Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 8:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಬಸವನೂ ಇಸ್ರಾಯೇಲಿನ ಕೈಕೆಲಸ; ಶಿಲ್ಪಿಯು ಅದನ್ನು ರೂಪಿಸಿದನು; ಅದು ದೇವರಲ್ಲ; ಸಮಾರ್ಯದ ಬಸವನು ಚೂರುಚೂರಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ಬಸವ ಇಸ್ರಯೇಲಿನ ಕೈಕೆಲಸವೇ. ಶಿಲ್ಪಿ ಕೊಟ್ಟ ರೂಪವದು; ಅದು ದೇವರಲ್ಲ. ಸಮಾರ್ಯದ ಬಸವನು ನುಚ್ಚುನೂರಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆ ಬಸವನೂ ಇಸ್ರಾಯೇಲಿನ ಕೈಕೆಲಸ; ಶಿಲ್ಪಿಯು ಅದನ್ನು ರೂಪಿಸಿದನು; ಅದು ದೇವರಲ್ಲ; ಸಮಾರ್ಯದ ಬಸವನು ಚೂರುಚೂರಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ಇಸ್ರಾಯೇಲಿನಿಂದ ಬಂದವರು. ಕಮ್ಮಾರನು ಈ ಬಸವ ವಿಗ್ರಹವನ್ನು ಮಾಡಿದನು. ಅದು ದೇವರಲ್ಲ, ಆದರೆ ಸಮಾರ್ಯದ ಬಸವನನ್ನು ಚೂರುಚೂರಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 8:6
22 ತಿಳಿವುಗಳ ಹೋಲಿಕೆ  

ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಹೆಚ್ಚುಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ನೋಡುತ್ತಿದ್ದೀರಿ, ಕೇಳುತ್ತಿದ್ದೀರಿ.


“ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು.


ವಿಗ್ರಹ ಕೆತ್ತುವವನ ವಿಗ್ರಹವಾಗಲಿ ಅಥವಾ ಎರಕದಿಂದ ಮಾಡಿದ ಗೊಂಬೆಗಳಿಂದಾಗಲಿ ಲಾಭವೇನು? ಹಾಗೆ ದೇವರುಗಳನ್ನು ರೂಪಿಸುವವರು ಸುಳ್ಳನ್ನು ಬಿತ್ತುವವರು; ಏಕೆಂದರೆ, ಆ ನಿರ್ಜೀವ ವಿಗ್ರಹವನ್ನು ನಿರ್ಮಿಸಿದವನು ತನ್ನ ಕೈಕೆಲಸದ ಮೇಲೆಯೇ ಭರವಸೆ ಇಟ್ಟಿದ್ದಾನೆ.’


ಇಸ್ರಾಯೇಲರ ಮನಸ್ಸು ನುಣುಚಿಕೊಳ್ಳುತ್ತದೆ; ಈಗ ದಂಡನೆಗೆ ಈಡಾಗಿದ್ದಾರೆ. ಯೆಹೋವನೇ ಅವರ ಯಜ್ಞವೇದಿಗಳನ್ನು ಮುರಿದುಬಿಡುವನು. ಅವರ ವಿಗ್ರಹ ಸ್ತಂಭಗಳನ್ನು ಹಾಳುಮಾಡುವನು.


“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.


ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.


ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.


ಇಸ್ರಾಯೇಲ್ ರಾಜರು ಸಮಾರ್ಯದ ಪಟ್ಟಣಗಳಲ್ಲಿ ಪೂಜಾಸ್ಥಳಗಳನ್ನು ಗುಡಿಗಳನ್ನು ಕಟ್ಟಿಸಿ, ಯೆಹೋವನ ಕೋಪಕ್ಕೆ ಕಾರಣವಾದಂಥವುಗಳನ್ನು ಯೋಷೀಯನು ತೆಗೆದುಕೊಂಡು, ಬೇತೇಲಿನಲ್ಲಿ ನಾಶಮಾಡಿದ ಹಾಗೆ ಅವೆಲ್ಲವನ್ನು ನಾಶಮಾಡಿದನು.


ಇದಲ್ಲದೆ, ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ನಿರ್ಮಿಸಿದ್ದ ಪೂಜಾಸ್ಥಳವನ್ನೂ, ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿನು.


ಆಗ ಇಸ್ರಾಯೇಲ್ ವಂಶದವರು ತಮಗೆ ಭರವಸವಾದ ಬೇತೇಲಿನಿಂದ ಆಶಾಭಂಗಪಟ್ಟಂತೆ ಮೋವಾಬ್ಯರು ಕೆಮೋಷಿನಿಂದ ಆಶಾಭಂಗಪಡುವರು.


ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ, ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ; ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತನಾಡಿಸುತ್ತಾರೆ, ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ದಿಸುತ್ತಾರೆ.


ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ; ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ.


ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿ ಕುರಿಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಯೆಹೋವನ ರಾಜ್ಯಕ್ಕೆ ವಿರುದ್ಧವಾಗಿ ನಿಂತು ಗೆಲ್ಲಬಹುದೆಂದು ನೆನಸುತ್ತೀರೋ?


ಅದರ ಎರಕದ ಬೊಂಬೆಗಳನ್ನೆಲ್ಲಾ ಪುಡಿಪುಡಿ ಮಾಡುವೆನು. ಅದರ ಸಮಸ್ತ ಸಂಪಾದನೆಯು ಸುಟ್ಟುಹೋಗುವುದು. ಅದರ ಸಕಲ ವಿಗ್ರಹಗಳನ್ನು ಹಾಳುಮಾಡುವೆನು. ಅದು ವೇಶ್ಯಾವಾಟಿಕೆಯಿಂದ ಸಂಪಾದನೆಯಾಗಿ ಕೂಡಿಸಿಟ್ಟುಕೊಂಡವುಗಳು ಹಾಗೂ ವೇಶ್ಯಾವಾಟಿಕೆಯ ಸಂಪಾದನೆಯಾಗಿಯೇ ಪರರ ಪಾಲಾಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು