Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:31 - ಕನ್ನಡ ಸತ್ಯವೇದವು C.L. Bible (BSI)

31 ಇದಲ್ಲದೆ, ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ, ಲೇವಿಯರಲ್ಲದ ಜನಸಾಮಾನ್ಯರನ್ನು ಯಾಜಕರನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಇದಲ್ಲದೆ ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ, ಲೇವಿಯರಲ್ಲದ ಸಾಮಾನ್ಯ ಜನರನ್ನು ಯಾಜಕರನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಇದಲ್ಲದೆ ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ ಲೇವಿಯರಲ್ಲದ ಕನಿಷ್ಠ ಜನರನ್ನೂ ಯಾಜಕರನ್ನಾಗಿ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯಾರೊಬ್ಬಾಮನು ಎತ್ತರದ ಸ್ಥಳಗಳಲ್ಲಿ ಆಲಯಗಳನ್ನು ನಿರ್ಮಿಸಿದನು. ಅವನು ಇಸ್ರೇಲಿನ ಬೇರೆಬೇರೆ ಕುಲಗಳಿಂದ ಯಾಜಕರನ್ನು ಆರಿಸಿಕೊಂಡನು. (ಅವನು ಲೇವಿಯರ ಕುಲವೊಂದರಿಂದಲೇ ಯಾಜಕರನ್ನು ಆರಿಸಿಕೊಳ್ಳಲಿಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವನು ಉನ್ನತ ಸ್ಥಳಗಳಲ್ಲಿ ಪೂಜಾಸ್ಥಳಗಳನ್ನು ಕಟ್ಟಿಸಿ, ಲೇವಿಯರಲ್ಲದ ಸಾಮಾನ್ಯ ಜನರನ್ನು ಯಾಜಕರನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:31
14 ತಿಳಿವುಗಳ ಹೋಲಿಕೆ  

ನೀವು ಸರ್ವೇಶ್ವರನ ಯಾಜಕರಾದ ಆರೋನನ ಸಂತಾನದವರನ್ನೂ ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗಾಗಿ ಪೂಜಾರಿಗಳನ್ನು ನೇಮಿಸಿಕೊಂಡಿದ್ದೀರಿ; ತಾನು ಪೂಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ!


ಅವರು ಸರ್ವೇಶ್ವರನ ಭಕ್ತರಾಗಿದ್ದರೂ ತಮ್ಮಲ್ಲೆ ಯಾರ್ಯಾರನ್ನೋ ಉನ್ನತ ಪೂಜಾಸ್ಥಳಗಳ ಯಾಜಕರನ್ನಾಗಿ ನೇಮಿಸಿಕೊಂಡು, ಅವರ ಮುಖಾಂತರ ಪೂಜಾಸ್ಥಳದ ಗುಡಿಗಳಲ್ಲಿ ಆರಾಧನೆ ನಡೆಸುತ್ತಿದ್ದರು.


ಯಾಜಕ ಸೇವಾವೃತ್ತಿಯನ್ನು ಕೈಗೊಳ್ಳುವುದಕ್ಕೆ ಆರೋನನನ್ನು ಹಾಗೂ ಅವನ ಮಕ್ಕಳನ್ನು ನೇಮಿಸು. ಬೇರೆ ಯಾರಾದರು ಆ ವೃತ್ತಿಗೆ ಕೈ ಹಾಕಿದರೆ ಅಂಥವನಿಗೆ ಮರಣ ಶಿಕ್ಷೆಯಾಗಬೇಕು.


ಆದರೂ ಗಿಲ್ಯಾದಿನಲ್ಲಿ ಅಧರ್ಮ ನೆಲೆಗೊಂಡಿದೆ. ಅದಕ್ಕೆ ದುರ್ಗತಿ ಕಾದಿದೆ. ಗಿಲ್ಗಾಲಿನಲ್ಲಿ ಬಸವನಿಗೆ ಯಜ್ಞಗಳನ್ನು ಅರ್ಪಿಸಲಾಗುತ್ತಿದೆ. ಅಲ್ಲಿನ ಯಜ್ಞವೇದಿಗಳು ಪುಡಿಪುಡಿಯಾಗುವುವು; ಉಳುವ ನೇಗಿಲಿಗೆ ಸಿಕ್ಕುವ ಕಲ್ಲುಕುಪ್ಪೆಗಳಾಗುವುವು.”


ಒಂದೊಂದು ಬೀದಿಯ ಕೊನೆಯಲ್ಲಿ ನೀನು ಜಗಲಿಯನ್ನು ಕಟ್ಟಿಕೊಂಡು, ನಿನ್ನ ಸೌಂದರ್ಯವನ್ನು ನೀಚಕೆಲಸಕ್ಕೆ ಒಪ್ಪಿಸಿ, ಹಾದುಹೋಗುವವರೆಲ್ಲರನ್ನೂ ಸೇರಿ ಸೂಳೆತನವನ್ನು ಅಧಿಕಗೊಳಿಸಿರುವೆ.


ಆ ದೈವಭಕ್ತನು ಸ್ವಲ್ಪ ದೂರಹೋದ ನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದುಹಾಕಿತು. ಅವನ ಶವ ದಾರಿಯಲ್ಲಿಯೇ ಬಿದ್ದಿತ್ತು; ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು.


ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತುಮುಳುಗುವುದಕ್ಕೆ ಮುಂಚಿತವಾಗಿ ಅವನಿಗೆ ಕೊಟ್ಟುಬಿಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರು ನೋಡುತ್ತಿರುತ್ತಾನೆ. ನೀವು ಕೊಡದಿದ್ದರೆ ಅವನು ಸರ್ವೇಶ್ವರನಿಗೆ ಮೊರೆಯಿಡುವನು; ಆಗ ನೀವು ದೋಷಿಗಳಾಗುವಿರಿ.


ಆದರೂ ಆ ಜನಾಂಗಗಳವರು ತಮ್ಮ ದೇವತೆವಿಗ್ರಹಗಳನ್ನು ಮಾಡಿಕೊಂಡು ತಾವು ವಾಸಿಸುವ ಊರುಗಳೊಳಗೆ ಸಮಾರಿಯದವರು ಏರ್ಪಡಿಸಿದ್ದ ಪೂಜಾಸ್ಥಳಗಳಲ್ಲಿ ಅವುಗಳನ್ನಿಟ್ಟು ಪೂಜಿಸುತ್ತಿದ್ದರು.


ತರುವಾಯ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಯೇಲಿನ ಅರಸ ಯಾರೊಬ್ಬಾಮನಿಗೆ ಹೀಗೆ ಹೇಳಿಕಳುಹಿಸಿದನು: “ಆಮೋಸನು ನಿನಗೆ ವಿರುದ್ಧವಾಗಿ ಇಸ್ರಯೇಲರಲ್ಲಿ ಒಳಸಂಚು ಹೂಡಿದ್ದಾನೆ. ಅವನ ಮಾತುಗಳನ್ನು ನಾಡು ಸಹಿಸಲಾರದು.


ಪಿತೃಗಳಂತೆಯೇ ಅವರೂ ತಮಗಾಗಿ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು. ಪ್ರತಿಯೊಂದು ದಿಣ್ಣೆಯ ಮೇಲೆ ಹಾಗು ಚೆನ್ನಾಗಿ ಬೆಳೆದಿದ್ದ ಪ್ರತಿಯೊಂದು ಮರದ ಕೆಳಗೆ, ಕಲ್ಲಿನ ಕಂಬಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.


ಅವರು ಸಮಾರಿಯಾದಿಂದ ಸೆರೆಯವರಾಗಿ ಬಂದಿದ್ದ ಒಬ್ಬ ಯಾಜಕನನ್ನು ಅಲ್ಲಿಗೆ ಕಳುಹಿಸಿದರು. ಇವನು ಬೇತೇಲಿನಲ್ಲಿ ವಾಸವಾಗಿದ್ದು, ಜನರಿಗೆ ಸರ್ವೇಶ್ವರನ ಭಕ್ತಿಯನ್ನು ಬೋಧಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು