Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:15 - ಕನ್ನಡ ಸತ್ಯವೇದವು C.L. Bible (BSI)

15 ಅವನು ಜನರ ಮಾತನ್ನು ಕೇಳದೆಹೋದದ್ದು ಸರ್ವೇಶ್ವರನಿಂದಲೇ ಸಂಭವಿಸಿತ್ತು. ಹೀಗೆ ಸರ್ವೇಶ್ವರ ಶಿಲೋವಿನವನಾದ ಅಹೀಯನ ಮುಖಾಂತರ ನೆಬಾಟನ ಮಗ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ಜನರ ಮಾತನ್ನು ಕೇಳದೇ ಹೋದದ್ದು ಯೆಹೋವನಿಂದಲೇ. ಈ ಪ್ರಕಾರ ಯೆಹೋವನು ಶಿಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನು ಜನರ ಮಾತನ್ನು ಕೇಳದೆಹೋದದ್ದು ಯೆಹೋವನಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ರಾಜನು ಜನರ ಅಪೇಕ್ಷೆಯನ್ನು ನೆರವೇರಿಸಲಿಲ್ಲ. ನೆಬಾಟನ ಮಗನಾದ ಯಾರೊಬ್ಬಾಮನಿಗೆ ತಾನು ಮಾಡಿದ್ದ ವಾಗ್ದಾನವನ್ನು ಈಡೇರಿಸಲು ಯೆಹೋವನೇ ಹೀಗೆ ಮಾಡಿದನು. ಯೆಹೋವನು ಪ್ರವಾದಿಯಾದ ಅಹೀಯನ ಮೂಲಕ ಈ ವಾಗ್ದಾನವನ್ನು ಮಾಡಿದ್ದನು. ಅಹೀಯನು ಶೀಲೋವಿನವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅರಸನು ಜನರ ಮಾತನ್ನು ಕೇಳದೆಹೋದದ್ದು ಯೆಹೋವ ದೇವರಿಂದಲೇ. ಹೀಗೆ ಯೆಹೋವ ದೇವರು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ಈಡೇರುವುದಕ್ಕೆ ಕಾರಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:15
27 ತಿಳಿವುಗಳ ಹೋಲಿಕೆ  

ನೀವು ನಿಮ್ಮ ಸಹೋದರರಾದ ಇಸ್ರಯೇಲರೊಡನೆ ಯುದ್ಧಮಾಡಲು ಹೋಗಬಾರದು; ಎಲ್ಲರೂ ಹಿಂದಿರುಗಿ ಹೋಗಿರಿ; ಈ ವಿಭಜನಾಕಾರ್ಯ ಸರ್ವೇಶ್ವರನಿಂದಾಗಿದೆ, ಎಂದು ಹೇಳಬೇಕು.” ಅಂತೆಯೇ ಆ ಜನರು ಸರ್ವೇಶ್ವರನ ಮಾತನ್ನು ಕೇಳಿ ಹಿಂದಿರುಗಿ ಹೋದರು.


ಫಿಲಿಷ್ಟಿಯರ ದಂಡನೆಗೆ ಕಾರಣವನ್ನು ಹುಡುಕುತ್ತಿದ್ದ ಸರ್ವೇಶ್ವರನ ಪ್ರೇರಣೆಯಿಂದಲೇ ಇದೆಲ್ಲ ಸಂಭವಿಸಿತೆಂದು ಅವನ ತಂದೆತಾಯಿಗಳಿಗೆ ಗೊತ್ತಾಗಲಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಯೇಲರ ಮೇಲೆ ದೊರೆತನ ನಡೆಸುತ್ತಿದ್ದರು.


ಆದರೆ ಸರ್ವೇಶ್ವರ ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು, ಹಟಮಾರಿಯನ್ನಾಗಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ನಿಮ್ಮಿಂದ ಅವನು ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಸರ್ವೇಶ್ವರನ ಸಂಕಲ್ಪವಾಗಿತ್ತು. ಅದು ಈಗಾಗಲೇ ನೆರವೇರಿದೆ.


ಅಮಚ್ಯನು ಆ ಮಾತನ್ನು ಲಕ್ಷಿಸಲಿಲ್ಲ; ಹಾಗಾಗಬೇಕೆಂದೇ ದೇವರ ಸಂಕಲ್ಪವಾಗಿತ್ತು. ಯೆಹೂದ್ಯರೂ ಎದೋಮ್ಯರ ದೇವತೆಗಳಲ್ಲಿ ಭಕ್ತಿಯನ್ನಿಟ್ಟದ್ದರಿಂದ ಅವರನ್ನು ಪರಾಧೀನ ಮಾಡಬೇಕೆಂದು ದೇವರು ನಿರ್ಣಯಿಸಿದ್ದರು.


ಅಹಜ್ಯನು ಯೋರಾಮನ ಬಳಿಗೆ ಹೋಗಿ ನಾಶವಾದದ್ದು ದೈವಸಂಕಲ್ಪದಿಂದಲೇ. ಅವನು ಆ ಸ್ಥಳವನ್ನು ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗ ಯೇಹುವನ್ನು ಎದುರುಗೊಳ್ಳುವುದಕ್ಕೆ ಹೋದನು. ಸರ್ವೇಶ್ವರ ಅಹಾಬನ ಮನೆಯನ್ನು ನಿರ್ನಾಮ ಮಾಡುವುದಕ್ಕಾಗಿಯೇ ಯೇಹುವಿಗೆ ರಾಜಾಭಿಷೇಕ ಮಾಡಿಸಿ ಇದ್ದರು.


ಅರಸನು ಜನರ ಮಾತನ್ನು ಕೇಳದೆ ಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಸರ್ವೇಶ್ವರ ಶಿಲೋವಿನವನಾದ ಅಹೀಯನ ಮುಖಾಂತರ ನೆಬಾಟನ ಮಗ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.


ಆದ್ದರಿಂದ ಸರ್ವೇಶ್ವರ ಅವನ ಮೇಲೆ ಕೋಪಗೊಂಡು, “ನೀನು ಹೀಗೆ ಮಾಡಿ ನನ್ನ ನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ಕಿತ್ತುಕೊಂಡು ನಿನ್ನ ದಾಸನಿಗೆ ಕೊಡುವೆನು.


ನೀವು ಸಂಯೋಜಿಸಿದ್ದು ಹಾಗೂ ಸಂಕಲ್ಪಿಸಿದ್ದು ಈಡೇರುವಂತೆ ಅವರು ಹೀಗೆ ವರ್ತಿಸಿದರು.


ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.


ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ?


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನಾನು ಆಲೋಚನಾಮಂತ್ರಿಯನ್ನಾಗಿ ನೇಮಿಸಲಿಲ್ಲ; ಬಾಯಿಮುಚ್ಚುವಿಯೋ: ಅಥವಾ ಏಟು ತಿನ್ನುವಿಯೋ?’ ಎಂದನು. ಅದಕ್ಕೆ ಅವನು, “ನೀವು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುವುದರಿಂದ ದೇವರು ನಿಮ್ಮನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾರೆಂದು ನಾನು ಬಲ್ಲೆ,” ಎಂದು ಹೇಳಿ ಸುಮ್ಮನಾದನು.


ಇಗೋ, ಅಹಾಬನ ಮನೆಯವರನ್ನುಕುರಿತು ಸರ್ವೇಶ್ವರ ಹೇಳಿದ ಮಾತುಗಳೆಲ್ಲಾ ತಪ್ಪದೆ ನೆರವೇರುವುದೆಂದು ತಿಳಿದುಕೊಳ್ಳಿರಿ. ಸರ್ವೇಶ್ವರ ತಮ್ಮ ದಾಸನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾರಷ್ಟೇ,” ಎಂದು ಹೇಳಿದನು.


ಅವರು ಹಿಂದಿರುಗಿ, ಯೇಹುವಿನ ಹತ್ತಿರ ಬಂದು, ಆ ಸಂಗತಿಯನ್ನು ತಿಳಿಸಿದರು. ಅವನು ಅವರಿಗೆ, “’ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಜೆಸ್ರೀಲಿನ ಹೊಲದಲ್ಲಿ ತಿಂದುಬಿಡುವುವು;


ನೋಡು, ಸರ್ವೇಶ್ವರ ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾರೆ,” ಎಂದು ಹೇಳಿದನು.


ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲ ಇಸ್ರಯೇಲರೂ, “ಅರ್ಕಿಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೆಯದಾಗಿದೆ,” ಎಂದರು. ಹೀಗೆ ಸರ್ವೇಶ್ವರ ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು, ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದರು.


“ಸಹೋದರರೇ, ನೀವೂ ನಿಮ್ಮ ಅಧಿಕಾರಿಗಳೂ ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನಾನು ಬಲ್ಲೆ.


ಅವರಪರಾಧಿಗಳೆಂದು ಹೇ ದೇವಾ, ನಿರ್ಣಯಿಸಿಬಿಡು I ಅವರ ಮೋಸದ ಪಾಶದಲೇ ಅವರನು ಸಿಕ್ಕಿಸಿಬಿಡು I ಅವರನೇಕ ಪಾಪಗಳಿಗಾಗಿ ಅವರನು ದಬ್ಬಿಬಿಡು I ಅವರು ನಿನ್ನ ವಿರುದ್ಧ ದಂಗೆಯೆದ್ದವರು, ನೋಡು II


ಇಸ್ರಯೇಲರ ನಿತ್ಯಾಧಾರವಾದ ಅವರು ಸುಳ್ಳಾಡುವವರಲ್ಲ; ಮಾತನ್ನು ಹಿಂತೆಗೆದುಕೊಳ್ಳುವವರಲ್ಲ; ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದು ಹೇಳಿದನು.


ಅದಕ್ಕೆ ಲಾಬಾನನು ಮತ್ತು ಬೆತೂವೇಲನು, ” ಇದು ಸರ್ವೇಶ್ವರ ಸ್ವಾಮಿಯಿಂದಲೇ ಬಂದ ಸೂಚನೆ, ಇದಕ್ಕೆ ನಾವು ನಿನಗೆ 'ಹೌದು - ಇಲ್ಲ’ ಎಂದು ಹೇಳಲಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು