ್ಕರವೂ, ನಿನ್ನ ಅಭಿಷಿಕ್ತನ ರಕ್ಷಣೆಗೋಸ್ಕರವೂ ಹೊರಗೆ ಹೊರಟು ಬಂದಿ. ದುಷ್ಟ ದೇಶದ ನಾಯಕನನ್ನು ನೀನು ತುಳಿದುಬಿಟ್ಟಿ. ತಲೆಯಿಂದ ಪಾದದವರೆಗೆ ಅವನನ್ನು ಬೆತ್ತಲೆ ಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 3:13
26 ತಿಳಿವುಗಳ ಹೋಲಿಕೆ  

ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ, ಹೆಣಗಳಿಂದ ಅದನ್ನು ತುಂಬಿಸುವನು.


“ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು” ಎಂದು ಹೇಳಿದನು.


ಆಗ ಆತನು ತನ್ನ ಸೇವಕನಾದ ಮೋಶೆಯನ್ನೂ, ತಾನು ಆರಿಸಿಕೊಂಡ ಆರೋನನನ್ನೂ ಕಳುಹಿಸಿದನು.


ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ, ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ, ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.


ಕುರುಬನು ಕುರಿಹಿಂಡನ್ನು ಹೇಗೋ, ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ, ನಿನ್ನ ಪ್ರಜೆಯನ್ನು ಮುನ್ನಡೆಸಿದಿ.


ದೇವರೇ, ನೀನು ನಿನ್ನ ಪ್ರಜೆಯ ಮುಂದೆ ಹೊರಟು, ಅರಣ್ಯಮಾರ್ಗವಾಗಿ ಪ್ರಯಾಣ ಮಾಡುತ್ತಾ ಬರುವಾಗ, ಸೆಲಾ


ಯೆಹೋವನು ತನ್ನ ಜನರಿಗೆ ಬಲವೂ, ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ.


ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು. ಆತನು ತನ್ನ ಪವಿತ್ರ ಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು, ತನ್ನ ಭುಜಬಲದಿಂದ ಅವನಿಗೆ ವಿಜಯವನ್ನು ಉಂಟುಮಾಡುವನು.


ನಂತರ ಯೆಹೋಶುವನು ಉಳಿದ ಅರಸರನ್ನೂ ಅವರ ಎಲ್ಲಾ ಪಟ್ಟಣಗಳನ್ನು ಹಿಡಿದು ಯೆಹೋವನ ಸೇವಕನಾದ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ಸಂಹರಿಸಿದನು.


ಯೆಹೋವನು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್ ಹಾಗೂ ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಬೈಲಿನವರೆಗೂ ಅವರನ್ನು ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು.


ಇಸ್ರಾಯೇಲರ ದೇವರಾದ ಯೆಹೋವನು ಅವರ ಪರವಾಗಿ ಯುದ್ಧ ಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.


ಅವರನ್ನು ತನ್ನ ಬಳಿಗೆ ತಂದನಂತರ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರನ್ನು ಕರೆಸಿ ತನ್ನ ಜೊತೆಯಲ್ಲಿ ಬಂದಿದ್ದ ಸೈನ್ಯಾಧಿಪತಿಗಳಿಗೆ “ಹತ್ತಿರ ಬಂದು ಈ ಅರಸರ ಕೊರಳಿನ ಮೇಲೆ ಪಾದಗಳನ್ನಿಡಿರಿ” ಎಂದು ಹೇಳಿದನು. ಅವರು ಹತ್ತಿರ ಬಂದು ಅವರ ಕುತ್ತಿಗೆಯ ಮೇಲೆ ಕಾಲಿಟ್ಟರು.


ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್‍ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ತಲುಪುವವರೆಗೂ ಯೆಹೋವನು ಅವರ ಮೇಲೆ ಆಕಾಶದಿಂದ ದೊಡ್ಡ ಆಲಿಕಲ್ಲಿನ ಮಳೆಯನ್ನು ಸುರಿಸಿದನು. ಈ ಕಾರಣದಿಂದ ಅನೇಕರು ಸತ್ತರು ಇಸ್ರಾಯೇಲ್ಯರ ಕತ್ತಿಯಿಂದ ಸಂಹಾರವಾದವರಿಗಿಂತ ಆಲಿಕಲ್ಲಿನ ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.


ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗೆಂದರು, “ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?


ಆಗ ಅವನು ಹೋಗಿ ಅವರನ್ನು ಸೋಲಿಸಿ, “ಯೆಹೋವನು ಕಟ್ಟೆ ಒಡೆದ ಪ್ರವಾಹದಂತೆ ತನ್ನ ಶತ್ರುಗಳ ಮೇಲೆ ಬಿದ್ದು, ಅವರನ್ನು ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾನೆ” ಎಂದು ಹೇಳಿ ಆ ಯುದ್ಧ ಸ್ಥಳಕ್ಕೆ “ಬಾಳ್ ಪೆರಾಚೀಮ್” ಎಂದು ಹೆಸರಿಟ್ಟನು.


ಯೆಹೋವನೇ, ಎದೋಮ್ಯರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ.


ಆಹಾ, ನೀನು ಆಕಾಶವನ್ನು ಸೀಳಿ ಇಳಿದು ಬರಬಾರದೇ! ನಿನ್ನ ದರ್ಶನವು ಉಂಟಾಗಿ ಪರ್ವತಗಳು ಅಗಲಿದರೆ ಎಷ್ಟೋ ಒಳ್ಳೆಯದು!


ನೀವು ಸುಣ್ಣಬಳಿದ ಗೋಡೆಯನ್ನು ನಾನು ಹೀಗೆ ಕೆಡವಿ ನೆಲ ಸಮಮಾಡಿ ಅದರ ಅಸ್ತಿವಾರವನ್ನು ಬಯಲುಪಡಿಸುವೆನು; ಅದು ಬಿದ್ದುಹೋಗುವುದು ಮತ್ತು ನೀವು ಅದರೊಳಗೆ ಸಿಕ್ಕಿಕೊಂಡು ನಾಶವಾಗುವಿರಿ ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.


ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಆತನು ಹೀಗೆ ಅಪ್ಪಣೆ ಕೊಟ್ಟನು, “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ. ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳುವ ಹಾಗೆ ಮಾಡಿ, ಉಳಿದವರನ್ನು ಖಡ್ಗದಿಂದ ಸಂಹರಿಸುವೆನು. ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು