Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 7:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರಿಗೆ ಯುದ್ಧವನ್ನು ಕಲಿಸಿ, ತೋಳುಗಳನ್ನು ಬಲಪಡಿಸಿದ ನನಗೂ ವಿರುದ್ಧವಾಗಿ ಕೇಡನ್ನು ಕಲ್ಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಾನೇ ಅವರಿಗೆ ಯುದ್ಧಾಭ್ಯಾಸ ಮಾಡಿಸಿ, ಅವರ ಭುಜಬಲವನ್ನು ಬೆಳೆಸಿದರೂ ನನ್ನ ವಿರುದ್ಧ ಕೇಡನ್ನು ಕಲ್ಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರಿಗೆ ಯುದ್ಧವನ್ನು ಕಲಿಸಿ ತೋಳುಗಳನ್ನು ಬಲಪಡಿಸಿದ ನನಗೂ ವಿರುದ್ಧವಾಗಿ ಕೇಡನ್ನು ಕಲ್ಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನು ಅವರಿಗೆ ತರಬೇತಿಕೊಟ್ಟು ಅವರ ತೋಳುಗಳನ್ನು ಬಲಪಡಿಸಿದೆನು. ಆದರೆ ನನಗೆ ವಿರುದ್ಧವಾಗಿ ಅವರು ದುರಾಲೋಚನೆಯನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಾನು ಅವರ ತೋಳುಗಳನ್ನು ಬಂಧಿಸಿ ಬಲಪಡಿಸಿದ್ದೇನೆ. ಆದರೂ ಅವರು ನನಗೆ ವಿರುದ್ಧವಾಗಿ ಕೇಡು ಮಾಡಲು ಊಹಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 7:15
18 ತಿಳಿವುಗಳ ಹೋಲಿಕೆ  

ನೀವು ಯೆಹೋವನಿಗೆ ವಿರುದ್ಧವಾಗಿ ಯಾವರೀತಿಯ ಕುಯುಕ್ತಿಯನ್ನು ಕಲ್ಪಿಸುತ್ತೀರಿ? ಆತನು ಸಂಪೂರ್ಣವಾಗಿ ಹಾಳುಮಾಡುವನು; ಎರಡನೆಯ ಸಾರಿ ಅಪಾಯವು ತಲೆ ಎತ್ತದಂತೆ ಪೂರ್ಣವಾಗಿ ನಿಮ್ಮನ್ನು ನಾಶಮಾಡುವನು.


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.


ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನು ಮರೆತುಬಿಟ್ಟಿದ್ದೀರೋ? ಅದೇನೆಂದರೆ, “ನನ್ನ ಮಗನೇ, ಕರ್ತನ ಶಿಕ್ಷೆಯನ್ನು ಕಡೆಗಣಿಸಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.”


ನಾವು ದೇವಜ್ಞಾನಕ್ಕೆ ವಿರೋಧವಾಗಿ ಏಳುವ ಅಹಂಭಾವಗಳನ್ನು ಧ್ವಂಸಮಾಡಿ, ಪ್ರತಿಯೊಂದು ಆಲೋಚನೆಗಳನ್ನೂ ಕ್ರಿಸ್ತನಿಗೆ ವಿಧೇಯರಾಗುವಂತೆ ಸೆರೆಹಿಡಿದು,


ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.


ನೀನು ಪವಿತ್ರಾತ್ಮನ ಮೂಲಕವಾಗಿ ನಿನ್ನ ಸೇವಕನಾಗಿದ್ದ ನಮ್ಮ ಪಿತೃವಾದ ದಾವೀದನ ಬಾಯಿಂದ, “‘ಅನ್ಯಜನಗಳು ಏಕೆ ಆಕ್ರೋಶಗೊಂಡರು? ಜನಾಂಗಗಳವರು ಏಕೆ ವ್ಯರ್ಥಕಾರ್ಯಗಳನ್ನು ಯೋಚಿಸುವರು?


ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?


ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.


ಯಾಹುವೇ, ನೀನು ಯಾರನ್ನು ಶಿಕ್ಷಿಸಿ, ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು.


ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು, ಅವನು ಬಾಗಿದ ಗೋಡೆಯ ಹಾಗೆ ಮತ್ತು ಕುಸಿದ ಪ್ರಾಕಾರವೋ ಎಂಬಂತೆ ಅವನನ್ನು ಹೊಡೆದು ಕೆಡವಬೇಕೆಂದಿರುವುದು ಇನ್ನೆಷ್ಟರವರೆಗೆ?


ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ?


ಇಗೋ, ದೇವರು ಯಾರನ್ನು ಶಿಕ್ಷಿಸುವನೋ ಅವನು ಧನ್ಯನು; ಸರ್ವಶಕ್ತನಾದ ದೇವರ ದಂಡನೆಯನ್ನು ತಾತ್ಸಾರಮಾಡಬೇಡ.


ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್, ಇಸಾಕ್, ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪು ಮಾಡಿಕೊಂಡು ಅವರಿಗೆ ದಯೆ ತೋರಿಸಿ, ಅವರ ಮೇಲೆ ಅನುಕಂಪಗೊಂಡನು.


ಯೆಹೋವನು ಇಸ್ರಾಯೇಲರ ಮೇಲೆ ಕಟಾಕ್ಷವಿಟ್ಟು ಅವರಿಗೆ ಒಬ್ಬ ರಕ್ಷಕನನ್ನು ಅನುಗ್ರಹಿಸಿದನು. ಅವನ ಮುಖಾಂತರವಾಗಿ ಅವರು ಅರಾಮ್ಯರ ಕೈಯಿಂದ ಬಿಡುಗಡೆಯಾಗಿ ಮೊದಲಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.


ಅವರು ಕೇಡು ಕಲ್ಪಿಸುತ್ತಾರೆ, ಯಾವಾಗಲೂ ಜಗಳವೆಬ್ಬಿಸುತ್ತಾರೆ.


ಇಸ್ರಾಯೇಲೇ, ನಾನು ನಿನ್ನನ್ನು ನಾಶಮಾಡುವೆನು, ಯಾರು ನಿನ್ನನ್ನು ರಕ್ಷಿಸುವರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು