Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 14:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದರ ನೆರಳನ್ನು ಆಶ್ರಯಿಸಿರುವವರು ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷಿಯಂತೆ ಫಲಪ್ರದರಾಗಿ ಫಲ ಕೊಡುವರು; ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮರಳಿ ಆಶ್ರಯಿಸುವರು ನನ್ನ ನೆರಳನ್ನು ಆ ಜನತೆ ಅಭಿವೃದ್ಧಿಯಾಗುವರು ಉದ್ಯಾನವನದಂತೆ ಫಲಪ್ರದವಾಗುವರು ಆ ಜನರು ದ್ರಾಕ್ಷಾಲತೆಯಂತೆ ಸುಪ್ರಸಿದ್ಧ ಅವರ ಕೀರ್ತಿ ಲೆಬನೋನಿನ ದ್ರಾಕ್ಷಾರಸದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದರ ನೆರಳನ್ನು ಆಶ್ರಯಿಸಿರುವವರು ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷೆಯಂತೆ ಪಲ್ಲವಿಸುವರು; ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸ್ರೇಲಿನ ಜನರು ಮತ್ತೆ ನನ್ನ ಆಶ್ರಯದಲ್ಲಿ ವಾಸಿಸುವರು. ಧಾನ್ಯದ ಸಸಿಗಳಂತೆ ಬೆಳೆಯುವರು, ದ್ರಾಕ್ಷಾಲತೆಯಿಂದ ಚಿಗುರುವರು. ಲೆಬನೋನಿನ ದ್ರಾಕ್ಷಿಬಳ್ಳಿಯಂತೆ ಅವರು ಇರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆತನ ನೆರಳಿನಲ್ಲಿ ಜನರು ವಾಸಿಸುವರು, ಧಾನ್ಯದ ಹಾಗೆ ಜೀವಿಸುವರು, ದ್ರಾಕ್ಷಿಬಳ್ಳಿಯ ಹಾಗೆ ಫಲಪ್ರದವಾಗುವರು. ಇಸ್ರಾಯೇಲಿನ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 14:7
17 ತಿಳಿವುಗಳ ಹೋಲಿಕೆ  

ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.


ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು,


“ನೆಮ್ಮದಿಯ ಬೆಳೆಯಾಗುವುದು; ದ್ರಾಕ್ಷಾಲತೆಯು ಹಣ್ಣುಬಿಡುವುದು, ಭೂಮಿಯು ಧಾನ್ಯವನ್ನೀಯುವುದು, ಆಕಾಶವು ಇಬ್ಬನಿಯನ್ನು ಸುರಿಸುವುದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.


ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಅರಳುವುದು; ಲೆಬನೋನಿನ ದೇವದಾರು ಮರಗಳ ಹಾಗೆ ಬೇರು ಬಿಟ್ಟುಕೊಳ್ಳುವುದು.


ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು.


ಬೇಡುವ ಧಾನ್ಯ, ದ್ರಾಕ್ಷಾರಸ, ತೈಲಗಳಿಗೆ ಭೂಮಿಯು ಒಲಿಯುವುದು, ಬೇಡುವ ಇಜ್ರೇಲಿಗೆ ಅವು ಒಲಿಯುವವು.


ನಾನು ಅದನ್ನು ಇಸ್ರಾಯೇಲಿನ ಉನ್ನತ ಪರ್ವತಾಗ್ರದಲ್ಲಿ ನೆಡಲು, ಅದು ಸೊಂಪಾದ ದೇವದಾರು ಮರವಾಗಿ ರೆಂಬೆಗಳನ್ನು ಹರಡಿ ಫಲಕೊಡುವುದು; ಅದರಲ್ಲಿ ಸಕಲವಿಧವಾದ ಪಕ್ಷಿಗಳು ವಾಸಿಸುತ್ತಾ ಅದರ ರೆಂಬೆಗಳ ನೆರಳನ್ನು ಆಶ್ರಯಿಸುವವು.


ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು.


ದ್ರಾಕ್ಷಿಯು ಚಿಗುರಿದೆಯೋ, ದಾಳಿಂಬೆ ಗಿಡಗಳು ಹೂಬಿಟ್ಟಿವೆಯೋ ಎಂದು ತಗ್ಗಿನಲ್ಲಿ ಬೆಳೆದ ಸಸ್ಯಗಳನ್ನು ನೋಡಲು ಬಾದಾಮಿಯ ತೋಟಕ್ಕೆ ನಾನು ಹೋಗಿದ್ದೆ.


ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನ ವೃಕ್ಷದಂತಿಹನು. ಅದರ ಫಲವು ನನ್ನ ನಾಲಿಗೆಗೆ ಸುಮಧುರ ನಾನು ಆತನ ನೆರಳಿನಲ್ಲಿ ಕುಳಿತು ಪರಮಾನಂದಗೊಂಡೆನು.


ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ, ನನ್ನನ್ನು ಚೈತನ್ಯಗೊಳ್ಳಿಸುವಿ, ನನ್ನ ಶತ್ರುಗಳ ಕೋಪಕ್ಕೆ ವಿರುದ್ಧವಾಗಿ ನಿನ್ನ ಕೈ ಚಾಚುವಿ, ನಿನ್ನ ಬಲಗೈ ನನ್ನನ್ನು ರಕ್ಷಿಸುವುದು.


ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ, ನೀನು ನಮ್ಮನ್ನು ಪುನಃ ಉಜ್ಜೀವಿಸುವುದಿಲ್ಲವೋ?


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು


ಆ ದಿನದಲ್ಲಿ ಯೆಹೋವನು, “ಆ ಕಾಲದಲ್ಲಿ ನಾನು ಒಲುಮೆ ತೋರಿಸುವೆನು. ಬೇಡುವ ಆಕಾಶಕ್ಕೆ ನಾನು ಒಲಿಯಲು, ಬೇಡುವ ಭೂಮಿಗೆ ಅದು ಒಲಿಯುವುದು.


ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಜೇನೂ ಮತ್ತು ಹಾಲೂ ನಿನ್ನ ನಾಲಿಗೆಯ ಅಡಿಯಲ್ಲಿವೆ, ನಿನ್ನ ಉಡುಪುಗಳು ಲೆಬನೋನಿನ ಸುಗಂಧ ಸೂಸುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು