Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 8:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರು ನನ್ನನ್ನು, ‘ನಮ್ಮ ದೇವರೇ, ಇಸ್ರಾಯೇಲರಾದ ನಾವು ನಿನ್ನನ್ನು ತಿಳಿದವರಾಗಿದ್ದೇವೆ’ ಎಂದು ಕೂಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನನ್ನನ್ನು ತಮ್ಮ ದೇವರೆಂದೂ ತಾವು ದೇವಜನರೆಂದೂ ನನ್ನನ್ನು ಅರಿತವರೆಂದೂ ಕೂಗಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವರು ನನ್ನನ್ನು - ನಮ್ಮ ದೇವರೇ, ಇಸ್ರಾಯೇಲ್ಯರಾದ ನಾವು ನಿನ್ನನ್ನು ತಿಳಿದವರಾಗಿದ್ದೇವೆ ಎಂದು ಕೂಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ‘ನಮ್ಮ ದೇವರೇ, ಇಸ್ರೇಲಿನಲ್ಲಿರುವ ನಾವು ನಿನ್ನನ್ನು ಅರಿತಿದ್ದೇವೆ’ ಎಂದು ಅವರು ಕಿರುಚುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇಸ್ರಾಯೇಲಿನವರು, ‘ನನ್ನ ದೇವರೇ, ನಾವು ನಿಮ್ಮನ್ನು ತಿಳಿದಿದ್ದೇವೆ,’ ಎಂದು ನನಗೆ ಕೂಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 8:2
14 ತಿಳಿವುಗಳ ಹೋಲಿಕೆ  

ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ.


“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.


ಒಬ್ಬನು, “ನಾನು ಆತನನ್ನು ಬಲ್ಲೆನು” ಎಂದು ಹೇಳಿ ಆತನ ಆಜ್ಞೆಗಳಂತೆ ನಡೆಯದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವೆಂಬುದು ಅವನಲ್ಲಿ ಇಲ್ಲ.


ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು


ಅನಂತರ ಉಳಿದ ಕನ್ನಿಕೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ’ ಅಂದರು.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.


‘ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ’ ಎಂಬ ಸುಳ್ಳು ಮಾತುಗಳ ಮೇಲೆ ಭರವಸವಿಡಬೇಡಿರಿ.


ಆದರೂ ಯೇಹುವು ಇಸ್ರಾಯೇಲರನ್ನು ಬೇತೇಲ್ ಮತ್ತು ದಾನ್ ಊರುಗಳಲ್ಲಿದ್ದ ಚಿನ್ನದ ಬಸವನನ್ನು ಪೂಜಿಸಿ ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಅದನ್ನು ಅನುಸರಿಸಿದನು.


ಯೇಹುವು ಅವನಿಗೆ, “ನನ್ನ ಜೊತೆಯಲ್ಲಿ ಬಂದು, ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು” ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು.


ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ, ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೆ ನನ್ನನ್ನು ಆಶ್ರಯಿಸುವರು.


ಇಸ್ರಾಯೇಲರು ಮೇಲನ್ನು ತಳ್ಳಿಬಿಟ್ಟಿದ್ದಾರೆ; ಶತ್ರುವು ಅವರನ್ನು ಹಿಂದಟ್ಟುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು