Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:2 - ಕನ್ನಡ ಸತ್ಯವೇದವು C.L. Bible (BSI)

2 ಆದುದರಿಂದ ಅವನ ಸೇವಕರು, “ಒಡೆಯರೇ, ಅರಸರೇ, ತಮ್ಮ ಸನ್ನಿಧಿಯಲ್ಲಿದ್ದುಕೊಂಡು ತಮಗೆ ಶುಶ್ರೂಷೆಮಾಡಲು ಒಬ್ಬ ಕನ್ನಿಕೆಯನ್ನು ಹುಡುಕಬೇಕಾಗಿದೆ. ಆಕೆ ನಮ್ಮ ಒಡೆಯರೂ ಅರಸರೂ ಆದ ತಮ್ಮ ಮಗ್ಗುಲಲ್ಲೇ ಮಲಗಿ ತಮ್ಮನ್ನು ಬೆಚ್ಚಗಿರಿಸುವಳು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆದುದರಿಂದ ಅವನ ಸೇವಕರು ಅವನಿಗೆ, “ನಮ್ಮ ಒಡೆಯನಾದ ಅರಸನಿಗೋಸ್ಕರ ಒಬ್ಬ ಕನ್ಯೆಯನ್ನು ಹುಡುಕಿತರುವೆವು. ಆಕೆಯು ಅರಸನ ಸನ್ನಿಧಿಯಲ್ಲಿದ್ದುಕೊಂಡು ನಿನ್ನನ್ನು ಪರಾಂಬರಿಸಬೇಕು. ಆಕೆಯು ನಮ್ಮ ಒಡೆಯನಾದ ಅರಸನ ಪಕ್ಕದಲ್ಲಿ ಮಲಗುವುದರಿಂದ ನಿಮಗೆ ಬೆಚ್ಚಗಾಗುವುದು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆದದರಿಂದ ಅವನ ಸೇವಕರು ಅವನಿಗೆ - ನಮ್ಮ ಒಡೆಯನಾದ ಅರಸನಿಗೋಸ್ಕರ ಒಬ್ಬ ಕನ್ಯೆಯನ್ನು ಹುಡುಕತಕ್ಕದ್ದು; ಆಕೆಯು ಅರಸನ ಸನ್ನಿಧಿಯಲ್ಲಿದ್ದುಕೊಂಡು ಅವನನ್ನು ಪರಾಂಬರಿಸಬೇಕು. ಆಕೆಯು ನಮ್ಮ ಒಡೆಯನಾದ ಅರಸನ ಮಗ್ಗುಲಲ್ಲಿ ಮಲಗುವದಾದರೆ ಅವನಿಗೆ ಬೆಚ್ಚಗಾಗುವದು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದ್ದರಿಂದ ಅವನ ಸೇವಕರು ಅವನಿಗೆ, “ನಾವು ನಿನ್ನ ಆರೈಕೆಗಾಗಿ ಒಬ್ಬ ಯುವಕನ್ನಿಕೆಯನ್ನು ಹುಡುಕುವೆವು. ಅವಳು ನಿನ್ನನ್ನು ಒತ್ತರಿಸಿಕೊಂಡು ಮಲಗಿ ಬೆಚ್ಚಗಿಡುತ್ತಾಳೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದ್ದರಿಂದ ಅವನ ಸೇವಕರು ಅವನಿಗೆ, “ಅರಸ, ನಮ್ಮ ಒಡೆಯನಿಗೋಸ್ಕರ ಕನ್ನಿಕೆಯನ್ನು ಹುಡುಕುವೆವು. ಅವಳು ಅರಸನ ಬಳಿಯಲ್ಲಿ ನಿಂತು, ಅವನನ್ನು ಜೋಪಾನ ಮಾಡಲಿ. ಅರಸನಾದ ನಮ್ಮ ಒಡೆಯನಿಗೆ ಬೆಚ್ಚಗೆ ಆಗುವ ಹಾಗೆ, ಅವನ ಮಗ್ಗುಲಲ್ಲಿ ಅವಳು ಮಲಗಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:2
11 ತಿಳಿವುಗಳ ಹೋಲಿಕೆ  

ನೆರೆಯವನನ್ನು ನಂಬಬೇಡ, ಆಪ್ತನಲ್ಲಿ ಭರವಸೆ ಇಡಬೇಡ. ನಿನ್ನೊಡನೆ ಮಲಗುವ ಮಡದಿಯೊಂದಿಗೂ ಬಾಯಿಬಿಡಬೇಡ.


ಇದಲ್ಲದೆ, ಒಬ್ಬನ ಮಗ್ಗುಲಲ್ಲಿ ಇನ್ನೊಬ್ಬನು ಮಲಗಿಕೊಂಡರೆ ಇಬ್ಬರಿಗೂ ಬೆಚ್ಚಗಾದೀತು!


ಆಗ ಸಾರಯಳು ಅಬ್ರಾಮನಿಗೆ, “ನನಗೆ ಅನ್ಯಾಯವಾಗುತ್ತಿದೆ; ಇದಕ್ಕೆ ನೀವೇ ಹೊಣೆ, ನನ್ನ ದಾಸಿಯನ್ನು ನಿಮಗೆ ಉಪಪತ್ನಿಯಾಗಿ ಕೊಟ್ಟೆನಷ್ಟೆ; ಇವಳೋ, ತಾನು ಗರ್ಭಿಣಿಯಾದೆನೆಂದು ತಿಳಿದದ್ದೆ, ನನ್ನನ್ನು ತಾತ್ಸಾರ ಮಾಡುತ್ತಿದ್ದಾಳೆ; ಈಗ ಸರ್ವೇಶ್ವರ ಸ್ವಾಮಿಯೇ ನಿಮಗೂ ನನಗೂ ನ್ಯಾಯ ತೀರಿಸಬೇಕು,” ಎಂದು ದೂರಿದಳು.


ಬಡವನಿಗೆ ಒಂದು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅದೂ ಕೊಂಡು ತಂದದ್ದು. ಅದನ್ನು ಅಕ್ಕರೆಯಿಂದ ಸಾಕುತ್ತಿದ್ದ. ಅದು ದೊಡ್ಡದಾಗುವವರೆಗೆ ಮಗುವಿನಂತೆ ಅವನ ಸಂಗಡ ಹಾಗೂ ಅವನ ಮಕ್ಕಳ ಸಂಗಡವೆ ಬೆಳೆಯುತ್ತಿತ್ತು. ಅವನೊಡನೆ ರೊಟ್ಟಿ ತಿನ್ನುತ್ತಾ ಅವನ ಪಾತ್ರೆಯಲ್ಲೇ ನೀರು ಕುಡಿಯುತ್ತಾ ಇತ್ತು. ಅವನ ಎದೆಯ ಮೇಲೆಯೇ ಒರಗಿಕೊಂಡು ನಿದ್ರೆಮಾಡುತ್ತಿತ್ತು.


“ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ, ನಿಮಗೆ ಅಥವಾ ನಿಮ್ಮ ಪಿತೃಗಳಿಗೆ ಗೊತ್ತಿಲ್ಲದ ಇತರ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಒಳ ಒಳಗೇ ನಿಮಗೆ ಬೋಧಿಸಬಹುದು.


“ಆ ಕಾಲದಲ್ಲಿ ಸರ್ವೇಶ್ವರ ಲೇವಿಕುಲದವರನ್ನು ಪ್ರತ್ಯೇಕಿಸಿ ತಮ್ಮ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕು, ತಮ್ಮ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕು ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕು ಅವರನ್ನು ನೇಮಿಸಿದರು. ಅವರು ಇಂದಿನವರೆಗೂ ಆ ಕೆಲಸವನ್ನು ನಡೆಸುತ್ತಾರೆ.


ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಸರ್ವೇಶ್ವರ ತಮ್ಮನ್ನು ಆರಾಧಿಸುವುದಕ್ಕೂ ತಮಗೆ ಧೂಪಾರತಿ ಎತ್ತುವುದಕ್ಕೂ ನಿಮ್ಮನ್ನು ತಮ್ಮ ಸಾನ್ನಿಧ್ಯಸೇವಕರನ್ನಾಗಿ ಆರಿಸಿಕೊಂಡರಲ್ಲವೇ?’ ಎಂದು ಹೇಳಿದನು.


ಅರಸ ದಾವೀದನು ಹಣ್ಣು ಹಣ್ಣು ಮುದುಕನಾದ; ಎಷ್ಟು ಕಂಬಳಿಗಳನ್ನು ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.


ಅದರಂತೆಯೇ, ಇಸ್ರಯೇಲರ ಪ್ರಾಂತ್ಯಗಳಲೆಲ್ಲಾ ಅತಿ ಸುಂದರಿಯಾದ ಒಬ್ಬ ಹುಡುಗಿಯನ್ನು ಹುಡುಕುವುದಕ್ಕೆ ಹೋದರು. ಶೂನೇಮ್ ಊರಿನ ಅಬೀಷಗ್ ಎಂಬವಳನ್ನು ಕಂಡುಹಿಡಿದು ಆಕೆಯನ್ನು ಅರಸನ ಬಳಿಗೆ ಕರೆದುಕೊಂಡು ಬಂದರು.


ಅವನ ಸೇವೆಮಾಡುತ್ತಿದ್ದ ರಾಜಪರಿವಾರದವರು ಅವನಿಗೆ, “ಅರಸರಿಗೋಸ್ಕರ ಸುಂದರ ಕನ್ಯೆಯರನ್ನು ಹುಡುಕುವುದಕ್ಕೆ ಅಪ್ಪಣೆ ಆಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು