Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 10:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನಮಗೆ ರಾಜನೇ ಇಲ್ಲ; ನಾವು ಯೆಹೋವನಲ್ಲಿ ಭಯಭಕ್ತಿಯಿಟ್ಟವರಲ್ಲ. ರಾಜನಾದರೋ ನಮಗಾಗಿ ಏನು ಮಾಡಿಯಾನು?” ಎಂದು ಈಗ ಅವರು ಅಂದುಕೊಳ್ಳಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನಮಗೆ ರಾಜನೇ ಇಲ್ಲ. ನಾವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಲ್ಲ. ನಮಗೆ ರಾಜನಿದ್ದರೂ ಅವನು ನಮಗೆ ಏನು ತಾನೇ ಮಾಡಿಯಾನು?” ಎಂದು ಆ ಜನರು ಆಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಮಗೆ ರಾಜನೇ ಇಲ್ಲ; ನಾವು ಯೆಹೋವನಲ್ಲಿ ಭಯಭಕ್ತಿಯಿಟ್ಟವರಲ್ಲ; ರಾಜನಾದರೋ ನಮಗಾಗಿ ಏನು ಮಾಡಿಯಾನು ಎಂದು ಈಗ ಅವರು ಅಂದುಕೊಳ್ಳಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈಗ ಇಸ್ರೇಲರು ಹೇಳುವುದೇನೆಂದರೆ, “ನಮಗೆ ರಾಜನಿಲ್ಲ, ನಾವು ಯೆಹೋವನನ್ನು ಗೌರವಿಸುವದಿಲ್ಲ. ಆತನ ಅರಸನು ನಮಗೇನೂ ಮಾಡಲು ಸಾಧ್ಯವಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅವರು, “ನಮಗೆ ಅರಸನಿಲ್ಲ, ಏಕೆಂದರೆ ನಾವು ಯೆಹೋವ ದೇವರಲ್ಲಿ ಭಯಭಕ್ತಿ ಇಟ್ಟವರಲ್ಲ. ಅರಸನು ನಮಗಿದ್ದರೂ ಏನು ಮಾಡುವನು?” ಎಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 10:3
14 ತಿಳಿವುಗಳ ಹೋಲಿಕೆ  

ನಿಮ್ಮ ದುಷ್ಟತನವು ಬಹಳವಾಗಿರುವುದರಿಂದ ಬೇತೇಲು ಇಂಥ ದುರ್ಗತಿಯನ್ನು ನಿಮಗೆ ತರುವುದು; ಬೆಳಗಾಗುವುದರೊಳಗೆ ಇಸ್ರಾಯೇಲಿನ ರಾಜನು ತೀರಾ ಹಾಳಾಗುವನು.


ನಾನು ಕೋಪಗೊಂಡು ರಾಜರನ್ನು ಕೊಟ್ಟಿದ್ದೇನೆ; ಕೋಪೋದ್ರೇಕನಾಗಿ ಅವರನ್ನು ತೆಗೆದು ಹಾಕಿದ್ದೇನೆ.


ಸಮಾರ್ಯದ ರಾಜನು ಹಾಳಾಗಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವ ಮರದ ಚಕ್ಕೆಗೆ ಸಮಾನನಾಗಿದ್ದಾನೆ.


ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು.


ನೀನೀಗ ರೋದಿಸುತ್ತಿರುವುದೇಕೆ? ಪ್ರಸವವೇದನೆಯಷ್ಟು ಕಠಿಣವಾದ ಯಾತನೆಯು ನಿನ್ನನ್ನು ಬಾಧಿಸುತ್ತಿರುವುದಕ್ಕೆ ಕಾರಣವೇನು? ನಿನ್ನಲ್ಲಿ ರಾಜನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶವಾದನೋ?


ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹಗಳಿಲ್ಲದೆ ಇಸ್ರಾಯೇಲರು ಬಹಳ ದಿನಗಳು ತಾಳಿಕೊಂಡಿರುವರು.


ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.


ಇಸ್ರಾಯೇಲ್ ಐಗುಪ್ತ ದೇಶಕ್ಕೆ ಹಿಂದಿರುಗದು; ಅದು ನನ್ನ ಕಡೆಗೆ ಹಿಂದಿರುಗಲು ಒಪ್ಪದ ಕಾರಣ ಅಶ್ಶೂರವೇ ಅದಕ್ಕೆ ರಾಜನಾಗಬೇಕು.


ನೀವು ದ್ರೋಹಿಗಳಾಗಿಯೇ ಇದ್ದರೆ ನೀವು ಮತ್ತು ನಿಮ್ಮ ಅರಸನು ನಾಶವಾಗುವಿರಿ” ಎಂದು ಹೇಳಿದನು.


ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ.


ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ನಡೆಸಲಿ. ಇಸ್ರಾಯೇಲರ ಸದಮಲಸ್ವಾಮಿಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಆದಷ್ಟು ಬೇಗ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!


ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಯಾಬೇಷನ ಮಗನಾದ ಶಲ್ಲೂಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.


ಪ್ರಭುಗಳಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.


ಈಗ ನಿನ್ನ ಅರಸನು ಎಲ್ಲಿ? ನಿನ್ನ ಪಟ್ಟಣಗಳಲ್ಲೆಲ್ಲಾ ನಿನ್ನವರನ್ನು ಉದ್ಧರಿಸುವನೋ? ನನಗೆ ರಾಜನನ್ನೂ ರಾಜ್ಯಾಧಿಕಾರಿಗಳನ್ನೂ ದಯಪಾಲಿಸು ಎಂದು ನನ್ನನ್ನು ಕೇಳಿಕೊಂಡಿಯಷ್ಟೆ; ನಿನ್ನನ್ನು ರಕ್ಷಿಸಬಲ್ಲ ನಗರಪಾಲಕರು ಎಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು