Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:21 - ಕನ್ನಡ ಸತ್ಯವೇದವು C.L. Bible (BSI)

21 ಸೊಲೊಮೋನನ ಮಗ ರೆಹಬ್ಬಾಮನು ಜೆರುಸಲೇಮನ್ನು ಮುಟ್ಟಿದನಂತರ ಇಸ್ರಯೇಲರಿಗೆ ವಿರುದ್ಧ ಯುದ್ಧಮಾಡುವುದಕ್ಕೂ ರಾಜ್ಯವನ್ನು ಮರಳಿ ತನಗೆ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಒಂದು ಲಕ್ಷದ ಎಂಬತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಸೊಲೊಮೋನನ ಮಗನಾದ ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೂ ರಾಜ್ಯವನ್ನು ತಿರುಗಿ ತನಗೆ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಬತ್ತು ಸಾವಿರ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಸೊಲೊಮೋನನ ಮಗನಾದ ರೆಹಬ್ಬಾಮನು ಯೆರೂಸಲೇಮನ್ನು ಮುಟ್ಟಿದನಂತರ ಇಸ್ರಾಯೇಲ್ಯರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೂ ರಾಜ್ಯವನ್ನು ತಿರಿಗಿ ತನಗೆ ವಶಪಡಿಸಿಕೊಳ್ಳುವದಕ್ಕೂ ಯೆಹೂದ ಬೆನ್ಯಾಮೀನ್‍ಕುಲಗಳಿಂದ ಲಕ್ಷದ ಎಂಭತ್ತುಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ರೆಹಬ್ಬಾಮನು ಜೆರುಸಲೇಮಿಗೆ ಹಿಂದಿರುಗಿ ಹೋದನು. ಅವನು ಯೆಹೂದದ ಕುಟುಂಬಗಳನ್ನು ಮತ್ತು ಬೆನ್ಯಾಮೀನ್ ಕುಟುಂಬಗಳನ್ನು ಒಟ್ಟಾಗಿ ಸೇರಿಸಿದನು. ಅವರಲ್ಲಿ ಒಂದು ಲಕ್ಷದ ಎಂಭತ್ತು ಸಾವಿರ ಸೈನಿಕರಿದ್ದರು. ರೆಹಬ್ಬಾಮನು ಇಸ್ರೇಲಿನ ಜನರ ವಿರುದ್ಧ ಯುದ್ಧಮಾಡಲು ಅಪೇಕ್ಷಿಸಿದನು. ಅವನು ತನ್ನ ರಾಜ್ಯವನ್ನು ಪುನರ್‌ಸ್ಥಾಪಿಸಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಸೊಲೊಮೋನನ ಮಗನಾದ ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ, ರಾಜ್ಯವನ್ನು ತಿರುಗಿ ಪಡೆಯುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು ಬೆನ್ಯಾಮೀನನ ಗೋತ್ರದ ಮತ್ತು ಯೆಹೂದನ ಸಮಸ್ತ ಕುಟುಂಬಗಳಿಂದ 1,80,000 ಸಮರ್ಥ ಸೈನಿಕರನ್ನು ಆಯ್ದುಕೊಂಡು ಒಟ್ಟುಗೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:21
8 ತಿಳಿವುಗಳ ಹೋಲಿಕೆ  

ಆಸನು ತನ್ನ ದೇವರಾದ ಸರ್ವೇಶ್ವರನಿಗೆ, “ಸರ್ವೇಶ್ವರಾ, ಬಲಿಷ್ಠನು ಬಲಹೀನನ ಮೇಲೆ ಬೀಳುವಾಗ, ನಿಮ್ಮ ಹೊರತು ರಕ್ಷಕನಿಲ್ಲ. ನಿಮ್ಮಲ್ಲಿ ಭರವಸೆ ಇಟ್ಟು ನಿಮ್ಮ ಹೆಸರಿನಲ್ಲಿ ಈ ಮಹಾ ಸೇನೆಗೆ ವಿರುದ್ಧ ಯುದ್ಧಕ್ಕೆ ಬಂದಿದ್ದೇವೆ. ಸರ್ವೇಶ್ವರಾ, ನಮ್ಮ ದೇವರು ನೀವು; ನರರು ನಿಮ್ಮನ್ನು ಎದುರಿಸಿ ಗೆಲ್ಲಬಾರದು,” ಎಂದು ಮೊರೆ ಇಟ್ಟನು.


ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿ ಬರ್ಜಿಗಳನ್ನು ಹಿಡಿದ ಮೂರು ಲಕ್ಷ ಮಂದಿ ಯೆಹೂದ್ಯರಿದ್ದರು. ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆದ ಎರಡು ಲಕ್ಷದ ಎಂಬತ್ತು ಸಾವಿರ ಮಂದಿ ಬೆನ್ಯಾಮೀನ್ಯರೂ ಇದ್ದರು. ಇವರೆಲ್ಲರು ರಣವೀರರು.


ಯೋವಾಬನು ದಾವೀದನಿಗೆ ಒಪ್ಪಿಸಿದ ಜನಗಣತಿಯ ಅಂಕೆಸಂಖ್ಯೆಗಳು ಇವು: ಇಸ್ರಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಹನ್ನೊಂದು ಲಕ್ಷ; ಯೆಹೂದ್ಯರಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ.


ತನ್ನ ದಾಸ ದಾವೀದನ ನಿಮಿತ್ತ ಹಾಗು ತಾವು ಇಸ್ರಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಜೆರುಸಲೇಮ್ ಪಟ್ಟಣದ ನಿಮಿತ್ತ ಅವನಿಗೆ ಒಂದೇ ಒಂದು ಕುಲವನ್ನು ಉಳಿಸಿ, ಬೇರೆ ಹತ್ತು ಕುಲಗಳನ್ನು ನಿನಗೆ ಕೊಡುತ್ತೇನೆಂದು ಹೇಳಿದ್ದಾರೆ.


ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು