Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 7:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮನದಟ್ಟು ಮಾಡಿಕೊಳ್ಳುವುದಿಲ್ಲ; ಅವರ ದುಷ್ಕೃತ್ಯಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆದರೆ ಅವರ ದುಷ್ಕೃತ್ಯಗಳೆಲ್ಲ ಸರ್ವೇಶ್ವರಸ್ವಾಮಿಯ ಜ್ಞಾಪಕದಲ್ಲಿ ಇರುತ್ತವೆ ಎಂಬುದನ್ನು ಅವರು ಮನದಟ್ಟುಮಾಡಿಕೊಂಡಿಲ್ಲ. ಅವರ ನೀಚಕೃತ್ಯಗಳು ಅವರನ್ನು ಆವರಿಸಿಕೊಂಡಿವೆ; ನನ್ನ ಕಣ್ಮುಂದೆಯೇ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮಂದಟ್ಟುಮಾಡಿಕೊಳ್ಳುವದಿಲ್ಲ; ಅವರ ದುಷ್ಕೃತ್ಯಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ಅವರ ದುಷ್ಟತ್ವವನ್ನು ನೆನಪಿನಲ್ಲಿಟ್ಟಿರುತ್ತೇನೆಂಬುದನ್ನು ಅವರು ನಂಬುವದಿಲ್ಲ. ಅವರು ಮಾಡಿದ ದುಷ್ಟತನವು ಸುತ್ತಲೂ ಕಾಣಿಸುವದು. ನಾನು ಅವರ ಪಾಪಗಳನ್ನು ಸ್ಪಷ್ಟವಾಗಿ ನೋಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದರೆ ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕ ಮಾಡುತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನೆಸಿಕೊಳ್ಳುವುದಿಲ್ಲ. ಈಗ ಅವರ ಪಾಪಗಳು ಅವರನ್ನು ಸುತ್ತಿಕೊಂಡಿವೆ. ಅವು ನನ್ನ ಮುಖದ ಮುಂದೆ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 7:2
33 ತಿಳಿವುಗಳ ಹೋಲಿಕೆ  

ಮರೆಯಾಗಿರುವಂಥದ್ದು ವ್ಯಕ್ತವಾಗುವುದು. ರಹಸ್ಯವಾಗಿರುವಂಥದ್ದು ಪ್ರಕಟವಾಗುವುದು.


ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ, ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದಿ.


ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ, “ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ಮರೆತುಬಿಡುವುದಿಲ್ಲ”


ಯೆಹೋವನು ಈ ಜನರನ್ನು ಕುರಿತು, “ಇವರು ಪ್ರಯಾಣಿಕನ ಹಾಗೆ ಅಲೆಯುವುದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ. ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು” ಎಂದು ಹೇಳಿದ್ದಾನೆ.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.


ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.


ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ. ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆ ಮಾಡುವನು.


ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಪ್ರತಿಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ.


ನಾನು ಅವರ ನಡತೆಯನ್ನೆಲ್ಲಾ ದೃಷ್ಟಿಸುತ್ತೇನೆ, ಅದು ನನ್ನ ಮುಖಕ್ಕೆ ಮರೆಯಾಗಿಲ್ಲ; ಅವರ ಅಧರ್ಮವು ನನಗೆ ಗುಟ್ಟಾಗಿ ಇಲ್ಲ, ಪ್ರತ್ಯಕ್ಷವಾಗೇ ಇದೆ.


ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ, ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ.


ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.


ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ.


ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ


ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು.


ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ.


ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ.


ಆತನು ಮನುಷ್ಯನ ಮಾರ್ಗಗಳ ಮೇಲೆ ಕಣ್ಣಿಟ್ಟು, ಅವನ ಹೆಜ್ಜೆಗಳನ್ನೆಲ್ಲಾ ನೋಡುವನು.


ಅವರಿಗೆ ಜ್ಞಾನವಿದ್ದರೆ ಈ ಸಂಗತಿಗಳನ್ನೆಲ್ಲಾ ಗ್ರಹಿಸುತ್ತಿದ್ದರು; ತಮಗೆ ಅಂತ್ಯದಲ್ಲಿ ದುರವಸ್ಥೆ ಪ್ರಾಪ್ತವಾಗುವುದೆಂದು ತಿಳಿದುಕೊಳ್ಳುತ್ತಿದ್ದರು!


“ಆದರೆ ನೀವು ಹಾಗೆ ಮಾಡದೆ ಹೋದರೆ, ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ತಿಳಿದುಕೊಳ್ಳಿರಿ.


“ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿ ಮಾಡಿ ಮಾಂಸವನ್ನು ಸುಟ್ಟು ತಿಂದೆನಲ್ಲಾ, ಉಳಿದ ಭಾಗದಿಂದ ಅಸಹ್ಯವಾದ ವಿಗ್ರಹವನ್ನು ನಾನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆ ತಾರರು.


ಯೆಹೋವನೇ, ನಿನ್ನ ಜನರು ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಹುಡುಕಿದರು. ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿದರು.


ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ಹಾಗೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ. ಅದು ಅವರ ಹೃದಯದ ಹಲಗೆಯಲ್ಲಿಯೂ, ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ.


“ನೀವು, ನಿಮ್ಮ ಪೂರ್ವಿಕರು, ನಿಮ್ಮ ಅರಸರು, ನಿಮ್ಮ ಪ್ರಧಾನರು, ಸಾಮಾನ್ಯ ಜನರು, ನೀವೆಲ್ಲರೂ ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ಹಾಕಿದ ಧೂಪವು ಯೆಹೋವನ ನೆನಪಿನಲ್ಲಿ ಇಲ್ಲವೋ, ಅದು ಆತನ ಜ್ಞಾಪಕಕ್ಕೆ ಬರಲಿಲ್ಲವೋ?


ಜನರೂ, ಯಾಜಕರೂ ಒಂದೇ; ಅವರ ದುಷ್ಕಾರ್ಯಗಳಿಗೆ ಅವರನ್ನು ದಂಡಿಸುವೆನು, ಅವರ ದುಷ್ಕೃತ್ಯಗಳನ್ನು ಅವರಿಗೆ ಕಟ್ಟುವೆನು.


ಅವರ ದುಷ್ಟತನವು ಗಿಲ್ಗಾಲಿನಲ್ಲಿ ತುಂಬಿದೆ; ಅಲ್ಲೇ ನನ್ನ ದ್ವೇಷಕ್ಕೆ ಗುರಿಯಾಗಿದ್ದಾರೆ; ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರನ್ನು ನನ್ನ ನಿವಾಸದೊಳಗಿಂದ ಓಡಿಸಿಬಿಡುವೆನು; ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲರೂ ದ್ರೋಹಿಗಳೇ ಸರಿ.


ಯೆಹೋವನು ಯೆಹೂದದ ಮೇಲೆ ವ್ಯಾಜ್ಯಕ್ಕೆ ತೊಡಗಿದ್ದಾನೆ, ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು, ಅದರ ದುಷ್ಕೃತ್ಯಗಳಿಗೆ ಪ್ರತಿಕಾರಮಾಡುವನು.


“ನೀನು ಇಲ್ಲಿಂದ ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದನ್ನು ಕಟುವಾಗಿ ಖಂಡಿಸಿ ಹೇಳು, ಏಕೆಂದರೆ ಅಲ್ಲಿರುವ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ” ಎಂದು ಅಪ್ಪಣೆಮಾಡಿದನು.


ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವುದೇ ಇಲ್ಲ” ಅಂದುಕೊಳ್ಳುತ್ತಾನೆ.


ಅಮ್ಮೋನೇ, ಪ್ರವಾದಿಗಳೆಂದು ಹೇಳಿಕೊಳ್ಳುತ್ತಿರುವ ನಿನ್ನವರು ದರ್ಶನವನ್ನು ನೋಡಿದೆವು ಎಂದು ಸುಳ್ಳು ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಸಮಯವು ಹತ್ತಿರವಾಗಿ, ಅಪರಾಧದ ಕಡೆಗಾಲವು ಸಂಭವಿಸಿ, ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿ ಬೀಳುವೆ.


ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು