Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 3:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ತೇಮಾನಿನಿಂದ ಕರುಣಾಸಾಗರನಾದ ದೇವರು ಬರುತ್ತಿದ್ದಾನೆ, ಸದಮಲಸ್ವಾಮಿಯು ಪಾರಾನ್ ಪರ್ವತದಿಂದ ಬರುತ್ತಾನೆ; ಸೆಲಾ. ಆತನ ಪ್ರಭಾವವು ಆಕಾಶಮಂಡಲವನ್ನೆಲ್ಲಾ ಆವರಿಸಿಕೊಂಡಿದೆ, ಆತನ ಮಹಿಮೆಯು ಭೂಮಂಡಲವನ್ನು ತುಂಬುತ್ತಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಬರುತಿಹನು ದೇವನು ಎದೋಮಿನಿಂದ ಆ ಪರಮಪಾವನಸ್ವಾಮಿ ಪಾರಾನ್ ಪರ್ವತದಿಂದ. ಆವರಿಸುವುದು ಆತನ ಪ್ರಭಾವ ಆಕಾಶಮಂಡಲವನು ತುಂಬಿಹುದು ಆತನ ಮಹಿಮೆ ಭೂಮಂಡಲವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದೇವರು ತೇಮಾನಿನಿಂದ ಬರುತ್ತಾನೆ, ಸದಮಲಸ್ವಾವಿುಯು ಪಾರಾನ್ ಪರ್ವತದಿಂದ ಐತರುತ್ತಾನೆ; ಸೆಲಾ. ಆತನ ಪ್ರಭಾವವು ಆಕಾಶಮಂಡಲವನ್ನು ಆವರಿಸುತ್ತಿದೆ, ಆತನ ಮಹಿಮೆಯು ಭೂಮಂಡಲವನ್ನು ತುಂಬುತ್ತಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ತೇಮಾನಿನಿಂದ ಯೆಹೋವನು ಬರುತ್ತಿದ್ದಾನೆ. ಪರಿಶುದ್ಧನಾದವನು ಪಾರಾನ್ ಪರ್ವತದಿಂದ ಬರುತ್ತಿದ್ದಾನೆ. ಯೆಹೋವನ ಮಹಿಮೆಯು ಆಕಾಶಮಂಡಲವನ್ನು ಮುಚ್ಚುತ್ತದೆ. ಅವನ ಸ್ತೋತ್ರವು ಭೂಲೋಕವನ್ನು ತುಂಬುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇವರು, ತೇಮಾನಿನಿಂದಲೂ; ಪರಿಶುದ್ಧರು, ಪಾರಾನ್ ಪರ್ವತದಿಂದಲೂ ಬಂದರು. ಅವರ ಮಹಿಮೆ ಆಕಾಶಗಳನ್ನು ಮುಚ್ಚಿತು. ಅವರ ಸ್ತೋತ್ರವು ಭೂಮಿಯನ್ನು ತುಂಬಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 3:3
32 ತಿಳಿವುಗಳ ಹೋಲಿಕೆ  

“ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಪ್ರಜ್ವಲಿಸಿ, ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.


ತೇಮಾನ್ ಪಟ್ಟಣವೇ, ನಿನ್ನ ಶೂರರು ಧೈರ್ಯಗೆಟ್ಟು ಎಲ್ಲರೂ ಹತರಾಗಿ ಏಸಾವನ ಪರ್ವತದೊಳಗೆ ನಿರ್ಮೂಲರಾಗುವರು.


ನಾನು ತೇಮಾನಿನ ಮೇಲೆ ಬೆಂಕಿಯನ್ನು ಸುರಿಸುವೆನು, ಮತ್ತು ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವುದು.”


ಭಯಪಡಿರಿ, ಪಾಪಮಾಡಬೇಡಿರಿ; ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ ಮತ್ತು ಮೌನವಾಗಿರಿ. ಸೆಲಾ


ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?


ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು.


ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ, ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ.


“ನಮ್ಮ ದೇವರಾದ ಯೆಹೋವನು ತನ್ನ ಘನವನ್ನೂ ಮತ್ತು ಮಹಿಮೆಯನ್ನೂ ನಮಗೆ ತೋರಿಸಿ, ಅಗ್ನಿಜ್ವಾಲೆಯೊಳಗಿಂದ ತನ್ನ ಸ್ವರವನ್ನು ನಮಗೆ ಕೇಳುವಂತೆ ಮಾಡಿದನಲ್ಲಾ. ಮನುಷ್ಯನು ತನ್ನ ಸಂಗಡ ದೇವರು ಮಾತನಾಡಿದರೂ ಸಾಯದೆ ಬದುಕಿದ್ದುಂಟೆಂಬುದು ಈ ಹೊತ್ತು ನಮಗೆ ತಿಳಿಯಬಂತು.


ಅವನು ಪಾರಾನಿನ ಅರಣ್ಯದಲ್ಲಿ ವಾಸ ಮಾಡಿದನು. ಅವನ ತಾಯಿ ಐಗುಪ್ತ ದೇಶದಿಂದ ಕನ್ಯೆಯನ್ನು ತಂದು ಅವನಿಗೆ ಮದುವೆ ಮಾಡಿಸಿದಳು.


ಹೌದು, ನೀನು ಮೊದಲಿನಂತೆ ನಮ್ಮ ನಿರೀಕ್ಷೆಗೆ ಮೀರಿದ ಭಯಂಕರ ಕೃತ್ಯಗಳನ್ನು ನಡೆಸಿ ಇಳಿದು ಬಂದು, ಪರ್ವತಗಳು ನಿನ್ನ ದರ್ಶನದಿಂದ ನಡುಗಿದರೆ ಎಷ್ಟೋ ಲೇಸು!


ದೇವರೇ, ನಿನ್ನ ನಾಮದ ಘನತೆಗೆ ತಕ್ಕಂತೆಯೇ, ಲೋಕವೆಲ್ಲಾ ನಿನ್ನನ್ನು ಹೊಗಳುವುದು. ನಿನ್ನ ಬಲಗೈ ನೀತಿಯನ್ನು ನೆರವೇರಿಸಿತು.


ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. ಸೆಲಾ.


ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ


ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ, ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. ಸೆಲಾ.


ಅನೇಕರು ನನ್ನ ವಿಷಯದಲ್ಲಿ, “ಅವನಿಗೆ ದೇವರಿಂದ ಸಹಾಯವು ಆಗುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. ಸೆಲಾ


ಸಮುವೇಲನು ಮರಣಹೊಂದಿದನು. ಇಸ್ರಾಯೇಲ್ಯರೆಲ್ಲರೂ ಒಟ್ಟಾಗಿ ಬಂದು ಅವನಿಗಾಗಿ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.


ಆದುದರಿಂದ ಇಸ್ರಾಯೇಲರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು.


ಆ ಗುಡುಗು, ಮಿಂಚು, ತುತ್ತೂರಿಯ ಧ್ವನಿ, ಹಾಗೂ ಬೆಟ್ಟದಿಂದ ಹೊರಬರುತ್ತಿದ್ದ ಹೊಗೆಯನ್ನು ಜನರೆಲ್ಲರೂ ನೋಡಿ, ನಡುಗುತ್ತಾ ದೂರದಲ್ಲಿ ನಿಂತುಕೊಂಡರು.


ಎಲೀಫಜನ ಮಕ್ಕಳು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಗತಾಮ್, ಕೆನೆಜ್,


ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು; ಆತನ ಪ್ರಭಾವವು ಮೇಲಣ ಲೋಕಕ್ಕಿಂತಲೂ ಉನ್ನತವಾಗಿದೆ.


ಯೆಹೋವನನ್ನು ಕೊಂಡಾಡಲಿ. ಆತನ ನಾಮವೊಂದೇ ಮಹತ್ವವುಳ್ಳದ್ದು, ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಪ್ರಸರಿಸಿದೆ.


ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.


ಅವರು ಮೊದಲು ಮಿದ್ಯಾನಿಗೂ, ಆ ಮೇಲೆ ಪಾರಾನಿಗೂ ಬಂದರು. ಅಲ್ಲಿಂದ ಕೆಲವು ಜನರು ಪಾರಾನಿನ ಜನರನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಆಹಾರವನ್ನು, ಮನೆಯನ್ನೂ ಮತ್ತು ಭೂಮಿಯನ್ನೂ ಕೊಟ್ಟನು.


ಇಗೋ! ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವದಿಕ್ಕಿನ ಮಾರ್ಗವಾಗಿ ಬಂದಿತ್ತು ಮತ್ತು ಆತನ ಧ್ವನಿಯು ಜಲಪ್ರವಾಹದ ಘೋಷದಂತಿತ್ತು; ಆತನ ಮಹಿಮೆಯಿಂದ ಭೂಮಿಯು ಪ್ರಕಾಶಿಸುತ್ತಿತ್ತು.


ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು