Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 13:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವುದು, ಅದರ ಒರತೆಯು ಒಣಗುವುದು. ಶತ್ರುವು ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಎಫ್ರಯಿಮ್ ಕಳೆಗಳ ನಡುವೆ ಸೊಂಪಾಗಿ ಬೆಳೆದ ಜೊಂಡಿನಂತಿದೆ. ಆದರೆ ಸರ್ವೇಶ್ವರ ಮರುಭೂಮಿಯಿಂದ ಮೂಡಣಗಾಳಿ ಬೀಸುವಂತೆ ಮಾಡುವರು. ಅದರ ಬುಗ್ಗೆ ಬತ್ತಿಹೋಗುವುದು. ಅದರ ಒರತೆ ಒಣಗಿಹೋಗುವುದು. ಅದರ ಸಿರಿಸಂಪತ್ತಿನ ನಿಧಿಯನ್ನು ಶತ್ರುಗಳು ಸೂರೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವದು, ಅದರ ಒರತೆಯು ಒಣಗುವದು; [ಶತ್ರುವು] ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಗೊಂಬುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಸ್ರೇಲ್ ತನ್ನ ಸಹೋದರರ ಮಧ್ಯದಲ್ಲಿ ಬೆಳೆಯುವನು. ಒಂದು ಬಲವಾದ ಪೂರ್ವದಿಕ್ಕಿನ ಗಾಳಿಯು ಬರುವದು. ಯೆಹೋವನ ಗಾಳಿಯು ಮರುಭೂಮಿಯಿಂದ ಬೀಸುವದು. ಅವನ ನೀರಿನ ಒರತೆಯು ಒಣಗಿಹೋಗುವದು, ಆ ಗಾಳಿಯು ಇಸ್ರೇಲರ ಐಶ್ವರ್ಯವನ್ನೆಲ್ಲಾ ಎತ್ತಿಕೊಂಡು ಹೋಗಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಎಫ್ರಾಯೀಮು ತನ್ನ ಸಹೋದರರಲ್ಲಿ ಫಲ ಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವ ದೇವರು ಬೀಸಮಾಡುವ ಪೂರ್ವ ಗಾಳಿಯು ಬರಲು, ಅವನ ಬುಗ್ಗೆಯು ಬತ್ತುವುದು. ಅವನ ಒರತೆಯು ಒಣಗುವುದು. ಅವನ ಬೊಕ್ಕಸಗಳ ನಿಧಿಯನ್ನು ಶತ್ರುಗಳು ಸೂರೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 13:15
27 ತಿಳಿವುಗಳ ಹೋಲಿಕೆ  

ಆದರೆ ಆ ಲತೆಯು ರೋಷದಲ್ಲಿ ಕೀಳಲ್ಪಟ್ಟು, ನೆಲದ ಮೇಲೆ ಬಿಸಾಡಲ್ಪಟ್ಟಿತು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿ ಕೊಂಬೆಗಳು ಮುರಿದು ಒಣಗಿ ಹೋದವು, ಬೆಂಕಿಯು ಅವುಗಳನ್ನು ನುಂಗಿತು.


ಆಹಾ, ನಾಟಿಕೊಂಡಿದ್ದ ಆ ಲತೆಯು ಸಮೃದ್ಧವಾಗಿಯೇ ಇರುವುದೋ? ಮೂಡಣ ಗಾಳಿಯು ಬಡಿಯುವಾಗ ಬಾಡೇ ಬಾಡುವುದಲ್ಲವೇ? ಬೆಳೆದ ಪಾತಿಯಲ್ಲಿಯೇ ಒಣಗಿಹೋಗುವುದು.”


ಈ ಕಾಲದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಈ ಮಾತಾಗುವುದು, “ಬಿಸಿಗಾಳಿಯು ಅರಣ್ಯದ ಬೋಳುಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವುದಕ್ಕೂ, ಶೋಧಿಸುವುದಕ್ಕೂ ಆಗದು.


ಯೋಸೇಫನು ಫಲಭರಿತವಾದ ವೃಕ್ಷವು, ಒರತೆಯ ಬಳಿಯಲ್ಲಿರುವ ಫಲವತ್ತಾದ ವೃಕ್ಷವೇ ಆಗಿದ್ದಾನೆ. ಗೋಡೆಯ ಆಚೆಗೆ ಅದರ ರೆಂಬೆಗಳು ಹರಡಿವೆ.


ಎರಡನೆಯ ಮಗನು ಹುಟ್ಟಿದಾಗ, “ನನಗೆ ಸಂಕಟ ಬಂದ ದೇಶದಲ್ಲೇ ದೇವರು ಅಭಿವೃದ್ಧಿಯನ್ನು ದಯಪಾಲಿಸಿದ್ದಾನೆ” ಎಂದು ಹೇಳಿ ಆ ಮಗನಿಗೆ “ಎಫ್ರಾಯೀಮ್” ಎಂದು ಹೆಸರಿಟ್ಟನು.


ಬೆಳ್ಳಿಯನ್ನು ಸೂರೆಮಾಡಿರಿ, ಬಂಗಾರವನ್ನು ಕೊಳ್ಳೆ ಹೊಡೆಯಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧವಾದ ಶ್ರೇಷ್ಠವಸ್ತುಗಳ ನಿಧಿಗೂ ಮಿತಿಯೇ ಇಲ್ಲ.


ಇಸ್ರಾಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣುಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂಮಿಯು ಎಷ್ಟು ಒಳ್ಳೆಯದೋ, ಅಷ್ಟು ಒಳ್ಳೆಯ ವಿಗ್ರಹ ಸ್ತಂಭಗಳನ್ನು ನಿರ್ಮಾಣ ಮಾಡಿಕೊಂಡಿದೆ.


ಎಫ್ರಾಯೀಮ್ಯರ ಮಹಿಮೆಯು ಪಕ್ಷಿಯಂತೆ ಹಾರಿಹೋಗುವುದು; ಯಾರೂ ಹೆರರು, ಗರ್ಭಿಣಿಯಾಗುವುದಿಲ್ಲ, ಗರ್ಭಧರಿಸರು.


ಗಾಳಿಯು ಅವರನ್ನು ತನ್ನ ರೆಕ್ಕೆಗಳಲ್ಲಿ ಸುತ್ತಿಕೊಂಡು ಹೋಗುವುದು; ತಾವು ಮಾಡುತ್ತಿದ್ದ ವಿಗ್ರಹದ ಯಜ್ಞಗಳಿಗೆ ನಾಚಿಕೆಪಡುವರು.


ಅವರ ದೇವರುಗಳನ್ನೂ, ಎರಕದ ಬೊಂಬೆಗಳನ್ನೂ, ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ, ಸೂರೆ ಮಾಡಿಕೊಂಡು ಐಗುಪ್ತಕ್ಕೆ ಬಂದು, ಕೆಲವು ವರ್ಷಗಳ ತನಕ ಉತ್ತರ ದಿಕ್ಕಿನ ರಾಜನ ತಂಟೆಗೆ ಹೋಗುವುದಿಲ್ಲ.


ಆದ್ದರಿಂದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ನಿನ್ನ ಪರವಾಗಿ ವ್ಯಾಜ್ಯವಾಡಿ, ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ, ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.


ಈ ಪಟ್ಟಣದ ಎಲ್ಲಾ ಆಸ್ತಿಯನ್ನೂ, ಆದಾಯವನ್ನೂ ಮತ್ತು ಸಂಪತ್ತನ್ನೂ ಯೆಹೂದದ ಅರಸರ ಸಕಲ ನಿಧಿ, ನಿಕ್ಷೇಪಗಳನ್ನೂ ಅವರ ಶತ್ರುಗಳ ಕೈವಶಮಾಡುವೆನು; ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬಿಲೋನಿಗೆ ತೆಗೆದುಕೊಂಡು ಹೋಗುವರು.


ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ.


ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ. ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರ ಗಾಳಿಯಿಂದ ಸುತ್ತಾಡುವ ಧೂಳಿನಂತೆಯೂ ಅಟ್ಟಲ್ಪಡುವರು.


ಪೂರ್ವಿಕರ ಅಧರ್ಮದ ನಿಮಿತ್ತ ಅವನ ಮಕ್ಕಳಿಗೂ, ವಧ್ಯಸ್ಥಾನವನ್ನು ಸಿದ್ಧಮಾಡಿರಿ, ಅವರು ತಲೆಯೆತ್ತಿ, ಲೋಕವನ್ನು ವಶಪಡಿಸಿಕೊಂಡು ಭೂಮಂಡಲದ ಮೇಲೆಲ್ಲಾ ಪಟ್ಟಣಗಳನ್ನು ಕಟ್ಟಿಕೊಳ್ಳದಿರಲಿ.


ಅವನ ಸಂತತಿಯು ನಿರ್ಮೂಲವಾಗಲಿ; ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ.


ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ.


ಅವನ ವಂಶವೃಕ್ಷದ ಬೇರುಗಳು ಒಣಗುವುದು, ಅದರ ರೆಂಬೆಯು ಮೇಲೆ ಬಾಡುವುದು.


ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು. ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು (ಬಲವುಳ್ಳವು); ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೊಟ್ಯಾಂತರ ಜನರೂ ಮನಸ್ಸೆ ಕುಲದ ಲಕ್ಷಾಂತರ ಮಂದಿಯೂ ಇಂಥವರೇ” ಎಂದು ಹೇಳಿದನು.


ಆದರೆ ಅವನ ತಂದೆ ಒಪ್ಪದೆ, “ಮಗನೇ ನಾನು ಬಲ್ಲೆ. ನನಗೆ ಗೊತ್ತು. ಇವನಿಂದಲೂ ಜನಾಂಗವುಂಟಾಗುವುದು. ಇವನು ಬಲಿಷ್ಠನಾಗುವನು. ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು. ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು” ಎಂದು ಹೇಳಿದನು.


ಅವುಗಳ ಹಿಂದೆ ಮೂಡಣ ಗಾಳಿಯಿಂದ ಬತ್ತಿ ಒಣಗಿಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.


ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ಮಿತಿಮೀರದೆ ಹೋರಾಡುತ್ತಿದ್ದೀ; ಮೂಡಣದಿಂದ ಗಾಳಿಯು ಬೀಸುವ ದಿನದಲ್ಲಿ ಅದರ ಕ್ರೂರ ಹೊಡೆತದಿಂದ ನಿನ್ನ ಜನರನ್ನು ಹೊರಗೆ ಕಳುಹಿಸಿದೆ.


ಇಂಥಾ ಕೆಲಸಗಳಿಗೆ ಅನುಕೂಲಿಸದಂತೆ ನನ್ನ ಅಪ್ಪಣೆಯ ಮೇರೆಗೆ ಬಿರುಸಾಗಿ ಹೊಡೆಯುತ್ತದೆ; ಈಗ ನನ್ನ ಜನರಿಗೆ ನ್ಯಾಯದಂಡನೆಗಳನ್ನು ವಿಧಿಸುವೆನು” ಎಂಬುದೇ.


ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಮೇಲೂ, ಲೇಬ್ ಕಾಮೈ ದೇಶದವರ ಮೇಲೂ ನಾಶನದ ಗಾಳಿಯನ್ನು ಬೀಸಮಾಡುವೆನು.


ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ಕಿತ್ತು, ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸುವೆನು ಅವಳನ್ನು ಬೆಂಗಾಡಾಗಿಸಿ, ಮರುಭೂಮಿಯ ಸ್ಥಿತಿಗೆ ತಂದು, ನೀರಡಿಕೆಯಿಂದ ಸಾಯಿಸುವೆನು.


ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆಹೋಗುವವನಾಗಿ “ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ಸಾಯಲು ಬಯಸಿದನು.


ಅವುಗಳ ಹಿಂದೆ ಮೂಡಣ ಗಾಳಿಯಿಂದ ಬತ್ತಿ ಒಣಗಿ ಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು