Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:29 - ಕನ್ನಡ ಸತ್ಯವೇದವು C.L. Bible (BSI)

29 ಒಂದು ದಿವಸ ಯಾರೊಬ್ಬಾಮನು ಜೆರುಸಲೇಮಿನಿಂದ ಎಲ್ಲಿಗೋ ಹೋಗುತ್ತಿರುವಾಗ ಅಡವಿಯಲ್ಲಿ ಶಿಲೋವಿನವನಾದ ಅಹೀಯನೆಂಬ ಪ್ರವಾದಿ ಅವನಿಗೆ ಎದುರಾದನು. ಇವನು ಹೊಸ ಬಟ್ಟೆಯನ್ನು ಹೊದ್ದುಕೊಂಡಿದ್ದನು. ಅಲ್ಲಿ ಇವರಿಬ್ಬರ ಹೊರತಾಗಿ ಬೇರೆ ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಒಂದು ದಿನ ಯಾರೊಬ್ಬಾಮನು ಯೆರೂಸಲೇಮಿನಿಂದ ಎಲ್ಲಿಗೋ ಹೋಗುತ್ತಿರುವಾಗ ಅಡವಿಯಲ್ಲಿ ಶಿಲೋವಿನವನಾದ ಅಹೀಯನೆಂಬ ಪ್ರವಾದಿಯು ಅವನಿಗೆ ಎದುರಾದನು. ಅವನು ಹೊಸ ಬಟ್ಟೆಯನ್ನು ಹೊದ್ದುಕೊಂಡಿದ್ದನು. ಅಲ್ಲಿ ಇವರಿಬ್ಬರ ಹೊರತಾಗಿ ಬೇರೆ ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಒಂದು ದಿವಸ ಯಾರೊಬ್ಬಾಮನು ಯೆರೂಸಲೇವಿುನಿಂದ ಎಲ್ಲಿಗೋ ಹೋಗುತ್ತಿರುವಾಗ ಅಡವಿಯಲ್ಲಿ ಶೀಲೋವಿನವನಾದ ಅಹೀಯನೆಂಬ ಪ್ರವಾದಿಯು ಅವನಿಗೆ ಎದುರಾದನು. ಇವನು ಹೊಸ ಬಟ್ಟೆಯನ್ನು ಹೊದ್ದುಕೊಂಡಿದ್ದನು. ಅಲ್ಲಿ ಇವರಿಬ್ಬರ ಹೊರತಾಗಿ ಬೇರೆ ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಒಂದು ದಿನ ಯಾರೊಬ್ಬಾಮನು ಜೆರುಸಲೇಮಿನ ಹೊರಗೆ ಹೋಗುತ್ತಿದ್ದನು. ಶೀಲೋವಿನ ಪ್ರವಾದಿಯಾದ ಅಹೀಯನು ಅವನನ್ನು ರಸ್ತೆಯಲ್ಲಿ ಸಂಧಿಸಿದನು. ಅಹೀಯನು ಹೊಸ ಅಂಗಿಯನ್ನು ಧರಿಸಿದ್ದನು. ನಿರ್ಜನವಾಗಿದ್ದ ಆ ದೇಶದಲ್ಲಿ ಇವರಿಬ್ಬರೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆ ಕಾಲದಲ್ಲಿ, ಯಾರೊಬ್ಬಾಮನು ಯೆರೂಸಲೇಮಿನೊಳಗಿಂದ ಹೊರಟು ಹೋಗುವಾಗ, ಶೀಲೋವಿನವನಾದ ಅಹೀಯನೆಂಬ ಪ್ರವಾದಿಯು ಅವನನ್ನು ಹಾದಿಯಲ್ಲಿ ಕಂಡನು. ಅವನು ಹೊಸ ಕಂಬಳಿಯನ್ನು ಹೊದ್ದುಕೊಂಡಿದ್ದನು. ಅವರಿಬ್ಬರೂ ಹೊಲದಲ್ಲಿ ಒಂಟಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:29
10 ತಿಳಿವುಗಳ ಹೋಲಿಕೆ  

ಸೊಲೊಮೋನನ ಉಳಿದ ಪೂರ್ವೋತ್ತರ ಚರಿತ್ರೆಯನ್ನು, ಪ್ರವಾದಿ ನಾತಾನನ ಚರಿತ್ರೆ ಶೀಲೋವಿನವನಾದ ಅಹೀಯನ ಪ್ರವಾದನೆ ಹಾಗೂ ದಿವ್ಯದರ್ಶಿಯಾದ ಇದ್ದೋವನು ನೆಬಾಟನ ಮಗ ಯಾರೊಬ್ಬಾಮನನ್ನು ಕುರಿತು ನುಡಿದ ದರ್ಶನೋಕ್ತಿ ಎಂಬ ಗ್ರಂಥಗಳಲ್ಲಿ ಬರೆದಿಡಲಾಗಿ ಇದೆ.


ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ, “ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷಮಾರ್ಪಡಿಸಿಕೊಂಡು ಶಿಲೋವಿಗೆ ಹೋಗು. ನಾನು ಈ ಜನರಿಗೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿ ಅಹೀಯನು ಅಲ್ಲಿರುತ್ತಾನೆ.


ಅವನು ಜನರ ಮಾತನ್ನು ಕೇಳದೆಹೋದದ್ದು ಸರ್ವೇಶ್ವರನಿಂದಲೇ ಸಂಭವಿಸಿತ್ತು. ಹೀಗೆ ಸರ್ವೇಶ್ವರ ಶಿಲೋವಿನವನಾದ ಅಹೀಯನ ಮುಖಾಂತರ ನೆಬಾಟನ ಮಗ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.


ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿವಸ ಇವರು ಇಬ್ಬರೂ ಹೊಲದಲ್ಲಿ ಜಗಳವಾಡಿದರು. ಅಲ್ಲಿ ಬಿಡಿಸುವವರಾರೂ ಇರಲಿಲ್ಲ. ಆದುದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು.


ನಾಡೆಲ್ಲವು ತಮ್ಮ ವಶವಾದ ಮೇಲೆ ಇಸ್ರಯೇಲ್ ಜನಾಂಗವೆಲ್ಲ ಶೀಲೋವಿನಲ್ಲಿ ಕೂಡಿ ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ಬಳಿಕ ಕಾಯಿನನು ತಮ್ಮ ಹೇಬೆಲನಿಗೆ, “ಹೊಲಕ್ಕೆ ಹೋಗೋಣ ಬಾ”, ಎಂದು ಕರೆದನು. ಅವರಿಬ್ಬರೂ ಅಲ್ಲಿಗೆ ಬಂದಾಗ ಕಾಯಿನನು ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.


ಆದ್ದರಿಂದ ಸರ್ವೇಶ್ವರ ಅವನ ಮೇಲೆ ಕೋಪಗೊಂಡು, “ನೀನು ಹೀಗೆ ಮಾಡಿ ನನ್ನ ನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ಕಿತ್ತುಕೊಂಡು ನಿನ್ನ ದಾಸನಿಗೆ ಕೊಡುವೆನು.


ಆಕೆ ಅವನು ಹೇಳಿದಂತೆಯೇ ಮಾಡಿ ಶಿಲೋವಿನಲ್ಲಿದ್ದ ಅಹೀಯನ ಮನೆಗೆ ಹೋದಳು. ಅಹೀಯನಿಗೆ ನೋಡಲಾಗುತ್ತಿರಲಿಲ್ಲ; ಮುಪ್ಪಿನಿಂದ ಅವನ ಕಣ್ಣು ಮೊಬ್ಬಾಗಿದ್ದವು.


ಅರಸನು ಜನರ ಮಾತನ್ನು ಕೇಳದೆ ಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಸರ್ವೇಶ್ವರ ಶಿಲೋವಿನವನಾದ ಅಹೀಯನ ಮುಖಾಂತರ ನೆಬಾಟನ ಮಗ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.


ಅರಸ ಸೊಲೊಮೋನನಿಂದ ತಪ್ಪಿಸಿಕೊಂಡು ಈಜಿಪ್ಟಿಗೆ ಓಡಿಹೋಗಿದ್ದ ನೆಬಾಟನ ಮಗ ಯಾರೊಬ್ಬಾಮನನ್ನು ಕರೆಸಿಕೊಂಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು