Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:5 - ಕನ್ನಡ ಸತ್ಯವೇದವು C.L. Bible (BSI)

5 ಅವನು ಕಟ್ಟಿಸಿದ ಅರಮನೆ, ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನು ಮತ್ತು ಸರ್ವೇಶ್ವರನ ಆಲಯದಲ್ಲಿ ಅವನು ಸಮರ್ಪಿಸುತ್ತಿದ್ದ ದಹನಬಲಿಗಳನ್ನು ನೋಡಿದಳು. ಇವುಗಳಿಂದ ಆಶ್ಚರ್ಯಚಕಿತಳಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನೂ ಮತ್ತು ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನೂ ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ ಅರಸನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ರಾಜನ ಮೇಜಿನ ಮೇಲಿದ್ದ ಆಹಾರವನ್ನೂ ಒಟ್ಟಾಗಿ ಸೇರಿಬರುತ್ತಿದ್ದ ಅವನ ಅಧಿಕಾರಿಗಳನ್ನೂ ಅರಮನೆಯಲ್ಲಿದ್ದ ಸೇವಕರನ್ನೂ ಮತ್ತು ಅವರು ಧರಿಸಿದ್ದ ಉತ್ತಮ ಬಟ್ಟೆಗಳನ್ನೂ ಅವಳು ನೋಡಿದಳು. ಅವನ ಔತಣಕೂಟಗಳನ್ನೂ ಅವನು ಆಲಯದಲ್ಲಿ ಅರ್ಪಿಸುತ್ತಿದ್ದ ಯಜ್ಞಗಳನ್ನೂ ಅವಳು ನೋಡಿದಳು. ಇವುಗಳಿಂದ ಅವಳಿಗೆ ನಿಜವಾಗಿಯೂ “ಉಸಿರುಕಟ್ಟಿಸುವಂತಹ” ವಿಸ್ಮಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನ ಮೇಜಿನ ಭೋಜನವನ್ನೂ, ಅವನ ಅಧಿಪತಿಗಳು ಕುಳಿತಿರುವ ರೀತಿಯನ್ನೂ, ಅವನ ಸೇವಕರು ನಿಂತಿರುವುದನ್ನೂ, ಅವರ ವಸ್ತ್ರಗಳನ್ನೂ, ಅವನ ಪಾನದಾಯಕರನ್ನೂ, ಅವನು ಯೆಹೋವ ದೇವರ ಆಲಯದಲ್ಲಿ ಅರ್ಪಿಸಿದ ದಹನಬಲಿಗಳನ್ನೂ ಕಂಡಾಗ ಅವಳು ವಿಸ್ಮಯಗೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:5
12 ತಿಳಿವುಗಳ ಹೋಲಿಕೆ  

ಶುಪ್ಪೀಮ್, ಹೋಸ ಎಂಬವರಿಗೆ ಪಶ್ಚಿಮ ಬಾಗಿಲೂ ಅದರ ಸಮೀಪದಲ್ಲಿರುವ ಶೆಲ್ಲೆಕೆತೆಂಬ ಬಾಗಿಲೂ ಚೀಟಿನಿಂದ ನೇಮಕವಾಗಿದ್ದವು. ಶೆಲ್ಲೆಕೆತ್ ಬಾಗಿಲು ಪಟ್ಟಣದಿಂದ ದೇವಾಲಯಕ್ಕೆ ಏರಿಹೋಗುವ ದಾರಿಯಲ್ಲಿದೆ.


ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ ಬಾಗಿಲ ನಿಲವುಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ದಹನಬಲಿ ಪ್ರಾಣಿಯನ್ನು ಶಾಂತಿಸಮಾಧಾನ ಬಲಿಪ್ರಾಣಿಯನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲ ಹೊಸ್ತಿಲಿನಲ್ಲಿ ಅಡ್ಡಬೀಳಲಿ; ಆಮೇಲೆ ಹೊರಟುಹೋಗಲಿ; ಅಂದು ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.


ರಾಜರು ಸರ್ವೇಶ್ವರನ ಸನ್ನಿಧಿಯಲ್ಲಿ ಹವಿರ್ಭೋಜನ ಮಾಡುವುದಕ್ಕೆ ಇಲ್ಲಿ ಕುಳಿತುಕೊಳ್ಳಬಹುದು; ಅವನು ಹೆಬ್ಬಾಗಿಲ ಕೈಸಾಲೆಯ ಮಾರ್ಗವಾಗಿ ಬಂದು ಅದೇ ಮಾರ್ಗವಾಗಿ ಹೊರಡಬೇಕು,” ಎಂದು ಹೇಳಿದರು.


ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತೂರಿಗಳನ್ನು ಊದುವವರು ಅರಸನ ಹತ್ತಿರವಿದ್ದರು; ಜನಸಾಮಾನ್ಯರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಾ ಜನಪದ ಕೀರ್ತನೆಗಳನ್ನು ನುಡಿಸುತ್ತಿದ್ದರು. ಇದನ್ನು ಕಂಡಕೂಡಲೆ ಆಕೆ ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.


ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿದ್ದ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ ಮತ್ತು ಅವರ ಉಡುಪುಗಳು, ಅವನ ಪಾನಸೇವಕರು, ಅವರ ಉಡುಪುಗಳು ಇವುಗಳನ್ನೆಲ್ಲಾ ನೋಡಿದಳು. ಅಂತೆಯೇ ಅವನು ಸರ್ವೇಶ್ವರನ ಆಲಯದಲ್ಲಿ ಸಮರ್ಪಿಸುತ್ತಿದ್ದ ದಹನ ಬಲಿಗಳನ್ನೂ ಗಮನಿಸಿದಳು.


ಇದುವರೆಗೂ ಶಲ್ಲೂಮನ ಕುಟುಂಬಸ್ಥರು ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲನ್ನು ಕಾಯುತ್ತಿದ್ದಾರೆ. ಇದಕ್ಕೆ ಮೊದಲು ಅವರು ಲೇವಿಯರ ಪಾಳೆಯಗಳ ಕಾವಲುಗಾರರಾಗಿ ಇದ್ದರು.


ಸರ್ವೇಶ್ವರನ ಆಲಯದ ಪ್ರಾಕಾರದೊಳಗೆ ಸಬ್ಬತ್ ದಿನದ ಆರಾಧನೆಗಾಗಿ ರಾಜರಿಗಾಗಿ ಕಟ್ಟಲಾಗಿದ್ದ ಮಂಟಪವನ್ನು ಹಾಗು ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದವನು ಈ ಆಹಾಜನೇ.


ಜೋರ್ಡನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲ ಅರಸರು ಮತ್ತು ಸಮುದ್ರದ ಬಳಿಯಿದ್ದ ಸರ್ವ ಕಾನಾನ್ ರಾಜರು ಸರ್ವೇಶ್ವರ ಸ್ವಾಮಿ ಇಸ್ರಯೇಲರ ಕಣ್ಮುಂದೆಯೇ ಜೋರ್ಡನನ್ನು ಬತ್ತಿಸಿ ಆ ನದಿ ದಾಟಿಸಿದರೆಂದು ಕೇಳಿದರು. ಆಗ ಅವರ ಎದೆ ಒಡೆದುಕೋಯಿತು. ಇಸ್ರಯೇಲರ ಮುಂದೆ ಅವರಿಗೆ ಧೈರ್ಯವಿಲ್ಲದೆ ಹೋಯಿತು.


“ಒಮ್ಮೆ, ಇಬ್ಬರು ಪ್ರಾರ್ಥನೆಮಾಡಲು ದೇವಾಲಯಕ್ಕೆ ಹೋದರು. ಇವರಲ್ಲಿ ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕವಸೂಲಿಯವನು.


ಶೆಬದ ರಾಣಿ ಸೊಲೊಮೋನನ ಹಲವಿಧವಾದ ಜ್ಞಾನೋಕ್ತಿಗಳನ್ನು ಕೇಳಿದಳು;


“ನಾನು ನನ್ನ ದೇಶದಲ್ಲಿ ನಿಮ್ಮ ಜ್ಞಾನವನ್ನೂ ಸಾಧನೆಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು