Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 12:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಎಫ್ರಾಯೀಮು ಯೆಹೋವನನ್ನು ಅತಿ ತೀಕ್ಷ್ಣವಾಗಿ ರೇಗಿಸಿದೆ, ಆದಕಾರಣ ಅದರ ಒಡೆಯನು ಅದರ ರಕ್ತಾಪರಾಧವನ್ನು ಅದರ ಮೇಲೆ ಹೊರಿಸಿ, ಅದು ಮಾಡಿದ ಅವಮಾನವನ್ನು ಅದಕ್ಕೆ ಹಿಂದಿರುಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಎಫ್ರಯಿಮ್ ದೇವರನ್ನು ಉಗ್ರವಾಗಿ ರೇಗಿಸಿದೆ; ರಕ್ತಾಪರಾಧವನ್ನು ಅದರ ಮೇಲೆ ಹೊರಿಸಲಾಗುವುದು. ಅದು ಮಾಡಿದ ಅವಮಾನಕ್ಕೆ ಪ್ರತಿಯಾಗಿ ದೇವರು ಅದನ್ನು ಅವಮಾನಕ್ಕೆ ಗುರಿಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಎಫ್ರಾಯೀಮು ಯೆಹೋವನನ್ನು ಅತಿ ತೀಕ್ಷ್ಣವಾಗಿ ರೇಗಿಸಿದೆ, ಆದಕಾರಣ ಅದರ ಒಡೆಯನು ಅದರ ರಕ್ತಾಪರಾಧವನ್ನು ಅದಕ್ಕೆ ಕಟ್ಟಿ ಅದು ಮಾಡಿದ ಅವಮಾನವನ್ನು ಅದಕ್ಕೆ ಹಿಂದಿರುಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಎಫ್ರಾಯೀಮನು ಯೆಹೋವನನ್ನು ಅತಿಯಾಗಿ ಕೋಪಿಸಿಕೊಳ್ಳುವಂತೆ ಮಾಡಿದನು. ಎಫ್ರಾಯೀಮನು ಅನೇಕ ಮಂದಿಯನ್ನು ಕೊಲೆ ಮಾಡಿದನು. ಅವನ ಅಪರಾಧಗಳಿಗಾಗಿ ಅವನು ಶಿಕ್ಷಿಸಲ್ಪಡುವನು. ಅವನ ದೇವರಾದ ಯೆಹೋವನು ಅವನು ಮಾಡಿದ ಅಪರಾಧಕ್ಕೆ ತಕ್ಕ ದಂಡನೆಯನ್ನು ವಿಧಿಸಿ ಅವಮಾನ ಹೊರುವಂತೆ ಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೂ ಎಫ್ರಾಯೀಮು ಬಹು ಕಠೋರವಾಗಿ ಆತನನ್ನು ರೇಗಿಸಿತು. ಆದ್ದರಿಂದ ಯೆಹೋವ ದೇವರು ಅದರ ರಕ್ತಾಪರಾಧವನ್ನು ಅದರ ಮೇಲೆ ಬರಮಾಡುವರು. ಅವನ ನಿಂದೆಯನ್ನು ಯೆಹೋವ ದೇವರು ಅವನ ಮೇಲೆ ಬರಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 12:14
16 ತಿಳಿವುಗಳ ಹೋಲಿಕೆ  

ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿತೆಗೆದು, ಲಾಭಕ್ಕೆ ಹಣಕೊಟ್ಟು, ಬಲಾತ್ಕಾರಿಯೂ ಮತ್ತು ರಕ್ತಸುರಿಸುವವನೂ ಆಗಿದ್ದರೆ ಜೀವಿಸುವನೇ? ಖಂಡಿತ ಜೀವಿಸುವುದಿಲ್ಲ; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ಖಂಡಿತ; ತನ್ನ ಮರಣ ದಂಡನೆಗೆ ತಾನೇ ಕಾರಣ.


ಆ ಮೇಲೆ ಅವನು ಕರಾವಳಿಯ ಕಡೆಗೆ ಕಣ್ಣಿಟ್ಟು ಅಲ್ಲಿ ಬಹಳ ದೇಶಗಳನ್ನು ಆಕ್ರಮಿಸುವನು. ಆದರೆ ಅವನು ಮಾಡುವ ನಿಂದೆಯನ್ನು ಒಬ್ಬ ಸರದಾರನು ನಿಲ್ಲಿಸಿ ಬಿಡುವುದಲ್ಲದೆ, ಅದು ಅವನ ಮೇಲೆಯೇ ತಿರುಗುವಂತೆ ಮಾಡುವನು.


ಅತ್ತಿತ್ತ ತಿರುಗಿಕೊಳ್ಳುತ್ತಾರೆ, ದೇವರ ಕಡೆಗೆ ತಿರುಗಿಕೊಳ್ಳುವುದಿಲ್ಲ; ಮೋಸದ ಬಿಲ್ಲಿಗೆ ಸಮಾನರಾಗಿದ್ದಾರೆ. ಅವರ ಮುಖಂಡರು ತಮ್ಮ ನಾಲಿಗೆಯ ಸೊಕ್ಕಿನ ನಿಮಿತ್ತ ಖಡ್ಗದಿಂದ ಹತರಾಗಿ ಬೀಳುವರು; ಅವರ ಸೋಲು ಐಗುಪ್ತದೇಶದ ಹಾಸ್ಯಕ್ಕೆ ಆಸ್ಪದವಾಗುವುದು.


ದಾವೀದನು, “ಈ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರಲಿ. ಯೆಹೋವನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿತು” ಅಂದನು.


ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಯೆಹೋವನು ನಿಮ್ಮನ್ನು ನಡೆಸುವ ಜನಾಂಗಗಳಲ್ಲಿ ನೀವು ಭೀಕರತೆಗೂ, ಗಾದೆಗೂ ಮತ್ತು ಪರಿಹಾಸ್ಯಕ್ಕೂ ಗುರಿಯಾಗುವಿರಿ.


ಏಕೆಂದರೆ ಅವನು ಕೊಂಬಿನ ಧ್ವನಿಯನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ; ತನ್ನ ಮರಣಕ್ಕೆ ತಾನೇ ಕಾರಣನಾಗುವನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.


“ಇಂಥವನನ್ನು ಪಡೆದ ಮಗನು, ಈಗ ಹೇಳಿದ ದುಷ್ಕೃತ್ಯಗಳಲ್ಲಿ ಯಾವುದನ್ನಾದರೂ ನಡೆಸಿ,


ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ನಡೆಯುತ್ತಿವೆ, ದೇಶವೆಲ್ಲಾ ರಕ್ತಮಯವಾಗಿದೆ.


ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.”


ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು ನಿಮಗೆ ಏರ್ಪಡಿಸುವನು; ಅವನಿಗೆ ನೀವು ಕಿವಿಗೊಡಬೇಕು.


ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು