Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:29 - ಕನ್ನಡ ಸತ್ಯವೇದವು C.L. Bible (BSI)

29 “ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿ ಕಾಪಾಡಿದ ಸರ್ವೇಶ್ವರನಾಣೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅರಸನು ಆಕೆಗೆ, “ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿ ಕಾಪಾಡಿದ ಯೆಹೋವನಾಣೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿ ಕಾಪಾಡಿದ ಯೆಹೋವನಾಣೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆಗ ರಾಜನು ಈ ಪ್ರಮಾಣವನ್ನು ಮಾಡಿದನು: “ದೇವರಾದ ಯೆಹೋವನು ನನ್ನನ್ನು ಎಲ್ಲಾ ತೊಂದರೆಗಳಿಂದ ರಕ್ಷಿಸಿದನು. ದೇವರಾಣೆಯಾಗಿಯೂ ನಾನು ನಿನಗೆ ಈ ಪ್ರಮಾಣವನ್ನು ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅರಸನು ಆಕೆಗೆ, “ನಿಶ್ಚಯವಾಗಿ, ನಿನ್ನ ಮಗ ಸೊಲೊಮೋನನು ನನ್ನ ತರುವಾಯ ಆಳುವನೆಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:29
19 ತಿಳಿವುಗಳ ಹೋಲಿಕೆ  

ದಾವೀದನು ಬೇರೋತಿನ ರಿಮ್ಮೋನನ ಮಕ್ಕಳು ಆದ ಆ ರೇಕಾಬ್ ಹಾಗು ಬಾಣ ಎಂಬವರಿಗೆ,


ಶತ್ರುಹಗೆಗಳಿಂದ ನಮ್ಮನ್ನು ಬಿಡಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಇಕ್ಕಟ್ಟಿನಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭು, ಪ್ರಾಣವನು I ಶತ್ರುಕೋಪಕೆ ವಿರುದ್ಧವಾಗಿ ತೋರುವೆ ನೀ ಮುಷ್ಟಿಯನು II


ಅವರ ಜೀವ ಆತನ ದೃಷ್ಟಿಯಲಿ ಅಮೂಲ್ಯ I ಜುಲುಮೆ ಶೋಷಣೆಗಳ ನೀಗಿಪುದು ಆತನ ಕಾರ್ಯ II


ನಾಮಾನನು ಸ್ವಲ್ಪದೂರಕ್ಕೆ ಹೋದನಂತರ ದೈವಪುರುಷನಾದ ಎಲೀಷನ ಸೇವಕ ಗೇಹಜಿಯು ಮನಸ್ಸಿನಲ್ಲೇ, “ನನ್ನ ಯಜಮಾನ ಆ ಸಿರಿಯಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟರಲ್ಲಾ! ಸರ್ವೇಶ್ವರನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ, ಅವನಿಂದ ಸ್ವಲ್ಪವನ್ನಾದರೂ ಬಾಚಿಕೊಂಡು ಬರುವೆನು,” ಎಂದುಕೊಂಡು ಹೊರಟನು.


ಅದಕ್ಕೆ ಎಲೀಷನು, “ನಾನು ಸನ್ನಿಧಿಸೇವೆ ಮಾಡುತ್ತಿರುವ ಸರ್ವೇಶ್ವರನಾಣೆ, ನಿನ್ನಿಂದ ಏನೂ ತೆಗೆದುಕೊಳ್ಳುವುದಿಲ್ಲ,” ಎಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ತೆಗೆದುಕೊಳ್ಳಲೇ ಇಲ್ಲ.


ಆದರೂ ಆ ಹುಡುಗನ ತಾಯಿ, “ಸರ್ವೇಶ್ವರನಾಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟುಹೋಗುವುದಿಲ್ಲ,” ಎಂದಳು. ಆದ್ದರಿಂದ ಎಲೀಷನು ಆಕೆಯ ಜೊತೆಯಲ್ಲೇ ಹೊರಟನು.


ತಮ್ಮ ದೇವರಾದ ಸರ್ವೇಶ್ವರನಾಣೆ, ನನ್ನ ಒಡೆಯ ಸೇವಕರನ್ನು ಅಟ್ಟಿ ನಿಮ್ಮನ್ನು ಹುಡುಕದ ಜನಾಂಗವಾಗಲಿ, ರಾಜ್ಯವಾಗಲಿ ಒಂದೂ ಇಲ್ಲ. ಆ ಜನಾಂಗ, ರಾಜ್ಯಗಳವರು, ‘ಎಲೀಯನು ನಮ್ಮಲ್ಲಿರುವುದಿಲ್ಲ,’ ಎಂದು ಹೇಳಿದಾಗ ಅವನು ಅವರಿಂದ ಪ್ರಮಾಣ ಮಾಡಿಸಿದನು.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.


ನನ್ನ ತಂದೆ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕುಳ್ಳಿರಿಸಿ, ಅಭಿವೃದ್ಧಿಗೊಳಿಸಿ, ತಾವು ವಾಗ್ದಾನ ಮಾಡಿದಂತೆ ನನಗೆ ಮನೆತನವನ್ನು ಕಟ್ಟಿದ ಸರ್ವೇಶ್ವರನಾಣೆ, ಅದೋನೀಯನು ಈ ದಿನವೇ ಸಾಯಬೇಕು,” ಎಂದು ಹೇಳಿದನು.


ಇದನ್ನು ಕೇಳಿದ್ದೇ ದಾವೀದನು ಆ ವ್ಯಕ್ತಿಯ ಮೇಲೆ ಕಡುಕೋಪಗೊಂಡು ನಾತಾನನಿಗೆ, “ಸರ್ವೇಶ್ವರನಾಣೆ, ಆ ವ್ಯಕ್ತಿ ಸಾಯಲೇ ಬೇಕು.


ನಾನು ಅವನಿಗೆ, ‘ಬಾಣಗಳು ಈಚೆ ಬಿದ್ದಿರುತ್ತವೆ; ಅವುಗಳನ್ನು ತೆಗೆದುಕೊಂಡು ಬಾ’ ಎಂದು ಹೇಳಿದರೆ ನೀನು ಬಾ; ಸರ್ವೇಶ್ವರನಾಣೆ, ಯಾವ ಕೇಡೂ ಸಂಭವಿಸದೆ ಸುರಕ್ಷಿತನಾಗಿರುವೆ.


ಸೌಲನು ಯೋನಾತಾನನ ಮಾತುಗಳನ್ನು ಆಲಿಸಿದನು. “ಸರ್ವೇಶ್ವರನಾಣೆ, ಅವನನ್ನು ಕೊಲ್ಲುವುದಿಲ್ಲ,” ಎಂದು ಪ್ರಮಾಣಮಾಡಿದನು.


ಜನರು ಅವನಿಗೆ, “ದೇವರ ಸಹಾಯದಿಂದ ಈ ದಿನ ಇಸ್ರಯೇಲರಿಗೆ ಮಹಾಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೇ? ಕೂಡದು; ಸರ್ವೇಶ್ವರನಾಣೆ. ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು,” ಎಂದು ಹೇಳಿ ಪ್ರಾಯಶ್ಚಿತ್ತವನ್ನು ಕೊಟ್ಟು ಅವನನ್ನು ಬಿಡಿಸಿದರು.


ಇಸ್ರಯೇಲರ ರಕ್ಷಕನಾದ ಸರ್ವೇಶ್ವರನ ಆಣೆ, ಪಾಪಮಾಡಿದವರು ಯಾರೇ ಆಗಿರ಼ಲಿ, ಮಗನಾದ ಯೋನಾತಾನನಾಗಿದ್ದರೂ ಸರಿಯೇ, ಅವನು ಸಾಯಲೇಬೇಕು,” ಎಂದು ಹೇಳಿದನು. ಜನರು ಏನೂ ಮಾತಾಡದೆ ಮೌನವಾಗಿದ್ದರು.


ಆಗ ಅವನು, “ಅವರು ನನ್ನ ತಾಯಿಯ ಮಕ್ಕಳು; ನನ್ನ ಸಹೋದರರು; ಸರ್ವೇಶ್ವರನ ಆಣೆ, ನೀವು ಅವರನ್ನು ಉಳಿಸಿದ್ದರೆ ನಾನು ನಿಮ್ಮನ್ನು ಕೊಲ್ಲುತ್ತಿರಲಿಲ್ಲ,” ಎಂದು ಹೇಳಿ


ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”


ಅರಸ ದಾವೀದನು ಬತ್ಷೆಬೆಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಆಕೆ ಬಂದು ಅರಸನ ಮುಂದೆ ನಿಂತಳು. ಅರಸ ಆಕೆಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು