Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 9:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಎಫ್ರಾಯೀಮ್ಯರಿಗೆ ಘಾತವಾಗಿದೆ; ಅವರ ವಂಶಮೂಲವು ಒಣಗಿಹೋಗಿದೆ. ಅವರು ಫಲಹೀನರಾಗುವರು; ಹೌದು, ಅವರು ಮಕ್ಕಳನ್ನು ಹೆತ್ತರೂ ಅವರ ಗರ್ಭದ ಪ್ರಿಯಫಲವನ್ನು ಸಾಯಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಎಫ್ರಯಿಮಿಗೆ ಏಟು ಬಿದ್ದಿದೆ; ಅವರ ವಂಶದ ಬೇರು ಬತ್ತಿಹೋಗಿದೆ. ಅವರು ಫಲಹೀನರಾಗಿದ್ದಾರೆ. ಮಕ್ಕಳನ್ನು ಹೆತ್ತರೂ ಅವಳ ಕರುಳ ಕುಡಿಯನ್ನು ಕತ್ತರಿಸಿಹಾಕುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಎಪ್ರಾಯೀಮ್ಯರಿಗೆ ಘಾತವಾಗಿದೆ; ಅವರ ವಂಶಮೂಲವು ಒಣಗಿಹೋಗಿದೆ; ಅವರು ಫಲಹೀನರಾಗುವರು; ಹೌದು, ಅವರು ಮಕ್ಕಳನ್ನು ಹೆತ್ತರೂ ಅವರ ಗರ್ಭದ ಪ್ರಿಯಫಲವನ್ನು ಸಾಯಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಎಫ್ರಾಯೀಮ್ ಶಿಕ್ಷಿಸಲ್ಪಡುವುದು. ಅದರ ಬೇರು ಒಣಗುತ್ತಲಿದೆ. ಇನ್ನು ಅವರಿಗೆ ಮಕ್ಕಳಾಗದು. ಒಂದುವೇಳೆ ಮಕ್ಕಳಾದಲ್ಲಿ ಅವರ ದೇಹದಿಂದ ಬರುವ ಆ ಅಮೂಲ್ಯ ಶಿಶುವನ್ನು ನಾನು ಸಾಯಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಎಫ್ರಾಯೀಮು ಹೊಡೆತಕ್ಕೆ ಒಳಗಾಗಿದೆ. ಅವರ ಬೇರು ಒಣಗಿಹೋಗಿದೆ, ಅವರು ಫಲವನ್ನು ಕೊಡುವುದಿಲ್ಲ, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 9:16
10 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು, ‘ಇಗೋ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಪಡಿಸುವೆನು, ನೀವು ಬಿಟ್ಟು ಬಂದಿರುವ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸೇನಾದೀಶ್ವರನಾದ ಯೆಹೋವನು ನುಡಿದಿದ್ದಾರೆ


ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ, ಇಸ್ರಾಯೇಲರ ಸದಮಲಸ್ವಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ, ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು.


“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.


ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲರ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟು ಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.


ಎಫ್ರಾಯೀಮು ವ್ಯರ್ಥಾಚಾರಗಳನ್ನು ಅನುಸರಿಸಲು ಮನಸ್ಸುಮಾಡಿದ ಕಾರಣ, ಅದು ದೇವರ ನ್ಯಾಯತೀರ್ಪಿಗೆ ಗುರಿಯಾಗಿ ಹಿಂಸಿಸಲ್ಪಟ್ಟಿದೆ, ಜಜ್ಜಲ್ಪಟ್ಟಿದೆ.


ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವುದು.


ಅವನ ವಂಶವೃಕ್ಷದ ಬೇರುಗಳು ಒಣಗುವುದು, ಅದರ ರೆಂಬೆಯು ಮೇಲೆ ಬಾಡುವುದು.


ಅವುಗಳ ಹಿಂದೆ ಮೂಡಣ ಗಾಳಿಯಿಂದ ಬತ್ತಿ ಒಣಗಿ ಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.


ಮನೆಯ ಹೊರಗೆ ಕತ್ತಿಯೂ, ಒಳಗೆ ಭಯವೂ ಇರುವುದು. ಯೌವನಸ್ಥರು, ಕನ್ಯೆಯರು, ಮೊಲೆಕೂಸುಗಳು, ನರೇತಲೆಯವರು ಇವರೆಲ್ಲರೂ ಕತ್ತಿಯಿಂದ ಕೊಲ್ಲಲ್ಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು