Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:53 - ಕನ್ನಡ ಸತ್ಯವೇದವು C.L. Bible (BSI)

53 ಆಳುಗಳನ್ನು ಕಳುಹಿಸಿ ಅವನನ್ನು ಬಲಿಪೀಠದ ಬಳಿಯಿಂದ ಕರೆದುತರುವಂತೆ ಮಾಡಿದನು. ಅವನು ಬಂದು, ಅರಸ ಸೊಲೊಮೋನನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ಸೊಲೊಮೋನನು ಅವನಿಗೆ ಮನೆಗೆ ಹೋಗಲು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಅವನು ಬಂದಾಗ ಅರಸನಾದ ಸೊಲೊಮೋನನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಸೊಲೊಮೋನನು ಅವನಿಗೆ ಅವನ ಮನೆಗೆ ಹೋಗಲು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಆಳುಗಳನ್ನು ಕಳುಹಿಸಿ ಅವನನ್ನು ಯಜ್ಞವೇದಿಯ ಬಳಿಯಿಂದ ತರಿಸಿದನು. ಅವನು ಬಂದಾಗ ಅರಸನಾದ ಸೊಲೊಮೋನನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಸೊಲೊಮೋನನು ಅವನಿಗೆ ಮನೆಗೆ ಹೋಗ ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ರಾಜನಾದ ಸೊಲೊಮೋನನು ಅದೋನೀಯನನ್ನು ಕರೆತರಲು ಕೆಲವು ಜನರನ್ನು ಕಳುಹಿಸಿದನು. ಅವರು ಅದೋನೀಯನನ್ನು ರಾಜನಾದ ಸೊಲೊಮೋನನ ಬಳಿಗೆ ಕರೆದುತಂದರು. ಅದೋನೀಯನು ರಾಜನಾದ ಸೊಲೊಮೋನನ ಬಳಿಗೆ ಬಂದು, ಸಾಷ್ಟಾಂಗನಮಸ್ಕಾರ ಮಾಡಿದನು. ಸೊಲೊಮೋನನು ಅವನಿಗೆ, “ಮನೆಗೆ ಹೋಗು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಅರಸನಾದ ಸೊಲೊಮೋನನು ಅವನನ್ನು ಕರೆಸಿದಾಗ, ಬಲಿಪೀಠದ ಬಳಿಯಿಂದ ಅವನನ್ನು ಕರೆದುಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡಬಿದ್ದನು. ಸೊಲೊಮೋನನು ಅವನಿಗೆ, “ನಿನ್ನ ಮನೆಗೆ ಹೋಗು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:53
10 ತಿಳಿವುಗಳ ಹೋಲಿಕೆ  

ಮಗನೇ, ಸರ್ವೇಶ್ವರನಿಗೂ ರಾಜನಿಗೂ ಭಯಪಡು; ಅವರನ್ನು ವಿರೋಧಿಸುವವರ ಗೊಡವೆಗೆ ಹೋಗಬೇಡ.


ತರುವಾಯ ಅರಸನು ಶಿಮ್ಮಿಯನ್ನು ಕರೆಯಿಸಿ, “ನೀನು ಒಂದು ಮನೆಯನ್ನು ಕಟ್ಟಿಸಿಕೊಂಡು ಜೆರುಸಲೇಮಿನಲ್ಲೇ ವಾಸಿಸಬೇಕು. ಇದನ್ನು ಬಿಟ್ಟು ಎಲ್ಲಿಗೂ ಹೋಗಬಾರದು.


ಆಗ ಬತ್ಷೆಬೆ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದಳು, “ನನ್ನೊಡೆಯರಾದ ದಾವೀದರಸರು ಸುದೀರ್ಘಕಾಲ ಬಾಳಲಿ!” ಎಂದಳು.


ಬತ್ಷೆಬೆ ಅಲ್ಲಿಗೆ ಹೋಗಿ ಅರಸನಿಗೆ ಬಾಗಿ ನಮಸ್ಕರಿಸಿದಳು. ಅರಸನು, “ಏನು, ನಿನಗೇನು ಬೇಕು?” ಎಂದು ಆಕೆಯನ್ನು ವಿಚಾರಿಸಿದನು.


ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ಎರಡು ವರ್ಷ ಜೆರುಸಲೇಮಿನಲ್ಲಿ ವಾಸವಾಗಿದ್ದನು.


ಆದರೆ ಅರಸನು, “ಅಬ್ಷಾಲೋಮನು ತನ್ನ ಮನೆಗೆ ಹೋಗಲಿ; ಅವನು ನನ್ನ ಮುಖವನ್ನು ನೋಡಬಾರದು,” ಎಂದು ಆಜ್ಞಾಪಿಸಿದನು. ಆದ್ದರಿಂದ ಅವನು ತನ್ನ ಮನೆಗೆ ಹೋದನು. ಅರಸನ ಮುಖವನ್ನು ನೋಡಲಿಲ್ಲ.


ಮೂರನೆಯ ದಿನ ಸೌಲನ ಪಾಳೆಯದಿಂದ ಒಬ್ಬ ವ್ಯಕ್ತಿ ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೂ ಬಾಗಿ ನಮಸ್ಕರಿಸಿದನು. ಅವನು ಸಂತಾಪದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು.


ಆಗ ಸೊಲೊಮೋನನು, “ಅದೋನೀಯನು ಸತ್ಪುರುಷನಾಗಿ ನಡೆಯುವುದಾದರೆ ಅವನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ; ಆದರೆ ಅವನಲ್ಲಿ ಕೆಟ್ಟತನ ಕಂಡುಬರುವುದಾದರೆ, ಅವನು ಖಂಡಿತವಾಗಿ ಸಾಯುವನು,” ಎಂದು ಹೇಳಿದನು.


ದಾವೀದನ ಮರಣಸಮಯ ಸಮೀಪಿಸಿದಾಗ ಅವನು ತನ್ನ ಮಗ ಸೊಲೊಮೋನನಿಗೆ ಹೀಗೆಂದು ಆಜ್ಞಾಪಿಸಿದನು:


ಯೋವಾಬನು ಹೋಗಿ ಇದನ್ನು ಅರಸನಿಗೆ ತಿಳಿಸಿದಾಗ ಅರಸನು ಅಬ್ಷಾಲೋಮನನ್ನು ಕರೆಯಿಸಿದನು. ಅವನು ಅರಸನ ಬಳಿಗೆ ಬಂದು ಸಾಷ್ಟಾಂಗ ನಮಸ್ಕಾರ ಮಾಡಿದನು. ಅರಸನು ಅವನಿಗೆ ಮುದ್ದಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು