Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:22 - ಕನ್ನಡ ಸತ್ಯವೇದವು C.L. Bible (BSI)

22 ಫರೋಹನು, “ನನ್ನ ಬಳಿಯಲ್ಲಿ ನಿನಗೇನು ಕೊರತೆಯಾಯಿತು? ಸ್ವದೇಶಕ್ಕೆ ಹೋಗಬೇಕೆಂದು ಏಕೆ ಆಶಿಸುತ್ತಿ?” ಎಂದು ಕೇಳಿದನು. ಅವನು, “ಏನೂ ಕೊರತೆಯಾಗಿಲ್ಲ; ಆದರೂ ನನಗೆ ಹೋಗುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಉತ್ತರಕೊಟ್ಟನು. ಹದದನು ತನ್ನ ಊರಿಗೆ ಮರಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಫರೋಹನು ಅವನನ್ನು, “ನನ್ನ ಬಳಿಯಲ್ಲಿ ನೀನಗೇನು ಕೊರತೆಯಾಯಿತು. ಸ್ವದೇಶಕ್ಕೆ ಹೋಗಬೇಕೆಂದು ಯಾಕೆ ಬಯಸುತ್ತೀ?” ಎಂದು ಕೇಳಿದನು. ಅದಕ್ಕೆ ಹದದನು, “ಏನೂ ಕೊರತೆಯಾಗಿರುವುದಿಲ್ಲ. ಆದರೂ ನನಗೆ ಹೋಗುವುದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಫರೋಹನು ಅವನನ್ನು - ನನ್ನ ಬಳಿಯಲ್ಲಿ ನಿನಗೇನು ಕೊರತೆಯಾಯಿತು? ಸ್ವದೇಶಕ್ಕೆ ಹೋಗಬೇಕೆಂದು ಯಾಕೆ ಆಶಿಸುತ್ತೀ ಎಂದು ಕೇಳಲು ಅವನು - ಏನೂ ಕೊರತೆಯಾಗಿರುವದಿಲ್ಲ; ಆದರೂ ನನಗೆ ಹೋಗುವದಕ್ಕೆ ಅಪ್ಪಣೆಯಾಗಬೇಕು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ಫರೋಹನು “ನಿನಗೆ ಬೇಕಾದುದ್ದೆಲ್ಲವನ್ನು ನಾನು ಇಲ್ಲಿ ನಿನಗೆ ಕೊಟ್ಟಿದ್ದೇನೆ! ನೀನು ಸ್ವದೇಶಕ್ಕೆ ಹಿಂದಿರುಗಿ ಹೋಗಲು ಅಪೇಕ್ಷಿಸುತ್ತಿರುವುದಾದರೂ ಏಕೆ?” ಎಂದು ಕೇಳಿದನು. ಹದದನು, “ದಯವಿಟ್ಟು ನನ್ನ ಮನೆಗೆ ನಾನು ಹೋಗಲು ಬಿಡು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಫರೋಹನು ಅವನಿಗೆ, “ನೀನು ನಿನ್ನ ದೇಶಕ್ಕೆ ಹೋಗಬೇಕೆನ್ನುವ ಹಾಗೆ ನಿನಗೆ ನನ್ನ ಸಂಗಡ ಇರುವಾಗ ಏನು ಕೊರತೆಯಾಯಿತು?” ಎಂದು ಕೇಳಿದನು. ಅವನು, “ಏನೂ ಇಲ್ಲ, ಆದರೆ ನಾನು ಅಲ್ಲಿಗೆ ಹೋಗಲು ಅಪ್ಪಣೆಯಾಗಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:22
8 ತಿಳಿವುಗಳ ಹೋಲಿಕೆ  

ಬಳಿಕ ಯೇಸುಸ್ವಾಮಿ, “ನಾನು ನಿಮ್ಮನ್ನು ಬುತ್ತಿ, ಜೋಳಿಗೆ, ಜೋಡು ಒಂದೂ ಇಲ್ಲದೆ ಕಳಿಸಿದಾಗ ನಿಮಗೇನಾದರೂ ಕೊರತೆ ಆಯಿತೇ?” ಎಂದು ಶಿಷ್ಯರನ್ನು ಕೇಳಿದರು. ಅದಕ್ಕೆ ಅವರು, “ಇಲ್ಲ,” ಎಂದು ಉತ್ತರಕೊಟ್ಟರು.


ಆದರೆ ಪೇತ್ರನು, “ನಾನು ತಮ್ಮೊಡನೆ ಸಾಯಬೇಕಾಗಿ ಬಂದರೂ ತಮ್ಮನ್ನು ಮಾತ್ರ ನಿರಾಕರಿಸೆನು,” ಎಂದು ಆವೇಶಪೂರಿತನಾಗಿ ನುಡಿದನು. ಹಾಗೆಯೇ ಉಳಿದವರೂ ಹೇಳಿದರು.


ಇಸ್ರಯೇಲ್ ಜನರೇ, ದುಷ್ಟಸಂತತಿಯವರೇ, ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿರಿ : ನಾನು ನಿಮಗೆ ಬೆಂಗಾಡಾಗಿಯೂ ಗಾಢಾಂಧಕಾರವಾಗಿಯೂ ಪರಿಣಮಿಸಿದ್ದೇನೊ? ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ; ನಿನ್ನ ಬಳಿಗೆ ಇನ್ನು ಬಾರೆವು’ ಎಂದು ನನ್ನ ಜನರಾದ ನೀವು ಹೇಳುವುದು ಹೇಗೆ?


ಅಡಗಿಸು ಕೋಪವನು; ವರ್ಜಿಸು ಕ್ರೋಧವನು I ಕಿಡಿಕಿಡಿಯಾಗಬೇಡ, ತರುವುದದು ಕೇಡನು II


ದಾವೀದನು ಸತ್ತು ಪಿತೃಗಳ ಬಳಿಗೆ ಸೇರಿದನೆಂದೂ ಸೇನಾಪತಿಯಾದ ಯೋವಾಬನು ಮೃತನಾದನೆಂದೂ ಈಜಿಪ್ಟಿನಲ್ಲಿದ್ದ ಹದದನು ಕೇಳಿದನು. ಫರೋಹನಿಗೆ ಅವನು, “ನಾನು ಸ್ವದೇಶಕ್ಕೆ ಹೋಗಬೇಕೆಂದಿರುತ್ತೇನೆ; ಅಪ್ಪಣೆಕೊಡಿ,” ಎಂದನು.


ಸೊಲೊಮೋನನಿಗೆ ವಿರುದ್ಧ ದೇವರು ಎಬ್ಬಿಸಿದ ಎರಡನೆಯ ವೈರಿ ಎಲ್ಯಾದಾವನ ಮಗ ರೆಜೋನ್ ಎಂಬವನು.


ಮನೆಬಿಟ್ಟು ಅಲೆಯುವ ವ್ಯಕ್ತಿ, ಗೂಡುಬಿಟ್ಟು ಅಲೆಯುವ ಹಕ್ಕಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು