Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:25 - ಕನ್ನಡ ಸತ್ಯವೇದವು C.L. Bible (BSI)

25 ಅವನು ಇಲ್ಲಿಂದ ಇಳಿದುಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಬಲಿಯಾಗಿ ಅರ್ಪಿಸಿದ್ದಾನೆ. ರಾಜಪುತ್ರರೆಲ್ಲರನ್ನು, ಸೇನಾಪತಿಗಳನ್ನು ಹಾಗು ಯಾಜಕ ಎಬ್ಯಾತಾರನನ್ನು ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲೇ ಅನ್ನಪಾನಗಳನ್ನು ತೆಗೆದುಕೊಂಡು ಅರಸನಾದ ಅದೋನೀಯನು ಚಿರಂಜೀವಿಯಾಗಿ ಇರಲಿ!’ ಎಂದು ಕೂಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವನು ಗಟ್ಟಾ ಇಳಿದು ಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ಎಲ್ಲಾ ರಾಜಪುತ್ರರನ್ನೂ, ಸೇನಾಧಿಪತಿಗಳನ್ನೂ, ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು, ‘ಅರಸನಾದ‍ ಅದೋನೀಯನು ಚಿರಂಜೀವಿಯಾಗಿರಲಿ’ ಎಂದು ಕೂಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವನು ಗಟ್ಟಾ ಇಳಿದು ಹೋಗಿ ಹೋರಿಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ಎಲ್ಲಾ ರಾಜಪುತ್ರರನ್ನೂ ಸೇನಾಪತಿಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ ಎಂದು ಕೂಗುತ್ತಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಈ ದಿನ ಅವನು ಅನೇಕ ಹೋರಿಗಳನ್ನು ಮತ್ತು ಕುರಿಗಳನ್ನು ಸಮಾಧಾನಯಜ್ಞವಾಗಿ ಅರ್ಪಿಸಿದನು. ಅವನು ನಿನ್ನ ಇತರ ಗಂಡುಮಕ್ಕಳನ್ನು, ಸೇನಾಧಿಪತಿಗಳನ್ನು ಮತ್ತು ಯಾಜಕನಾದ ಎಬ್ಯಾತಾರನನ್ನು ಆಹ್ವಾನಿಸಿದ್ದನು. ಅವರು ಈಗ ಅವನೊಡನೆ ತಿನ್ನುತ್ತಾ ಕುಡಿಯುತ್ತಾ ಇದ್ದಾರೆ. ‘ರಾಜನಾದ ಅದೋನೀಯನು ಚಿರಾಯುವಾಗಿರಲಿ’ ಎಂದು ಅವರು ಹೇಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಏಕೆಂದರೆ ಈ ಹೊತ್ತು ಅವನು ಇಳಿದು ಹೋಗಿ, ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ, ಕುರಿಗಳನ್ನೂ ಕೊಲ್ಲಿಸಿ, ಅರಸನ ಮಕ್ಕಳೆಲ್ಲರನ್ನೂ, ಸೈನ್ಯಾಧಿಪತಿಗಳನ್ನೂ, ಯಾಜಕನಾದ ಅಬಿಯಾತರನನ್ನೂ ಕರೆದಿದ್ದಾನೆ. ಅವರು ಅವನ ಮುಂದೆ ತಿಂದು, ಕುಡಿದು, ‘ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ,’ ಎಂದು ಹೇಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:25
19 ತಿಳಿವುಗಳ ಹೋಲಿಕೆ  

ಆಗ ಸಮುವೇಲನು ಜನರೆಲ್ಲರಿಗೆ, “ನೋಡಿ, ಸರ್ವೇಶ್ವರನಿಂದ ಆಯ್ಕೆಯಾದವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ,” ಎಂದನು. ಜನರೆಲ್ಲರೂ, “ಅರಸನಿಗೆ ಜಯವಾಗಲಿ!” ಎಂದು ಘೋಷಿಸಿದರು.


ಹೋರಿ, ಕುರಿ ಮೊದಲಾದ ಹಲವು ಕೊಬ್ಬಿದ ಪಶುಗಳನ್ನು ಬಲಿಯಾಗಿ ಅರ್ಪಿಸಿದ್ದಾನೆ; ನಿಮ್ಮ ಸೇವಕ ಸೊಲೊಮೋನನನ್ನು ಬಿಟ್ಟು, ಎಲ್ಲಾ ರಾಜಪುತ್ರರನ್ನು, ಯಾಜಕ ಎಬ್ಯಾತಾರನನ್ನು ಹಾಗು ಸೇನಾಪತಿ ಯೋವಾಬನನ್ನು ಔತಣಕ್ಕೆ ಕರೆದಿದ್ದಾನೆ.


ಒಮ್ಮೆ ಅದೋನೀಯನು ರೋಗೆಲ್ ಬುಗ್ಗೆಯ ಬಳಿಯಿರುವ ಜೋಹೆಲೆತ್ ಬಂಡೆಯ ಮೇಲೆ ಕುರಿ, ಹೋರಿ ಮೊದಲಾದ ಕೊಬ್ಬಿದ ಪಶುಗಳನ್ನು ಬಲಿದಾನ ಮಾಡಿಸಿದನು; ಅರಸುಕುಮಾರರಾದ ತನ್ನ ಸಹೋದರರನ್ನು ಹಾಗು ಆಸ್ಥಾನದ ಎಲ್ಲ ಯೆಹೂದ್ಯ ಅಧಿಕಾರಿಗಳನ್ನು ಔತಣಕ್ಕೆ ಆಮಂತ್ರಿಸಿದನು.


“ಸರ್ವೇಶ್ವರನ ನಾಮದಲಿ ಬರುವ ಅರಸನಿಗೆ ಜಯಜಯವಾಗಲಿ! ಶಾಂತಿ ಸ್ವರ್ಗದಲಿ, ಮಹಿಮೆ ಮಹೋನ್ನತದಲಿ!” ಎಂದು ಜಯಘೋಷ ಮಾಡುತ್ತಿದ್ದರು.


ಯೇಸುವಿನ ಹಿಂದೆಯೂ ಮುಂದೆಯೂ ಗುಂಪುಗುಂಪಾಗಿ ಹೋಗುತ್ತಿದ್ದ ಜನರು : “ದಾವೀದ ಕುಲಪುತ್ರನಿಗೆ ಜಯವಾಗಲಿ! ಸರ್ವೇಶ್ವರನ ನಾಮದಲಿ ಬರುವವನಿಗೆ ಮಂಗಳವಾಗಲಿ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ!” ಎಂದು ಹರ್ಷೋದ್ಗಾರ ಮಾಡುತ್ತಿದ್ದರು.


ಆಮೇಲೆ ಅವನೂ ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜಾಭಿಷೇಕ ಮಾಡಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.


ಮರುದಿನ ಅವರು ಸರ್ವೇಶ್ವರನಿಗೆ ಬಲಿಗಳನ್ನೂ ದಹನಬಲಿಗಳನ್ನೂ ಸಮರ್ಪಿಸಿದರು. ಆ ದಿನ ಬಲಿದಾನಕ್ಕಾಗಿ ಸಾವಿರ ಹೋರಿಗಳನ್ನೂ ಸಾವಿರ ಟಗರುಗಳನ್ನೂ ಸಾವಿರ ಕುರಿಗಳನ್ನೂ ವಧಿಸಿದರು. ಇವುಗಳೊಡನೆ ಅರ್ಪಿಸತಕ್ಕ ಪಾನದ್ರವ್ಯಗಳನ್ನೂ ಇಸ್ರಯೇಲರೆಲ್ಲರಿಗೆ ಸಾಕಾಗುವಷ್ಟು ಸಮಾಧಾನ ಬಲಿಗಳನ್ನೂ ಸಮರ್ಪಿಸಿ


ಹೇ, ದೇವಾ, ಸಲ್ಲಿಸುವೆವು ಕೃತಜ್ಞತೆ ನಿಮಗೆ ಹಾಡುವೆವು ಕೀರ್ತನೆ ನಿಮ್ಮ ನಾಮ ಪ್ರತಿಭೆಗೆ!


ಯೆಹೋಯಾದವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆಹೊಡೆದು, ‘ಅರಸನು ಚಿರಂಜೀವಿಯಾಗಿರಲಿ!’ ಎಂದು ಜಯಕಾರ ಮಾಡಿದರು.


ಅಲ್ಲಿ ಯಾಜಕ ಚಾದೋಕನು ಹಾಗು ಪ್ರವಾದಿ ನಾತಾನನು ಅವನನ್ನು ಇಸ್ರಯೇಲರ ಅರಸನನ್ನಾಗಿ ಅಭಿಷೇಕಿಸಲಿ. ಅನಂತರ ಕೊಂಬನ್ನೂದಿರಿ. ಎಲ್ಲರು ‘ಅರಸ ಸೊಲೊಮೋನನು ಚಿರಂಜೀವಿಯಾಗಿರಲಿ!’ ಎಂದು ಘೋಷಿಸಲಿ.


ಅರ್ಕೀಯನೂ ದಾವೀದನ ಸ್ನೇಹಿತನೂ ಆಗಿದ್ದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದು, “ಅರಸರು ಚಿರಂಜೀವಿಯಾಗಿ ಬಾಳಲಿ! ಅರಸರು ಚಿರಂಜೀವಿಯಾಗಿ ಬಾಳಲಿ!” ಎಂದು ಘೋಷಿಸಿದನು.


ಪುನಃ ಬೇರೆ ಸೇವಕರನ್ನು ಅಟ್ಟಿದ. ‘ಔತಣ ಸಿದ್ಧವಾಗಿದೆ. ಕೊಬ್ಬಿನ ಮಾಂಸದ ಅಡಿಗೆಯನ್ನು ಮಾಡಿಸಿದ್ದೇನೆ. ಎಲ್ಲವೂ ಅಣಿಯಾಗಿದೆ. ಉತ್ಸವಕ್ಕೆ ಬೇಗ ಬನ್ನಿ’ ಎಂದು ಆಹ್ವಾನಿತರಿಗೆ ತಿಳಿಸುವಂತೆ ಹೇಳಿಕಳುಹಿಸಿದ.


“ನನ್ನ ಒಡೆಯರೂ ಅರಸರೂ ಆದ ನೀವು ಅದೋನೀಯನಿಗೆ ಅರಸನಾಗುವುದಕ್ಕೂ ನಿಮ್ಮ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದಕ್ಕೂ ಅಪ್ಪಣೆಕೊಟ್ಟಿರುವಂತೆ ಕಾಣುತ್ತದೆ.


ಯಾಜಕ ಚಾದೋಕನು ದೇವದರ್ಶನದ ಗುಡಾರದಲ್ಲಿದ್ದ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೆ ಕೊಂಬನ್ನೂದುತ್ತಾ ಜನರೆಲ್ಲರು, “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ!” ಎಂದು ಘೋಷಿಸಿದರು.


ಆಗ ಅವನು, “ರಾಜ್ಯ ನನಗೆ ಬರಬೇಕಾಗಿತ್ತು; ನಾನೇ ಅರಸನಾಗುವೆನೆಂದು ಇಸ್ರಯೇಲರೆಲ್ಲರು ಎದುರು ನೋಡುತ್ತಿದ್ದರೆಂಬುದು ನಿನಗೆ ತಿಳಿದ ವಿಷಯ. ಆದರೆ ಅದು ತಪ್ಪಿ ನನ್ನ ತಮ್ಮನಿಗೆ ಹೋಯಿತು. ಅದು ಸರ್ವೇಶ್ವರನಿಂದಲೇ ಅವನಿಗೆ ದೊರಕಿತು.


ಕೂಡಲೆ ಅವರು ಅವನಿಗಾಗಿ ಮೆಟ್ಟಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ, ತುತೂರಿಯನ್ನು ಊದಿಸಿ, “ಯೇಹುವು ಅರಸನಾಗಿದ್ದಾನೆ,” ಎಂದು ಆರ್ಭಟಿಸಿದರು.


ಅಲ್ಲಿ ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು. ಜನಸಾಮಾನ್ಯರೆಲ್ಲರು ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಆಕೆ ಕೋಪದಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು