Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:26 - ಕನ್ನಡ ಸತ್ಯವೇದವು C.L. Bible (BSI)

26 ಆದರೆ ಅವನು ನಿಮ್ಮ ಸೇವಕನಾದ ನನ್ನನ್ನು, ಯಾಜಕ ಚಾದೋಕ್, ಯೆಹೋಯಾದಾವನ ಮಗ ಬೆನಾಯ ಎಂಬವರನ್ನು ಹಾಗು ನಿಮ್ಮ ಸೇವಕ ಸೊಲೊಮೋನನನ್ನು ಔತಣಕ್ಕೆ ಕರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೆ ಅವನು ನಿನ್ನ ಸೇವಕನಾದ ನನ್ನನ್ನೂ, ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನೂ ನಿನ್ನ ಮಗನೂ, ಸೇವಕನೂ ಸೊಲೊಮೋನನನ್ನೂ ಔತಣಕ್ಕೆ ಕರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದರೆ ಅವನು ನಿನ್ನ ಸೇವಕನಾದ ನನ್ನನ್ನೂ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರನ್ನೂ ನಿನ್ನ ಸೇವಕನಾದ ಸೊಲೊಮೋನನನ್ನೂ ಔತಣಕ್ಕೆ ಕರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದರೆ ಅವನು ನನ್ನನ್ನಾಗಲಿ ಯಾಜಕನಾದ ಚಾದೋಕನನ್ನಾಗಲಿ ಯೆಹೋಯಾದಾವನ ಮಗನಾದ ಬೆನಾಯನನ್ನಾಗಲಿ ನಿನ್ನ ಮಗನಾದ ಸೊಲೊಮೋನನನ್ನಾಗಲಿ ಆಹ್ವಾನಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ ನಿನ್ನ ಸೇವಕನಾದ ನನ್ನನ್ನೂ, ಯಾಜಕನಾದ ಚಾದೋಕನನ್ನೂ, ಯೆಹೋಯಾದಾವನ ಮಗ ಬೆನಾಯನನ್ನೂ, ನಿಮ್ಮ ಸೇವಕನಾದ ಸೊಲೊಮೋನನನ್ನೂ, ಅವನು ಕರೆಯಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:26
10 ತಿಳಿವುಗಳ ಹೋಲಿಕೆ  

ಆದರೆ ಯಾಜಕ ಚಾದೋಕ್, ಯೆಹೋಯಾದಾವನ ಮಗ ಬೆನಾಯ, ಪ್ರವಾದಿ ನಾತಾನ್, ಶಿಮ್ಮೀ, ರೇಗೀ ಎಂಬವರೂ ದಾವೀದನ ವಿಶೇಷ ಕಾವಲಾಳುಗಳೂ ಅದೋನಿಯನನ್ನು ಬೆಂಬಲಿಸಲಿಲ್ಲ.


ಆದರೆ, ಪ್ರವಾದಿ ನಾತಾನನನ್ನಾಗಲಿ, ಬೆನಾಯನನ್ನಾಗಲಿ, ವಿಶೇಷ ಕಾವಲಾಳುಗಳನ್ನಾಗಲಿ, ತಮ್ಮನಾದ ಸೊಲೊಮೋನನನ್ನಾಗಲಿ ಕರೆಯಲಿಲ್ಲ.


ಹೋರಿ, ಕುರಿ ಮೊದಲಾದ ಹಲವು ಕೊಬ್ಬಿದ ಪಶುಗಳನ್ನು ಬಲಿಯಾಗಿ ಅರ್ಪಿಸಿದ್ದಾನೆ; ನಿಮ್ಮ ಸೇವಕ ಸೊಲೊಮೋನನನ್ನು ಬಿಟ್ಟು, ಎಲ್ಲಾ ರಾಜಪುತ್ರರನ್ನು, ಯಾಜಕ ಎಬ್ಯಾತಾರನನ್ನು ಹಾಗು ಸೇನಾಪತಿ ಯೋವಾಬನನ್ನು ಔತಣಕ್ಕೆ ಕರೆದಿದ್ದಾನೆ.


ಪ್ರವಾದಿ ನಾತಾನನು, ಸರ್ವೇಶ್ವರನಿಂದ ಪಡೆದ ಆಜ್ಞೆಯಂತೆ ಅವರಿಗೋಸ್ಕರ, ಆ ಹುಡುಗನಿಗೆ ‘ಯೆದೀದ್ಯ’ ಎಂದು ಹೆಸರಿಟ್ಟನು.


ಒಂದು ದಿನ ಅವನು ಪ್ರವಾದಿ ನಾತಾನನಿಗೆ, “ನೋಡು, ನಾನು ವಾಸಮಾಡುತ್ತಿರುವುದು ದೇವದಾರು ಮರದಿಂದ ಮಾಡಿದ ಅರಮನೆಯಲ್ಲಿ ; ಆದರೆ ದೇವರ ಮಂಜೂಷ ಇರುವುದು ಬಟ್ಟೆಯ ಗುಡಾರದಲ್ಲಿ!” ಎಂದನು.


ಯೆಹೋಯಾದಾವನ ಮಗ ಬೆನಾಯನು ‘ಕೆರೇತ್ಯ’, ‘ಪೆಲೇತ್ಯ,’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳೂ ಯಾಜಕರಾಗಿದ್ದರು.


ಈ ಕಾರ್ಯ ನಮ್ಮ ಒಡೆಯರೂ ಅರಸರೂ ಆದ ನಿಮ್ಮಿಂದಲೇ ನಡೆದಿರುವುದಾದರೆ, ನಿಮ್ಮ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರೆಂಬುದನ್ನು ನಿಮ್ಮ ಸೇವಕನಾದ ನನಗೆ ತಿಳಿಸಬಾರದಾಗಿತ್ತೇ?” ಎಂದು ಹೇಳಿದನು.


ಅಹೀಟೂಬನ ಮಗ ಚಾದೋಕನೂ ಹಾಗು ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು; ಸರಾಯನು ಅವನಿಗೆ ಲೇಖಕ ಆಗಿದ್ದನು.


ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿ ಹಾಗು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿ ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು