Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:26 - ಕನ್ನಡ ಸತ್ಯವೇದವು C.L. Bible (BSI)

26 ಸೊಲೊಮೋನನು ರಥಗಳನ್ನೂ ರಾಹುತರನ್ನೂ ಸಂಗ್ರಹಿಸುತ್ತಿದ್ದನು. ಅವನ ರಥಗಳು ಸಾವಿರದ ನಾನೂರು; ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಜೆರುಸಲೇಮಿನಲ್ಲಿ ತನ್ನ ಬಳಿಯಲ್ಲೇ ಇರಿಸಿದ್ದನು; ಉಳಿದವುಗಳನ್ನು ರಥಗಳಿಗಾಗಿಯೇ ನೇಮಿಸಿದ್ದ ಪಟ್ಟಣಗಳಲ್ಲಿ ಇರಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಸೊಲೊಮೋನನು ರಥಗಳನ್ನೂ ಮತ್ತು ರಾಹುತರನ್ನೂ ಸಂಗ್ರಹಿಸಿದನು. ಅವನ ರಥಗಳು ಸಾವಿರದ ನಾನೂರು. ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೂ, ಉಳಿದವುಗಳನ್ನು ರಥಗಳಿಗೋಸ್ಕರ ನೇಮಿಸಿದ ಪಟ್ಟಣಗಳಲ್ಲಿಯೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಸೊಲೊಮೋನನು ರಥಗಳನ್ನೂ ರಾಹುತರನ್ನೂ ಸಂಗ್ರಹಿಸಿದನು. ಅವನ ರಥಗಳು ಸಾವಿರದ ನಾನೂರು; ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಯೆರೂಸಲೇವಿುನಲ್ಲಿ ತನ್ನ ಬಳಿಯಲ್ಲಿಯೂ ಉಳಿದವುಗಳನ್ನು ರಥಗಳಿಗೋಸ್ಕರ ನೇವಿುಸಿದ ಪಟ್ಟಣಗಳಲ್ಲಿಯೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದ್ದರಿಂದ ಅಸಂಖ್ಯವಾದ ರಥಗಳೂ ಕುದುರೆಗಳೂ ಸೊಲೊಮೋನನಲ್ಲಿದ್ದವು. ಅವನಲ್ಲಿ ಒಂದು ಸಾವಿರದ ನಾನೂರು ರಥಗಳು ಮತ್ತು ಹನ್ನೆರಡು ಸಾವಿರ ಕುದುರೆಗಳಿದ್ದವು. ಸೊಲೊಮೋನನು ಈ ರಥಗಳಿಗಾಗಿ ವಿಶೇಷವಾದ ನಗರಗಳನ್ನು ಕಟ್ಟಿಸಿದನು. ಆ ನಗರಗಳಲ್ಲಿ ರಥಗಳನ್ನು ಇರಿಸಿದನು. ರಾಜನಾದ ಸೊಲೊಮೋನನು ಕೆಲವು ರಥಗಳನ್ನು ಜೆರುಸಲೇಮಿನಲ್ಲಿ ತನ್ನ ಹತ್ತಿರ ಇಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇದಲ್ಲದೆ ಸೊಲೊಮೋನನು ರಥಗಳನ್ನೂ, ರಾಹುತರನ್ನೂ ಕೂಡಿಸಿದನು. ಸಾವಿರದ ನಾನೂರು ರಥಗಳು, ಹನ್ನೆರಡು ಸಾವಿರ ಕುದುರೆಯ ರಾಹುತರು ಇದ್ದರು. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೇ ಇರಿಸಿದನು, ಉಳಿದವುಗಳನ್ನು ರಥಗಳ ಪಟ್ಟಣಗಳಲ್ಲಿಯೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:26
7 ತಿಳಿವುಗಳ ಹೋಲಿಕೆ  

ಸೊಲೊಮೋನನ ಅಶ್ವಸಹಿತವಾದ ರಥಗಳು ನಾಲ್ಕು ಸಾವಿರ ಹಾಗೂ ರಾಹುತರು ಹನ್ನೆರಡು ಸಾವಿರ. ಇವುಗಳನ್ನು ಜೆರುಸಲೇಮಿನಲ್ಲಿ ತನ್ನ ಬಳಿಯಲ್ಲೂ ರಥಗಳಿಗಾಗಿ ನೇಮಿಸಿದ್ದ ಪಟ್ಟಣಗಳಲ್ಲೂ ಇರಿಸಿದ್ದನು.


ಸೊಲೊಮೋನನ ಲಾಯಗಳಲ್ಲಿ ನಾಲ್ವತ್ತು ಸಾವಿರ ರಥಾಶ್ವಗಳಿಗೆ ಸ್ಥಳವಿತ್ತು; ಅವನಿಗೆ ಹನ್ನೆರಡು ಸಾವಿರ ಮಂದಿ ರಾಹುತರಿದ್ದರು.


ಉಗ್ರಾಣ ಪಟ್ಟಣಗಳು, ಯುದ್ಧರಥಗಳನ್ನಿರಿಸುವ ಪಟ್ಟಣಗಳು ಹಾಗು ರಾಹುತರ ಪಟ್ಟಣಗಳು ಇವುಗಳನ್ನೆಲ್ಲಾ ಕಟ್ಟಿಸಿದವನು ಸೊಲೊಮೋನನೇ. ಜೆರುಸಲೇಮಿನಲ್ಲೂ ಲೆಬನೋನಿನಲ್ಲೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲೂ ತನಗೆ ಇಷ್ಟವಾದುವುಗಳನ್ನೆಲ್ಲಾ ಅವನು ಕಟ್ಟಿಸಿದನು.


“ಅವನು ಕುದುರೆಯ ದಂಡನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಈಜಿಪ್ಟ್ ದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಕೂಡದೆಂದು ಸರ್ವೇಶ್ವರ ಆಜ್ಞಾಪಿಸಿದ್ದಾರೆ.


ನಾಡು ಬೆಳ್ಳಿಬಂಗಾರದಿಂದ ತುಂಬಿಹೋಗಿದೆ. ಜನರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲದಂತಿದೆ. ಎಲ್ಲಾ ಕಡೆ ಅಶ್ವಬಲ ಯಥೇಚ್ಛವಾಗಿದೆ. ರಥಗಳು ಅಪಾರವಾಗಿವೆ.


ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು; ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಸಿದೋನ್ಯರಂತೆ ಮರಕೊಯ್ಯುವುದರಲ್ಲಿ ಜಾಣರು ನಮ್ಮಲ್ಲಿರುವುದಿಲ್ಲವೆಂದು ನಿನಗೆ ಗೊತ್ತಿದೆಯಲ್ಲವೆ?” ಎಂದು ಹೇಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು