Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 14:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ; ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಸ್ಸೀರಿಯದಿಂದ ನಮಗೆ ರಕ್ಷಣೆ ದೊರಕದು. ನಾವು ಕಾಳಗದ ಕುದುರೆಗಳ ಮೇಲೆ ಇನ್ನೆಂದೂ ಸವಾರಿಮಾಡೆವು. ನಮ್ಮ ಕೈಗಳು ನಿರ್ಮಿಸಿರುವ ವಿಗ್ರಹಗಳನ್ನು ವೀಕ್ಷಿಸಿ, ‘ನೀವೇ ನಮ್ಮ ದೇವರು’ ಎಂದು ಜಪಿಸೆವು. ಓ ದೇವಾ, ದಿಕ್ಕಿಲ್ಲದವರಿಗೆ ಕರುಣೆ ತೋರಿಸುವವನು ನೀನೇ,” ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅಶ್ಶೂರವು ನಮ್ಮನ್ನು ರಕ್ಷಿಸುವದೆಂದು ನಂಬೆವು; [ಐಗುಪ್ತದ] ಕುದುರೆಗಳನ್ನು ಹತ್ತೆವು; ನಮ್ಮ ಕೈಕೆಲಸದ ಬೊಂಬೆಗಳಿಗೆ - ನೀವು ನಮ್ಮ ದೇವರುಗಳು ಎಂದು ಇನ್ನು ಹೇಳೆವು; ನೀನೇ ಅನಾಥರನ್ನು ಕರುಣಿಸುವಿ ಎಂಬದಾಗಿ ಅರಿಕೆಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಶ್ಶೂರವು ನಮ್ಮನ್ನು ರಕ್ಷಿಸಲಾರದು. ನಾವು ಕುದುರೆ ಮೇಲೆ ಸವಾರಿ ಮಾಡುವದಿಲ್ಲ. ನಮ್ಮ ಕೈಗಳು ತಯಾರಿಸಿದ ಬೊಂಬೆಗಳಿಗೆ ನಾವು ಇನ್ನು ‘ನಮ್ಮ ದೇವರು’ ಎಂದು ಹೇಳುವದಿಲ್ಲ. ಯಾಕೆಂದರೆ ಅನಾಥರಿಗೆ ಕರುಣೆಯನ್ನು ತೋರಿಸುವವನು ನೀನೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಸ್ಸೀರಿಯ ನಮ್ಮನ್ನು ರಕ್ಷಿಸುವುದಿಲ್ಲ. ನಾವು ಕುದುರೆಗಳ ಮೇಲೆ ಸವಾರಿ ಮಾಡುವುದಿಲ್ಲ. ನಮ್ಮ ಕೈಗಳಿಂದ ಉಂಟು ಮಾಡಿದವುಗಳಿಗೆ, ‘ನೀವು ನಮ್ಮ ದೇವರುಗಳೇ,’ ಎಂದು ನಾವು ಇನ್ನು ಮುಂದೆ ಹೇಳುವುದೇ ಇಲ್ಲ. ಏಕೆಂದರೆ ನಿಮ್ಮಲ್ಲಿ ದಿಕ್ಕಿಲ್ಲದವರಿಗೆ ಅನುಕಂಪ ದೊರೆಯುತ್ತದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 14:3
36 ತಿಳಿವುಗಳ ಹೋಲಿಕೆ  

ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ, ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ.


ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ; ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.


ಎಫ್ರಾಯೀಮು, “ವಿಗ್ರಹಗಳ ಗೊಡವೆ ನನಗೆ ಇನ್ನೇಕೆ?” ಎಂದು ಅವುಗಳನ್ನು ತ್ಯಜಿಸುವುದು; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ.


ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ಗಾಯವನ್ನು ಗುಣಪಡಿಸಲಾರನು.


ನಾನು ಬಾಳ್ ದೇವತೆಗಳ ಹೆಸರುಗಳನ್ನು ನಿನ್ನ ಬಾಯೊಳಗಿಂದ ತೊಲಗಿಸುವೆನು; ಅವುಗಳನ್ನು ಇನ್ನು ಹೆಸರಿಸದಿರುವಿ.


ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.


ನೀವು, ‘ಬೇಡವೇ ಬೇಡ, ಕುದುರೆಗಳ ಮೇಲೆ ಓಡುವೆವು’ ಎಂದುಕೊಂಡಿದ್ದರಿಂದ ನೀವು ಓಡಿಯೇ ಹೋಗುವಿರಿ, ನೀವು, ‘ವೇಗವಾಗಿ ಸವಾರಿ ಮಾಡುವೆವು’ ಎಂದುಕೊಂಡಿದ್ದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು.


ಜೀವದ ರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ; ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು.


“ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.


ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣಗಾಳಿಯೇ. ಅದು ಮೋಸವನ್ನೂ, ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡೆಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತದೆ.


ಅದು ಒಂಟಿಯಾದ ಕಾಡುಕತ್ತೆಯಂತೆ ಮನಸ್ಸು ಬಂದ ಹಾಗೆ ನಡೆದು ಅಶ್ಶೂರಕ್ಕೆ ಹೋಗಿದೆ. ಎಫ್ರಾಯೀಮು ಹಣಕೊಟ್ಟು ಜಾರರನ್ನು (ವ್ಯಭಿಚಾರಿಗಳನ್ನು) ಸಂಪಾದಿಸಿಕೊಂಡಿದೆ.


ಆ ಬಸವನೂ ಇಸ್ರಾಯೇಲಿನ ಕೈಕೆಲಸ; ಶಿಲ್ಪಿಯು ಅದನ್ನು ರೂಪಿಸಿದನು; ಅದು ದೇವರಲ್ಲ; ಸಮಾರ್ಯದ ಬಸವನು ಚೂರುಚೂರಾಗುವನು.


ಎಫ್ರಾಯೀಮು ಬುದ್ಧಿ ವಿವೇಕಗಳಿಲ್ಲದ ಪಾರಿವಾಳದಂತಿದೆ; ಅದರ ಜನರು ಐಗುಪ್ತವನ್ನು ಕೂಗುತ್ತಾರೆ, ಅಶ್ಶೂರಕ್ಕೆ ಹೊರಡುತ್ತಾರೆ.


ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ ತಮ್ಮನ್ನು ಇನ್ನು ಮುಂದೆ ಅಶುದ್ಧ ಮಾಡಿಕೊಳ್ಳುವುದಿಲ್ಲ. ಅವರು ಪಾಪಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು. ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


“ಆದುದರಿಂದ ಈಗ ನನ್ನ ಒಡೆಯನಾದ ಅಶ್ಶೂರದ ಅರಸನಿಗೆ ಸವಾಲು ಹಾಕುವುದಕ್ಕೆ ನಿನಗೆ ಮನಸ್ಸುಂಟೋ? ಹಾಗಾದರೆ ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ. ನೀನು ಅಷ್ಟು ಮಂದಿ ಸವಾರರನ್ನು ಅವುಗಳ ಮೇಲೆ ಕುಳ್ಳಿರಿಸುವಿಯೋ?


ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ. ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವಾದವುಗಳು. ಯೆಹೋವನು ತನ್ನ ಕೈ ಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯಪಡೆದವನು ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.


ಫರೋಹನ ಆಶ್ರಯವನ್ನು ಪಡೆದು, ಐಗುಪ್ತವನ್ನು ಆಶ್ರಯ ಮಾಡಿಕೊಳ್ಳಬೇಕೆಂದು, ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿದ್ದಾರೆ.


ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ, ಅಶೇರವೆಂಬ ವಿಗ್ರಹಸ್ತಂಭಗಳನ್ನೂ, ಸೂರ್ಯಸ್ತಂಭಗಳನ್ನೂ ಪ್ರತಿಷ್ಠಿಸದೆ ನಾಶಮಾಡಿ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವಂತೆ ಮಾಡಿದನು ಮತ್ತು ಅವರ ಪಾಪ ಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದಾಗಿದೆ.


ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ, ಇಲಿ, ಬಾವಲಿಗಳಿಗಾಗಿ ಬಿಸಾಡಿ ಬಿಡುವರು.


“ನೀವು ಇಷ್ಟಪಟ್ಟ ಏಲಾ ಮರಗಳ ನಿಮಿತ್ತ ನಾಚಿಕೆಪಡುವಿರಿ. ಗೊತ್ತು ಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.


ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ, ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡುತ್ತಾನೆ.


ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ, ಅವರು ಸಹಾಯ ಮಾಡ ಶಕ್ತರಲ್ಲ,


ಆ ಕಾಲದಲ್ಲಿ ದರ್ಶಕನಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವನನ್ನು ಆಶ್ರಯಿಸಿಕೊಳ್ಳದೆ ಅರಾಮ್ಯರ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಅರಾಮ್ ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.


ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.


ನೀನು ನಿನ್ನ ಅನಾಥರನ್ನು ಬಿಡು, ನಾನೇ ಅವರನ್ನು ಉಳಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ಭರವಸೆಯಿಡಲಿ.


ನನ್ನ ಜನರು ತಮ್ಮ ಮರದ ತುಂಡನ್ನು ಹಿಡಿದು ಕಣಿಕೇಳುತ್ತಾರೆ, ಅವರು ಮರದ ತುಂಡಿನಿಂದ ಪರಿಹಾರ ನಿರೀಕ್ಷಿಸುತ್ತಾರೆ. ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ.


ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ, ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ; ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತನಾಡಿಸುತ್ತಾರೆ, ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ದಿಸುತ್ತಾರೆ.


ಆಗ ಯೆಹೋವನು ಮೀನಿಗೆ ಅಪ್ಪಣೆಕೊಡಲು ಅದು ಯೋನನನ್ನು ಸಮುದ್ರದ ದಡದಲ್ಲಿ ಕಾರಿಬಿಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು