Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ದಿನದಲ್ಲಿ ಯೆಹೋವನು, “ಆ ಕಾಲದಲ್ಲಿ ನಾನು ಒಲುಮೆ ತೋರಿಸುವೆನು. ಬೇಡುವ ಆಕಾಶಕ್ಕೆ ನಾನು ಒಲಿಯಲು, ಬೇಡುವ ಭೂಮಿಗೆ ಅದು ಒಲಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನದಂದು ಪ್ರೀತಿಸುವೆನು ನಿನ್ನನು; ಆಲಿಸುವೆನು ಆಗಸದ ಮೊರೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನಾನು ಒಲುಮೆ ತೋರಿಸುವೆನು; ಬೇಡುವ ಆಕಾಶಕ್ಕೆ ನಾನು ಒಲಿಯಲು ಬೇಡುವ ಭೂವಿುಗೆ ಅದು ಒಲಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಗ ನಾನು ನಿನಗೆ ಪ್ರತಿಕ್ರಿಯೆ ತೋರ್ಪಡಿಸುವೆನು.” ಇದು ಯೆಹೋವನು ಹೇಳಿದ ಮಾತು: “ನಾನು ಆಕಾಶದೊಂದಿಗೆ ಮಾತಾಡಲು ಅದು ಭೂಮಿಯ ಮೇಲೆ ಮಳೆಗರೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಆ ದಿವಸಗಳಲ್ಲಿ, ನಾನು ಕೇಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಆಕಾಶಗಳನ್ನು ಕೇಳುವೆನು. ಅವು ಭೂಮಿಯನ್ನು ಕೇಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:21
15 ತಿಳಿವುಗಳ ಹೋಲಿಕೆ  

“ನೆಮ್ಮದಿಯ ಬೆಳೆಯಾಗುವುದು; ದ್ರಾಕ್ಷಾಲತೆಯು ಹಣ್ಣುಬಿಡುವುದು, ಭೂಮಿಯು ಧಾನ್ಯವನ್ನೀಯುವುದು, ಆಕಾಶವು ಇಬ್ಬನಿಯನ್ನು ಸುರಿಸುವುದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.


ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?


ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.


ಮಳೆಯೂ, ಹಿಮವೂ ಆಕಾಶದಿಂದ ಬಿದ್ದು, ಭೂಮಿಯನ್ನು ತೋಯಿಸಿ, ಹಸರುಗೊಳಿಸಿ ಫಲಿಸುವಂತೆ ಮಾಡಿ, ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವುದಿಲ್ಲವೋ,


“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”


ನಾನು ನಿಮ್ಮನ್ನು ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ರಕ್ಷಿಸಿ, ಬೆಳೆ ಬೆಳೆಯಲೆಂದು ಅಪ್ಪಣೆಕೊಟ್ಟು, ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡುವುದಿಲ್ಲ.


ಅದರ ನೆರಳನ್ನು ಆಶ್ರಯಿಸಿರುವವರು ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷಿಯಂತೆ ಫಲಪ್ರದರಾಗಿ ಫಲ ಕೊಡುವರು; ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವುದು.


ಅವರ ಬಿನ್ನಹವನ್ನು ಯೆಹೋವನು ಲಾಲಿಸಿ ಅವರಿಗೆ ಹೀಗೆ ಹೇಳಿದನು: “ಇಗೋ, ನಾನು ಧಾನ್ಯ, ದ್ರಾಕ್ಷಾರಸ, ತೈಲಗಳನ್ನು ನಿಮಗೆ ಕಳುಹಿಸುತ್ತಿದ್ದೇನೆ. ಅವುಗಳಿಂದ ನಿಮಗೆ ತೃಪ್ತಿಯಾಗುವುದು. ನಿಮ್ಮನ್ನು ಅನ್ಯಜನಾಂಗಗಳ ನಿಂದೆಗೆ ಇನ್ನು ಗುರಿಮಾಡುವುದಿಲ್ಲ.


ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.


ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು. ಅದು ನಿಮ್ಮ ಭೂಮಿಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷಿಯಹಣ್ಣು ತೋಟದಲ್ಲಿ ಉದುರಿಹೋಗದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.


ಯುವಕನು ಯುವತಿಯನ್ನು ವರಿಸುವಂತೆ, ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.


ಅವರು ಯೆರೂಸಲೇಮಿನೊಳಗೆ ವಾಸಿಸುವರು; ಸತ್ಯಸಂಧತೆಯಿಂದಲೂ ಮತ್ತು ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು