Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:29 - ಕನ್ನಡ ಸತ್ಯವೇದವು C.L. Bible (BSI)

29 ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿದನು; ಇನ್ನೊಂದನ್ನು ದಾನಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಂತರ ಅವನು ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿ, ಇನ್ನೊಂದನ್ನು ದಾನಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿ ಇನ್ನೊಂದನ್ನು ದಾನಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ರಾಜನಾದ ಯಾರೊಬ್ಬಾಮನು ಒಂದು ಬಂಗಾರದ ಕರುವನ್ನು ಬೇತೇಲಿನಲ್ಲಿರಿಸಿದನು; ಮತ್ತೊಂದು ಬಂಗಾರದ ಕರುವನ್ನು ದಾನ್ ನಗರದಲ್ಲಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಒಂದನ್ನು ಬೇತೇಲಿನಲ್ಲಿಯೂ, ಒಂದನ್ನು ದಾನಿನಲ್ಲಿಯೂ ಸ್ಥಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:29
21 ತಿಳಿವುಗಳ ಹೋಲಿಕೆ  

‘ಲೂಜ್’ ಎಂದು ಹೆಸರು ಪಡೆದಿದ್ದ ಆ ಊರಿಗೆ ‘ಬೇತೇಲ್’ ಎಂದು ನಾಮಕರಣ ಮಾಡಿದನು.


ದಾನೇ, ನಿನ್ನ ದೇವರ ಜೀವದಾಣೆ’ ಎಂದೂ, ‘ಬೇರ್ಷೆಬಾ ಯಾತ್ರೆಯ ಜೀವದಾಣೆ’ ಎಂದೂ ಸಮಾ‍ರ್ಯದ ವಿಗ್ರಹಗಳ ಮೇಲೆ ಪ್ರಮಾಣ ಮಾಡುವವರು ಮತ್ತೆ ಏಳದಂತೆ ಬಿದ್ದುಹೋಗುವರು.”


“ಓ ಇಸ್ರಯೇಲ್ ನೀನು ವೇಶ್ಯೆಯಾಗಿ ನಡೆದರೂ ಜುದೇಯ ನಾಡು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಬರಬೇಡಿ. ಬೇತಾವೆನಿಗೆ ಯಾತ್ರೆ ಹೋಗಬೇಡಿ. ‘ಜೀವಸ್ವರೂಪನಾದ ಸರ್ವೇಶ್ವರನಾಣೆ’ ಎಂದು ಪ್ರಮಾಣಮಾಡಬೇಡಿ.


ವೈರಿ ಕುದುರೆಗಳ ಬುಸುಗುಟ್ಟುವಿಕೆ ಏಕೆ ಕೇಳಿಬರುತ್ತಿದೆ ದಾನಿನಿಂದ? ನಾಡನ್ನೆ ಕಂಪಿಸುತ್ತಿದೆ ಅವುಗಳ ಕೆನೆತದ ನಾದ. ಶತ್ರುಗಳು ಬಂದೇಬಿಟ್ಟರು ! ನಾಡನ್ನೂ ಅದರಲ್ಲಿ ಇರುವುದೆಲ್ಲವನ್ನೂ, ನಗರವನ್ನೂ ಅದರ ನಿವಾಸಿಗಳನ್ನೂ ನುಂಗಿಯೇ ಬಿಟ್ಟರು !”


ಆದರೂ ಅವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗವನ್ನು ಕೈಬಿಡದೆ, ಬೇತೇಲ್, ದಾನ್ ಎಂಬ ಊರುಗಳಲ್ಲಿದ್ದ ಚಿನ್ನದ ಹೋರಿಕರುಗಳನ್ನು ಪೂಜಿಸುತ್ತಿದ್ದನು.


ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಯೇಲರೆಲ್ಲರು ಏಕ ಮನಸ್ಸಿನಿಂದ ಹೊರಟು ಮಿಚ್ಫೆಗೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಸಭೆ ಸೇರಿದರು.


ಮೋಶೆ ಮೋವಾಬ್ಯರ ಬಯಲು ನಾಡಿನಿಂದ ಜೆರಿಕೋ ಪಟ್ಟಣಕ್ಕೆ ಎದುರಾಗಿ ಇರುವ ನೆಬೋ ಪರ್ವತಕ್ಕೆ ಹೋಗಿ, ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಸರ್ವೆಶ್ವರ ಕಾನಾನ್ ನಾಡೆಲ್ಲವನ್ನು ಅಂದರೆ, ದಾನ್ ಪಟ್ಟಣದವರೆಗಿದ್ದ ಗಿಲ್ಯಾದ್ ಪ್ರಾಂತ್ಯ,


ದೇವರು ಯಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋಗಿ ಅಲ್ಲೇ ವಾಸಮಾಡು. ನೀನು ನಿನ್ನ ಅಣ್ಣ ಏಸಾವನ ಬಳಿಯಿಂದ ಓಡಿಹೋಗುವಾಗ ನಿನಗಲ್ಲಿ ದರ್ಶನ ಇತ್ತ ದೇವರು ನಾನೇ. ನನಗೊಂದು ಬಲಿಪೀಠವನ್ನು ಅಲ್ಲಿ ಕಟ್ಟಿಸು,” ಎಂದು ಹೇಳಿದರು.


ಅಬ್ರಾಮನು ತನ್ನ ತಮ್ಮನ ಮಗ ಸೆರೆಗೆ ಸಿಕ್ಕಿರುವುದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದು ಸುಶಿಕ್ಷಿತರಾದ 318 ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟನು. ಈ ನಾಲ್ಕು ಮಂದಿ ರಾಜರನ್ನು ದಾನೂರಿನವರೆಗೆ ಹಿಂದಟ್ಟಿದನು.


ಬಳಿಕ ಅವನು ಅಲ್ಲಿಂದ ದಕ್ಷಿಣಕ್ಕೆ ಹೊರಟು ಬೇತೇಲಿಗೆ ಪೂರ್ವಕ್ಕಿರುವ ಗುಡ್ಡಗಾಡಿಗೆ ಬಂದು ಗುಡಾರ ಹಾಕಿ ನೆಲಸಿದನು. ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರು ಇದ್ದವು. ಅಲ್ಲೂ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಅವರ ನಾಮಸ್ಮರಣೆಮಾಡಿ ಆರಾಧಿಸಿದನು.


ಅವರು ತನಗಿಂಥ ಬಲಿಷ್ಠರೆಂದು ಮೀಕನು ತಿಳಿದು ಹಿಂದಿರುಗಿ ಮನೆಗೆ ಹೋದನು.


ಬೆನ್ಹದದನು ಅರಸ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಅಬೇಲ್ಬೇತ್ಮಾಕಾ, ಕಿನ್ನೆರೋತ್ ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು.


ದಾರಿಯಲ್ಲಿ ಎಲೀಯನು ಎಲೀಷನಿಗೆ, “ದಯವಿಟ್ಟು ನೀನು ಇಲ್ಲೇ ಇರು; ಸರ್ವೇಶ್ವರ ನನಗೆ ಬೇತೇಲಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾರೆ,” ಎಂದನು. ಎಲೀಷನು, “ಸರ್ವೇಶ್ವರನ ಆಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರಲಾರೆ,” ಎಂದು ಉತ್ತರಕೊಟ್ಟನು. ಬಳಿಕ ಅವರಿಬ್ಬರೂ ಬೇತೇಲಿಗೆ ಹೋದರು.


ಇಸ್ರಯೇಲ್ ವಂಶದವರು ನಂಬಿಕೆ ಇಟ್ಟಿದ್ದ ಬೇತೇಲ್ ಕ್ಷೇತ್ರವನ್ನು ಕುರಿತು ಆಶಾಭಂಗಪಟ್ಟಂತೆ ಆಗ ಮೋವಾಬ್ಯರು ತಮ್ಮ ಕೆಮೋಷ್ ದೇವತೆಯನ್ನು ಕುರಿತು ಆಶಾಭಂಗಪಡುವರು.


ಬೇತಾವೆನಿನ ಬಸವನಿಗೆ ಸಮಾರ್ಯದ ನಿವಾಸಿಗಳು ದಿಗಿಲುಗೊಳ್ಳುವರು; ಅದನ್ನು ಕಾಣದುದಕ್ಕಾಗಿ ಭಕ್ತಜನರು ಎದೆಬಡಿದುಕೊಳ್ಳುವರು. ಅದರ ಮಹಿಮೆ ನಂದಿಹೋಯಿತು ಎಂದು ಪೂಜಾರಿಗಳು ಗೋಳಾಡುವರು.


ಬೇತೇಲಿಗೆ ಹೋಗಬೇಡಿ, ಗಿಲ್ಗಾಲಿಗೆ ಸೇರಬೇಡಿ. ಬೆರ್ಷೆಬಾಗೆ ಯಾತ್ರೆ ಹೋಗಬೇಡಿ. ಗಿಲ್ಗಾಲ್ ಗಡೀಪಾರಾಗುವುದು. ಬೇತೇಲ್ ಬಯಲಾಗುವುದು.”


ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜನ ಗರ್ಭಗುಡಿ, ರಾಜ್ಯದ ಪವಿತ್ರಾಲಯ,” ಎಂದನು.


ಯೆಹೋಶುವನು ಕೆಲವು ಜನರನ್ನು ಕರೆದು, “ನೀವು ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ‘ಆಯಿ’ ಎಂಬ ಪ್ರಾಂತ್ಯಕ್ಕೆ ಹೋಗಿ ಬೇಹುನೋಡಿ ಬನ್ನಿ,” ಎಂದು ಹೇಳಿ ಅವರನ್ನು ಜೆರಿಕೋವಿನಿಂದ ಕಳಿಸಿದನು. ಅವರು ಹೋಗಿ ಆಯಿ ಎಂಬ ಊರನ್ನು ಸಂಚರಿಸಿ ಬೇಹು ನೋಡಿ ಹಿಂದಿರುಗಿ ಬಂದರು.


ಬೇತೇಲಿನ ಪೀಠದ ಬಳಿ ನಿಂತಿದ್ದ ಅರಸನು ಆ ದೈವಭಕ್ತನು ಪೀಠಕ್ಕೆ ವಿರೋಧವಾಗಿ ನುಡಿದದ್ದನ್ನು ಕೇಳಿ ಕೈಚಾಚಿ, “ಅವನನ್ನು ಹಿಡಿಯಿರಿ,” ಎಂದು ಆಜ್ಞಾಪಿಸಿದನು. ಕೂಡಲೆ ಅವನ ಕೈ ಒಣಗಿಹೋಯಿತು. ಅವನು ಅದನ್ನು ಹಿಂತೆಗೆದುಕೊಳ್ಳಲಾಗಲಿಲ್ಲ.


ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿಕರುಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಸರ್ವೇಶ್ವರನ ರಾಜ್ಯಕ್ಕೆ ವಿರುದ್ಧ ದಂಗೆಯೆದ್ದು ಗೆಲ್ಲಬಹುದೆಂದು ನೆನಸುತ್ತೀರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು