Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:45 - ಕನ್ನಡ ಸತ್ಯವೇದವು C.L. Bible (BSI)

45 ಯಾಜಕ ಚಾದೋಕನೂ ಪ್ರವಾದಿ ನಾತಾನನೂ ಗೀಹೋನಿನ ಬಳಿಯಲ್ಲಿ ಅವನಿಗೆ ರಾಜಾಭಿಷೇಕ ಮಾಡಿದ್ದಾರೆ. ಅಲ್ಲಿಂದ ಅವರು ಹರ್ಷಾನಂದದಿಂದ ಆರ್ಭಟಿಸುತ್ತಾ ಪಟ್ಟಣಕ್ಕೆ ಬಂದಿದ್ದಾರೆ. ಇದರಿಂದಲೇ ಪಟ್ಟಣದಲ್ಲಿ ಗದ್ದಲವುಂಟಾಗಿದೆ; ನೀವು ಕೇಳಿದ ಆರ್ಭಟವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಗೀಹೋನಿನ ಬಳಿಯಲ್ಲಿ ಅವನಿಗೆ ರಾಜ್ಯಾಭಿಷೇಕ ಮಾಡಿದರು. ಅಲ್ಲಿಂದ ಅವರು ಮಹಾ ಸಂತೋಷದಿಂದ ಜಯಘೋಷ ಮಾಡುತ್ತಾ ಪಟ್ಟಣಕ್ಕೆ ಬಂದಿದ್ದಾರೆ. ಇದರಿಂದಲೇ ಪಟ್ಟಣದಲ್ಲಿ ಗದ್ದಲವುಂಟಾಗಿದೆ. ನೀವು ಕೇಳಿದ ಶಬ್ದವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಗೀಹೋನಿನ ಬಳಿಯಲ್ಲಿ ಅವನಿಗೆ ರಾಜ್ಯಾಭಿಷೇಕಮಾಡಿದರು. ಅಲ್ಲಿಂದ ಅವರು ಮಹಾಸಂತೋಷದಿಂದ ಆರ್ಭಟಿಸುತ್ತಾ ಪಟ್ಟಣಕ್ಕೆ ಬಂದಿದ್ದಾರೆ. ಇದರಿಂದಲೇ ಪಟ್ಟಣದಲ್ಲಿ ಗದ್ದಲವುಂಟಾಗಿದೆ; ನೀವು ಕೇಳಿದ ಆರ್ಭಟವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ನಂತರ ಯಾಜಕನಾದ ಚಾದೋಕನು ಮತ್ತು ಪ್ರವಾದಿಯಾದ ನಾತಾನನು ಗೀಹೋನ್ ಬುಗ್ಗೆಯ ಹತ್ತಿರ ಸೊಲೊಮೋನನನ್ನು ಅಭಿಷೇಕಿಸಿದರು. ಅನಂತರ ಅವರು ನಗರಕ್ಕೆ ಹೋದರು. ಅವರನ್ನು ಜನರು ಹಿಂಬಾಲಿಸಿದರು. ಈಗ ನಗರದ ಜನರು ತುಂಬಾ ಸಂತೋಷದಿಂದ ಇದ್ದಾರೆ. ಆ ಶಬ್ದವನ್ನೇ ನೀವು ಕೇಳುತ್ತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಸೊಲೊಮೋನನನ್ನು ಗೀಹೋನಿನಲ್ಲಿ ಅರಸನಾಗಿರಲು ಅಭಿಷೇಕಿಸಿದ್ದಾರೆ. ಅವರು ಸಂತೋಷಪಡುತ್ತಾ ಅಲ್ಲಿಂದ ಬಂದ ಕಾರಣ ಪಟ್ಟಣವು ಗದ್ದಲವಾಯಿತು. ನೀವು ಕೇಳುವ ಆರ್ಭಟವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:45
7 ತಿಳಿವುಗಳ ಹೋಲಿಕೆ  

ತರುವಾಯ ಅವರೆಲ್ಲರು ಅವನನ್ನು ಹಿಂಬಾಲಿಸಿ, ಕೊಳಲೂದುತ್ತಾ ಹರ್ಷಾನಂದದಿಂದ ಆರ್ಭಟಿಸುತ್ತಾ, ಹಿಂದಿರುಗಿ ಬಂದರು. ಅವರ ಜಯಕಾರದ ಕೂಗು ಭೂಮಿಯನ್ನೇ ನಡುಗಿಸುವಂತಿತ್ತು!


ಜನರು ಹೀಗೆ ಮಹಾಧ್ವನಿಯಿಂದ ಆರ್ಭಟಿಸುತ್ತಾ ಇದ್ದುದರಿಂದ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಎಂದು ಹೇಳಲಾಗಲಿಲ್ಲ. ಗದ್ದಲವು ಬಹುದೂರದವರೆಗೂ ಕೇಳಿಸುತ್ತಿತ್ತು.


ಆಕೆ ಅಹೀಯನ ಮನೆಯನ್ನು ಪ್ರವೇಶಿಸುವಾಗಲೇ ಅಹೀಯನು ಆಕೆಯ ಕಾಲುಸಪ್ಪಳವನ್ನು ಕೇಳಿ, “ಯಾರೊಬ್ಬಾಮನ ಹೆಂಡತಿಯೇ, ಬಾ; ಏಕೆ ನೀನು ಅನ್ಯಳೆಂದು ನಟಿಸುತ್ತಿರುವೆ? ನಿನಗೆ ಕಠಿಣವಾದ ಉತ್ತರವನ್ನು ಕೊಡಬೇಕೆಂದು ನನಗೆ ಅಪ್ಪಣೆಯಾಗಿದೆ.


ಅವನು ಮತ್ತೆ, “ಅವನ ರೂಪ ಹೇಗಿದೆ?” ಎಂದು ಕೇಳಿದನು. ಆಕೆ, “ನಿಲುವಂಗಿಯನ್ನು ತೊಟ್ಟುಕೊಂಡ ಒಬ್ಬ ಮುದುಕ ಬರುತ್ತಿದ್ದಾನೆ,” ಎಂದು ಹೇಳಿದಳು. ಅವನು ಸಮುವೇಲನೇ ಎಂದು ಸೌಲನು ತಿಳಿದು ನೆಲದಮಟ್ಟಿಗೂ ಬಾಗಿ ನಮಸ್ಕರಿಸಿದನು.


ಸರ್ವೇಶ್ವರನ ಒಡಂಬಡಿಕೆಯ ಮಂಜೂಷ ಪಾಳೆಯಕ್ಕೆ ಬಂದಾಗ ಇಸ್ರಯೇಲರೆಲ್ಲರೂ ಭೂಮಿ ಬಿರಿಯುವಷ್ಟು ಗಟ್ಟಿಯಾಗಿ ಜಯಕಾರ ಮಾಡಿದರು.


ಯಾಜಕ ಚಾದೋಕ್, ಪ್ರವಾದಿ ನಾತಾನ್ ಹಾಗು ಯೆಹೋಯಾದಾವನ ಮಗ ಬೆನಾಯ ಇವರನ್ನೂ ಕೆರೇತ್ಯ-ಪೆಲೇತ್ಯರನ್ನೂ ಅರಸರು ಅವನ ಜೊತೆಯಲ್ಲಿ ಕಳುಹಿಸಿದ್ದಾರೆ. ಅವರು ಅವನನ್ನು ಅರಸನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು