Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 4:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಹೆಚ್ಚಿದ ಹಾಗೆಲ್ಲಾ ನನ್ನ ವಿರುದ್ಧ ಹೆಚ್ಚೆಚ್ಚಾಗಿ ಪಾಪಮಾಡುತ್ತಾ ಬಂದರು; ನಾನು ಅವರ ಮಾನವನ್ನು ಅವಮಾನವನ್ನಾಗಿ ಮಾರ್ಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಅವರ ಸಂತಾನ ಹೆಚ್ಚಿದ ಹಾಗೆಲ್ಲ ಅವರು ನನ್ನ ವಿರುದ್ಧ ಪಾಪಮಾಡುತ್ತಾ ಬಂದಿದ್ದಾರೆ. ಅವರ ಮಾನವನ್ನು ಅವಮಾನವನ್ನಾಗಿ ಮಾರ್ಪಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಹೆಚ್ಚಿದ ಹಾಗೆಲ್ಲಾ ನನಗೆ ಹೆಚ್ಚೆಚ್ಚಾಗಿ ಪಾಪಮಾಡುತ್ತಾ ಬಂದರು; ನಾನು ಅವರ ಮಾನವನ್ನು ಅವಮಾನಕ್ಕೆ ಮಾರ್ಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರು ಅಹಂಕಾರಿಗಳಾದರು. ನನ್ನ ವಿರುದ್ಧವಾಗಿ ಹೆಚ್ಚೆಚ್ಚಾಗಿ ಪಾಪ ಮಾಡಿದರು. ಆದ್ದರಿಂದ ಅವರ ಗೌರವವನ್ನು ನಾನು ಲಜ್ಜಾಸ್ಪದವನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯಾಜಕರು ಹೆಚ್ಚಿದ ಹಾಗೆಲ್ಲಾ ಅವರು ನನಗೆ ವಿರೋಧವಾಗಿ ಪಾಪಮಾಡಿದ್ದಾರೆ. ಆದ್ದರಿಂದ ನಾನು ಅವರ ಮಾನವನ್ನು ಅವಮಾನವನ್ನಾಗಿ ಮಾರ್ಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 4:7
15 ತಿಳಿವುಗಳ ಹೋಲಿಕೆ  

ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; ಹೊಟ್ಟೆ ತುಂಬಿದಾಗ ಅವರ ಮನಸ್ಸು ಉಬ್ಬಿಕೊಂಡಿತು; ಇದರಿಂದ ನನ್ನನ್ನು ಮರೆತುಬಿಟ್ಟರು.


ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.


ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


“ನೀವು ನನ್ನ ಮಾರ್ಗಗಳನ್ನು ಅನುಸರಿಸದೆ ನಿಮ್ಮ ಧರ್ಮನಿಯಮ ಉಪದೇಶದಲ್ಲಿ ಪಕ್ಷಪಾತ ತೋರಿಸಿದ್ದರಿಂದ ನಾನಂತೂ ನಿಮ್ಮನ್ನು ಎಲ್ಲಾ ಜನರ ಮುಂದೆ ಅವಮಾನ ಹೊಂದುವಂತೆ ಅವರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.”


ಇಸ್ರಾಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣುಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂಮಿಯು ಎಷ್ಟು ಒಳ್ಳೆಯದೋ, ಅಷ್ಟು ಒಳ್ಳೆಯ ವಿಗ್ರಹ ಸ್ತಂಭಗಳನ್ನು ನಿರ್ಮಾಣ ಮಾಡಿಕೊಂಡಿದೆ.


ಅವರು ಉಣ್ಣುತ್ತಿದ್ದರೂ ತೃಪ್ತಿ ದೊರೆಯದು, ಹಾದರ ಮಾಡುತ್ತಿದ್ದರೂ ಪ್ರಜಾಭಿವೃದ್ಧಿಯಾಗದು; ಯೆಹೋವನ ಕಡೆಗೆ ಗಮನಿಸುವುದನ್ನು ಬಿಟ್ಟುಬಿಟ್ಟಿದ್ದಾರಷ್ಟೆ.


ನೀನು ಮಾನವಂತನಲ್ಲ, ನಿನಗೆ ಸನ್ಮಾನವಲ್ಲಾ ಅವಮಾನ ಕಟ್ಟಿಟ್ಟ ಬುತ್ತಿ. ನೀನು ಕುಡಿ ಕುಡಿದು ನಗ್ನನಾಗು, ಯೆಹೋವನ ಬಲಗೈಯಲ್ಲಿರುವ ನಿನ್ನ ಪಾಪದ ಕೊಡ ತುಂಬಿ ಅವಮಾನವೇ ನಿನಗೆ ಸಲ್ಲುವುದು.


ಕಳ್ಳರ ಗುಂಪು ಒಬ್ಬನಿಗೆ ಹೊಂಚು ಹಾಕುವಂತೆ ಯಾಜಕರು ಗುಂಪಾಗಿ ದಾರಿಯಲ್ಲಿ ಹೊಂಚಿಕೊಂಡಿದ್ದು, ಶೆಕೆಮಿಗೆ ಯಾತ್ರೆ ಹೋಗುವವರನ್ನು ದೋಚಿ ಕೊಂದುಹಾಕುತ್ತಾರೆ; ಹೌದು, ಘೋರಕೃತ್ಯವನ್ನು ನಡೆಸುತ್ತಾರೆ.


ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ಮಿಚ್ಪದಲ್ಲಿ ಉರುಲಾಗಿಯೂ, ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.


ನಾವು ನಮ್ಮ ಪೂರ್ವಿಕರ ಕಾಲದಿಂದ ಇಂದಿನ ವರೆಗೂ ಮಹಾಪರಾಧಿಗಳೇ. ನಮ್ಮ ಪಾಪಗಳ ದೆಸೆಯಿಂದ ನಾವೂ, ನಮ್ಮ ಅರಸರೂ ಮತ್ತು ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಒಪ್ಪಿಸಲ್ಪಟ್ಟು ಈಗಿರುವಂತೆ ಕತ್ತಿಗೂ, ಸೆರೆಗೂ, ಸುಲಿಗೆಗೂ, ಅಪಮಾನಕ್ಕೂ ಗುರಿಯಾದೆವು.


ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.


ಎಫ್ರಾಯೀಮ್ಯರ ಮಹಿಮೆಯು ಪಕ್ಷಿಯಂತೆ ಹಾರಿಹೋಗುವುದು; ಯಾರೂ ಹೆರರು, ಗರ್ಭಿಣಿಯಾಗುವುದಿಲ್ಲ, ಗರ್ಭಧರಿಸರು.


ಅದು ಜಗಳಗಂಟ ಮಹಾರಾಜನಿಗೆ ಕಾಣಿಕೆಯಾಗಿ ಅಶ್ಶೂರಕ್ಕೆ ಒಯ್ಯಲ್ಪಡುವುದು. ಎಫ್ರಾಯೀಮಿಗೆ ಅವಮಾನವಾಗುವುದು, ಇಸ್ರಾಯೇಲ್ ತಾನು ಸಂಕಲ್ಪಿಸಿಕೊಂಡ ವಿಷಯಕ್ಕಾಗಿ ನಾಚಿಕೆಪಡುವುದು.


ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು