Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 9:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಹಾ, ಅವರು ವಿನಾಶದ ದೇಶವನ್ನು ಬಿಟ್ಟುಹೋಗುವರು; ಐಗುಪ್ತವು ಅವರಿಗೆ ಸ್ಮಶಾನವಾಗುವುದು, ಮೋಫ್ ಪಟ್ಟಣವು ಅವರನ್ನು ಹೂಣಿಡುವುದು; ಅವರ ಇಷ್ಟದ ಬೆಳ್ಳಿಯ ಒಡವೆಗಳು ಮುಳ್ಳು ಪೊದೆಗಳ ಪಾಲಾಗುವವು; ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ವಿನಾಶದ ದೇಶವನ್ನು ಅವರು ಬಿಟ್ಟುಹೋಗಬಹುದು. ಆದರೆ ಈಜಿಪ್ಟ್ ಅವರಿಗೆ ಸ್ಮಶಾನವಾಗುವುದು.ಮೋಫ್ ಪಟ್ಟಣದಲ್ಲಿ ಅವರಿಗೆ ಸಮಾಧಿಯಾಗುವುದು. ಅವರ ಬೆಳ್ಳಿಯ ಒಡವೆಗಳು ಮುಳ್ಳುಪೊದೆಗಳ ಪಾಲಾಗುವುವು; ಅವರ ಗುಡಾರಗಳಲ್ಲಿ ಕಳೆಗಳು ಬೆಳೆಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಹಾ, ಅವರು ಹಾಳಾದ ದೇಶವನ್ನು ಬಿಟ್ಟುಹೋಗುವರು; ಐಗುಪ್ತವು ಅವರಿಗೆ ಶ್ಮಶಾನವಾಗುವದು, ಮೋಫ್ ಪಟ್ಟಣವು ಅವರನ್ನು ಹೂಣಿಡುವದು; ಅವರ ಇಷ್ಟದ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು; ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಶತ್ರುಗಳು ಇಸ್ರೇಲರಿಂದ ಎಲ್ಲವನ್ನು ದೋಚಿಕೊಂಡು ಹೋದುದರಿಂದ ಇಸ್ರೇಲರು ಬಿಟ್ಟು ಹೊರಟರು. ಈಜಿಪ್ಟ್ ಅವರನ್ನು ಒಟ್ಟಿಗೆ ಸೇರಿಸಿಕೊಳ್ಳುವುದು. ಮೆಂಫಿಸ್ ಪಟ್ಟಣವು ಅವರನ್ನು ಹೂಳಿಡುವದು. ಅವರ ಬೆಳ್ಳಿಯ ನಿಕ್ಷೇಪದ ಮೇಲೆ ಕಳೆ ಬೆಳೆಯುವದು. ಇಸ್ರೇಲರು ವಾಸಿಸಿದ್ದಲ್ಲಿ ಮುಳ್ಳಿನ ಗಿಡಗಳು ಬೆಳೆಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇಗೋ, ನಾಶನದಿಂದ ಅವರು ತಪ್ಪಿಸಿಕೊಂಡರೂ ಈಜಿಪ್ಟ್ ಅವರನ್ನು ಕೂಡಿಸುವುದು. ಮೋಫ್ ಪಟ್ಟಣವು ಅವರನ್ನು ಹೂಳುವುದು. ಅವರ ಬೆಳ್ಳಿಯ ಬೊಕ್ಕಸಗಳು ಮುಳ್ಳು ಪೊದೆಗಳ ಪಾಲಾಗುವುವು. ಮುಳ್ಳುಗಿಡಗಳು ಅವರ ಗುಡಾರಗಳನ್ನು ಆವರಿಸಿಕೊಂಡಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 9:6
32 ತಿಳಿವುಗಳ ಹೋಲಿಕೆ  

ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು. ಮುಳ್ಳುಗಿಡಗಳೂ, ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು, “ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ” ಎಂದು ಕೂಗಿಕೊಳ್ಳುವರು.


ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.


ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು. ಎಫ್ರಾಯೀಮ್ಯರು ಐಗುಪ್ತಕ್ಕೆ ಹಿಂದಿರುಗುವರು, ಅಶ್ಶೂರದಲ್ಲಿ ಅವರು ಹೊಲಸಾದ ಆಹಾರವನ್ನು ತಿನ್ನುವರು.


ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು.


ಅತ್ತಿತ್ತ ತಿರುಗಿಕೊಳ್ಳುತ್ತಾರೆ, ದೇವರ ಕಡೆಗೆ ತಿರುಗಿಕೊಳ್ಳುವುದಿಲ್ಲ; ಮೋಸದ ಬಿಲ್ಲಿಗೆ ಸಮಾನರಾಗಿದ್ದಾರೆ. ಅವರ ಮುಖಂಡರು ತಮ್ಮ ನಾಲಿಗೆಯ ಸೊಕ್ಕಿನ ನಿಮಿತ್ತ ಖಡ್ಗದಿಂದ ಹತರಾಗಿ ಬೀಳುವರು; ಅವರ ಸೋಲು ಐಗುಪ್ತದೇಶದ ಹಾಸ್ಯಕ್ಕೆ ಆಸ್ಪದವಾಗುವುದು.


ಆಗ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷಿಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ, ಮುಳ್ಳು ಮತ್ತು ದತ್ತೂರಿಗಳಿಂದ ಮುಚ್ಚಿಕೊಂಡು ಹೋಗುವುದು.


ಗುಬ್ಬಿಗಳಂತೆ ಐಗುಪ್ತದಿಂದಲೂ, ಪಾರಿವಾಳಗಳಂತೆ ಅಶ್ಶೂರದಿಂದಲೂ ಅದರುತ್ತಾ ತ್ವರೆಪಡುವರು; ಅವರು ತಮ್ಮ ತಮ್ಮ ನಿವಾಸಗಳಲ್ಲಿ ವಾಸಿಸುವಂತೆ ಮಾಡುವೆನು; ಇದು ಯೆಹೋವನ ನುಡಿ.


ಅವರು ನನ್ನಿಂದ ಅಗಲಿ ಹೋಗಿದ್ದಾರೆ, ಹಾಳಾಗಲಿ! ನನಗೆ ದ್ರೋಹಮಾಡಿದ್ದಾರೆ, ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದು ಇರುವಾಗಲೂ ನನ್ನ ವಿಷಯವಾಗಿ ಸುಳ್ಳಾಡಿದ್ದಾರೆ, ಅವರನ್ನು ಹೇಗೆ ಉದ್ಧರಿಸಲಿ!


ಅಲ್ಲಿನ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು, ಅದರ ಕೋಟೆಗಳಲ್ಲಿ ಮುಳ್ಳುಗಿಡಗಳೂ, ದತ್ತೂರಿಯೂ ಹಬ್ಬಿಕೊಳ್ಳುವವು. ಅದು ನರಿಗಳಿಗೆ ಗುಹೆಯಾಗಿಯೂ, ಉಷ್ಟ್ರಪಕ್ಷಿಗಳಿಗೆ ನಿವಾಸವಾಗಿಯೂ ಇರುವುದು.


ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉತ್ಸಾಹದಿಂದ ಕೂಡಿದ್ದ ಎಲ್ಲಾ ಮನೆಗಳ ಮತ್ತು ಪಟ್ಟಣಗಳಲ್ಲೂ ಮುಳ್ಳುಗಿಡಗಳು ಹುಟ್ಟಿಕೊಂಡಿವೆ.


ಇಸ್ರಾಯೇಲರೇ, ತುಂಬಿತುಳುಕುವ ಯೂಫ್ರೆಟಿಸ್ ನದಿಯಿಂದ ಐಗುಪ್ತ ದೇಶದ ನದಿಯವರೆಗೆ ಯೆಹೋವನು ತೆನೆಗಳನ್ನು ಒಕ್ಕುವ ದಿನವು ಬರುತ್ತದೆ; ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಆರಿಸುವನು.


ಚೋಯನಿನ ಪ್ರಭುಗಳು ಮೂರ್ಖರಾಗಿದ್ದಾರೆ. ನೋಫಿನ ಪ್ರಧಾನರು ಮೋಸ ಹೋಗಿದ್ದಾರೆ. ಐಗುಪ್ತದ ಕುಲಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿದ್ದಾರೆ.


ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.


ಆಹಾ, ಮುಳ್ಳುಗಿಡಗಳು ಅದರಲ್ಲಿ ಹರಡಿಕೊಂಡಿದ್ದವು, ಕಳೆಗಳು ಅದನ್ನು ಮುಚ್ಚಿದ್ದವು, ಅದರ ಕಲ್ಲಿನ ಗೋಡೆಯು ಹಾಳಾಗಿತ್ತು.


ನೀರಿನ ಬುಗ್ಗೆಗಳನ್ನು ಒಣನೆಲವಾಗುವಂತೆಯೂ, ಫಲಭೂಮಿಯನ್ನು ಉಪ್ಪು ನೆಲವಾಗುವಂತೆಯೂ ಮಾಡಿದನು.


ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು.


ಇಸ್ರಾಯೇಲರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.


ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.


ನೀವು ಯಾವ ಸ್ಥಳದಲ್ಲಿ ವಾಸಮಾಡಲು ಅಪೇಕ್ಷಿಸಿ ಹೋಗುತ್ತೀರೋ ಆ ಸ್ಥಳದಲ್ಲೇ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವಿರಿ ಎಂದು ಖಂಡಿತವಾಗಿ ತಿಳಿಯಿರಿ” ಎಂದು ಹೇಳಿದನು.


ಐಗುಪ್ತ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ಪಟ್ಟಣಗಳಲ್ಲಿಯೂ, ಪತ್ರೋಸ್ ಪ್ರಾಂತ್ಯದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ,


“ಐಗುಪ್ತದಲ್ಲಿ ಪ್ರಕಟಿಸಿರಿ, ಮಿಗ್ದೋಲ್, ತಹಪನೇಸ್, ನೋಫ್, ಎಂಬ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ, ‘ಐಗುಪ್ತವೇ, ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ’ ಎಂದು ಸಾರಿರಿ.


ಐಗುಪ್ತದಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೋ; ನೋಫ್ ಪಟ್ಟಣವು ಹಾಳಾಗಿ ಸುಟ್ಟು ನಿರ್ಜನವಾಗುವುದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನೋಫಿನ ವಿಗ್ರಹಗಳನ್ನೆಲ್ಲ ಒಡೆದು ಕೊನೆಗಾಣಿಸುವೆನು; ಐಗುಪ್ತ ದೇಶದಲ್ಲಿ ಇನ್ನು ಯಾವ ಅರಸನೂ ಇರಲಾರನು; ನಾನು ಆ ದೇಶಕ್ಕೆ ಭಯವನ್ನು ಉಂಟುಮಾಡುವೆನು.


ನಾನು ಐಗುಪ್ತಕ್ಕೆ ಕಿಚ್ಚನ್ನು ಹತ್ತಿಸಲು ಸೀನು ಪ್ರಾಣ ಸಂಕಟಪಡುವುದು; ನೋಪುರವು ಭಂಗಕ್ಕೆ ಈಡಾಗುವುದು; ನೋಫಿನ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.


ಹೀಗಿರಲು, ಆಹಾ, ನಾನು ಅವಳ ದಾರಿಗೆ ಮುಳ್ಳುಬೇಲಿ ಹಾಕುವೆನು, ತನಗೆ ಬೇಕಾದ ಹಾದಿಗಳನ್ನು ಹಿಡಿಯದಂತೆ ಅವಳಿಗೆ ಅಡ್ಡಗೋಡೆ ಕಟ್ಟುವೆನು.


ಎಫ್ರಾಯೀಮು ಬುದ್ಧಿ ವಿವೇಕಗಳಿಲ್ಲದ ಪಾರಿವಾಳದಂತಿದೆ; ಅದರ ಜನರು ಐಗುಪ್ತವನ್ನು ಕೂಗುತ್ತಾರೆ, ಅಶ್ಶೂರಕ್ಕೆ ಹೊರಡುತ್ತಾರೆ.


ಯೆರುಸಲೇಮ್ ಜಿಲ್ಲೆಯ ಮಾರುಕಟ್ಟೆಯಲ್ಲಿ ವಾಸಿಸುವವರೇ, ಕೂಗಿರಿ, ಏಕೆಂದರೆ ಎಲ್ಲಾ ವರ್ತಕರ ಜನರೆಲ್ಲಾ ಹಾಳಾದರು, ಬೆಳ್ಳಿಯ ವ್ಯಾಪಾರಿಗಳೆಲ್ಲರೂ ನಾಶವಾದರು.


ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು.


ಐಗುಪ್ತಕ್ಕೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಯೆಹೂದದ ಉಳಿದ ಜನರನ್ನು ನಾನು ಹಿಡಿದು ನಾಶಮಾಡುವೆನು; ಐಗುಪ್ತದಲ್ಲೇ ಒರಗಿ ಹೋಗುವರು; ಖಡ್ಗ ಮತ್ತು ಕ್ಷಾಮಗಳಿಂದ ನಾಶವಾಗುವರು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಖಡ್ಗ ಮತ್ತು ಕ್ಷಾಮಗಳಿಂದ ಸತ್ತು ಅಪವಾದ, ಶಾಪ, ನಿಂದೆಗೆ ಮತ್ತು ದೂಷಣೆಗಳಿಗೆ ಗುರಿಯಾಗುವರು.


ನಾನು ಯೆರೂಸಲೇಮಿನವರನ್ನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸಿದಂತೆ ಐಗುಪ್ತದಲ್ಲಿ ವಾಸಿಸುವವರನ್ನೂ ದಂಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು