Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:10 - ಕನ್ನಡ ಸತ್ಯವೇದವು C.L. Bible (BSI)

10 ಆದುದರಿಂದ ಯಾರೊಬ್ಬಾಮನೇ, ಕೇಳು; ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು; ನಿನ್ನ ಕುಟುಂಬದ ಗಂಡಸರಲ್ಲಿ, ಸ್ವತಂತ್ರರಾಗಲಿ, ಪರತಂತ್ರರಾಗಲಿ, ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಸಂಹರಿಸಿಬಿಡುವೆನು. ಕಸವನ್ನು ಗುಡಿಸಿ ಎಸೆಯುವಂತೆ ನಾನು ನಿನ್ನ ಮನೆಯವರನ್ನು ಎಸೆದುಬಿಡುವೆನು; ಅವರು ನಿರ್ನಾಮವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದುದರಿಂದ ಯಾರೊಬ್ಬಾಮನೇ ಕೇಳು, ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು. ನಿನ್ನ ಕುಟುಂಬದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಸಂಹರಿಸಿಬಿಡುವೆನು. ಒಬ್ಬನು ಕಸವನ್ನು ಗುಡಿಸಿ ತೆಗೆದುಹಾಕುವಂತೆ ನಾನು ನಿನ್ನ ಮನೆಯವರನ್ನು ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದದರಿಂದ ಯಾರೊಬ್ಬಾಮನೇ, ಕೇಳು; ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು; ನಿನ್ನ ಕುಟುಂಬದ ಗಂಡಸರಲ್ಲಿ ಸ್ವತಂತ್ರರಾಗಲಿ ಪರತಂತ್ರರಾಗಲಿ, ಎಲ್ಲರನ್ನೂ ಇಸ್ರಾಯೇಲ್ಯರೊಳಗಿಂದ ಸಂಹರಿಸಿಬಿಡುವೆನು. ಒಬ್ಬನು ಕಸವನ್ನು ಗುಡಿಸಿ ತೆಗೆದುಹಾಕುವಂತೆ ನಾನು ನಿನ್ನ ಮನೆಯವರನ್ನು ತೆಗೆದುಹಾಕುವೆನು; ಅವರು ನಿರ್ನಾಮವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ಯಾರೊಬ್ಬಾಮನೇ, ನಾನು ನಿನ್ನ ಕುಟುಂಬಕ್ಕೆ ಕೇಡುಗಳನ್ನು ಬರಮಾಡುತ್ತೇನೆ. ನಿನ್ನ ಕುಟುಂಬದ ಗಂಡಸರೆಲ್ಲರನ್ನು ನಾನು ಕೊಲ್ಲುತ್ತೇನೆ. ಬೆಂಕಿಯು ಕಸವನ್ನು ಸುಟ್ಟುಹಾಕುವಂತೆ ನಾನು ನಿನ್ನ ಕುಟುಂಬವನ್ನು ಸಂಪೂರ್ಣವಾಗಿ ನಾಶಪಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ ‘ಆದ್ದರಿಂದ ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ, ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ, ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟುಕೊಂಡವರನ್ನೂ ಕಡಿದುಬಿಟ್ಟು, ಅದು ತೀರುವವರೆಗೆ ಮನುಷ್ಯನು ರಸವನ್ನು ಹೇಗೆ ತೆಗೆದು ಹಾಕುತ್ತಾನೋ, ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಉಳುವಿಕೆಯನ್ನು ತೆಗೆದುಹಾಕುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:10
25 ತಿಳಿವುಗಳ ಹೋಲಿಕೆ  

“ಇಸ್ರಯೇಲರು ಘೋರಕಷ್ಟವನ್ನು ಅನುಭವಿಸುತ್ತಿರುತ್ತಾರೆ. ಅವರಲ್ಲಿದ್ದ ಸ್ವತಂತ್ರರೂ ಪರತಂತ್ರರೂ ನಾಶವಾಗಿದ್ದಾರೆ, ಅವರನ್ನು ರಕ್ಷಿಸುವವನು ಒಬ್ಬನೂ ಇಲ್ಲ,” ಎಂಬುದನ್ನು ಸರ್ವೇಶ್ವರ ನೋಡಿದರು.


ಸರ್ವೇಶ್ವರ ನಿನ್ನನ್ನು ಕುರಿತು, ‘ನಾನು ನಿನ್ನ ಮೈಮೇಲೆ ಕೇಡನ್ನು ಬರಮಾಡಿ, ನಿನ್ನನ್ನು ಕಸದಂತೆ ತೆಗೆದುಹಾಕುವೆನು; ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಪರತಂತ್ರರಾಗಲಿ ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಕಡಿದುಬಿಡುವೆನು.


ಸ್ವತಂತ್ರರು, ಪರತಂತ್ರರು ನಿರಾಶ್ರಯರಾದಾಗ ಅವರೆಲ್ಲರು ನಿಶ್ಯೇಷರಾದವರು ಎಂದು ತಿಳಿದುಬಂದಾಗ ದೊರಕಿಸುವನು ಸರ್ವೇಶ್ವರನು ನ್ಯಾಯವನು ತನ್ನ ಪ್ರಜೆಗೆ ತೋರುವನು ಅನುಕಂಪವನು ತನ್ನ ಭಕ್ತಾದಿಗಳಿಗೆ.


ಆದ್ದರಿಂದ ಇದನ್ನು ಗಮನವಿಟ್ಟು ಕೇಳಿ: ನಿಮ್ಮ ಸಂತಾನವನ್ನು ಖಂಡಿಸುವೆನು. ನಿಮ್ಮ ಮುಖಕ್ಕೆ ಸಗಣಿ ಬಳಿಯುವೆನು. ನಿಮ್ಮ ಯಜ್ಞಪಶುಗಳ ಸಗಣಿಯನ್ನೇ ಎರಚುವೆನು. ನೀವು ಆ ಸಗಣಿ ತಿಪ್ಪೆಯ ಪಾಲಾಗುವಿರಿ.


ಸರ್ವೇಶ್ವರ ಇಂತೆನ್ನುತ್ತಾರೆ, “ಮಾನವರ ಮೇಲೆ ಕಷ್ಟ - ಸಂಕಷ್ಟಗಳನ್ನು ಬರಮಾಡುವೆನು; ಅವರು ಕುರುಡರಂತೆ ತಡಕಾಡುವರು. ಏಕೆಂದರೆ ಅವರು ನನಗೆ ವಿರೋಧವಾಗಿ ಪಾಪಮಾಡಿದ್ದಾರೆ; ಅವರ ರಕ್ತವನ್ನು ನೀರಿನಂತೆ ಚೆಲ್ಲಲಾಗುವುದು; ಅವರ ಹೆಣಗಳನ್ನು ಕಸದಂತೆ ಕೊಳೆಯಲು ಬಿಡಲಾಗುವುದು.”


ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ?


ಅವು ಟೈರಿನ ಪೌಳಿಗೋಡೆಯನ್ನು ಉರುಳಿಸಿ, ಅದರ ಕೊತ್ತಲಗಳನ್ನು ಕೆಡವಿಹಾಕುವುವು; ನಾನು ಅದರ ಮಣ್ಣನ್ನು ಕೆರೆದು, ಅದನ್ನು ಬೋಳುಬಂಡೆಯಾಗಿ ಮಾಡುವೆನು;


ಅವರು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ, ಪೂಜಿಸಿದ ಸೂರ್ಯ,‍ ಚಂದ್ರ, ತಾರಾಗಣಗಳ ಎದುರಿಗೇ ಆ ಎಲುಬುಗಳನ್ನು ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವುವು.


ಪರಿವರ್ತಿಸುವೆನಾ ನಾಡನು ಜವುಗು ನೆಲವನ್ನಾಗಿ, ಅಹುದು, ಮುಳ್ಳುಹಂದಿಗಳ ರೊಪ್ಪವನ್ನಾಗಿ, ಗುಡಿಸಿಬಿಡುವೆನು ನಾಶವೆಂಬ ಪೊರಕೆಯಿಂದ ಪೂರ್ತಿಯಾಗಿ".


ನಿನ್ನನ್ನಾದರೊ ಕೊಳೆತ ಕಡ್ಡಿಯಂತೆ ಬಿಸಾಡಿಹರು ಕೆಳಕೆ ಗೋರಿಯಿಲ್ಲದ ನಿನ್ನ ಶವ ಈಡಾಗಿದೆ ಪರರ ತುಳಿತಕ್ಕೆ, ಕತ್ತಿ ತಿವಿದ, ಕಲ್ಲುಗುಂಡಿಗೆ ಪಾಲಾದ ಹೆಣಗಳೇ ನಿನ್ನ ಹೊದಿಕೆ.


ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.


ಎಂದೋರಿನಲ್ಲವರು ಕೊಲೆಯಾದರು I ಹೊಲಗದ್ದೆಗಳಿಗೆ ಗೊಬ್ಬರವಾದರು II


ತನ್ನ ಮಲದ ಹಾಗೆ ನಿತ್ಯಕ್ಕು ಅವನು ನಶಿಸಿಹೋಗುವನು ಅವನನು ಅರಿತವರೆಲ್ಲರೂ “ಅವನೆಲ್ಲಿಯೋ!’ ಎಂದು ಹೇಳುವರು.


ನೂಲು, ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರಿಯವನ್ನೂ ಅಹಾಬನ ಮನೆಯನ್ನೂ ನೆಲಸಮ ಮಾಡಿಬಿಟ್ಟೆನಲ್ಲವೆ? ಜೆರುಸಲೇಮನ್ನೂ ಅವುಗಳಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಉಜ್ಜಿ ತಲೆ ಕೆಳಗಾಗಿ ಇಡುವಂತೆ ನಾನು ಜೆರುಸಲೇಮನ್ನು ಉಜ್ಜಿ ತಲೆ ಕೆಳಗಾಗಿ ಮಾಡುವೆನು.


ಆಕೆಯ ಶವ ಆ ಹೊಲಕ್ಕೆ ಗೊಬ್ಬರವಾಗುವುದು; ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು’ ಎಂಬುದಾಗಿ ತಿಷ್ಬೀಯನೂ ತಮ್ಮ ದಾಸನೂ ಆದ ಎಲೀಯನ ಮುಖಾಂತರ ಸರ್ವೇಶ್ವರ ಹೇಳಿಸಿದ ಮಾತು ಈಗ ನೆರವೇರಿತು,” ಎಂದನು.


ಇವನು ಸಿಂಹಾಸನದಲ್ಲಿ ಕುಳಿತು ಆಳತೊಡಗಿದ ಕೂಡಲೆ ಬಾಷನ ಮನೆಯವರನ್ನೂ ಅವನ ಬಂಧುಮಿತ್ರರನ್ನೂ ಉಳಿಸಲಿಲ್ಲ.


ನಿನಗೆ ಕೇಡುಮಾಡದಂತೆ ನನ್ನನ್ನು ತಡೆದ ಇಸ್ರಯೇಲ್ ದೇವರಾದ ಸರ್ವೇಶ್ವರನ ಆಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದಿದ್ದರೆ ಖಂಡಿತವಾಗಿ ನಾಳೆ ಬೆಳಗಾಗುವಷ್ಟರಲ್ಲಿ ನಾಬಾಲನವರಲ್ಲಿ ಒಬ್ಬ ಗಂಡಸಾದರೂ ಖಂಡಿತವಾಗಿ ಉಳಿಯುತ್ತಿರಲಿಲ್ಲ!” ಎಂದು ಹೇಳಿದನು.


ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ!” ಎಂದು ಪ್ರತಿಜ್ಞೆ ಮಾಡಿದ್ದನು.


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


ಈ ಕಾರಣ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ವಿಸರ್ಜಿತರಾಗಿ ನಿರ್ನಾಮವಾದರು.


ಆದ್ದರಿಂದ ನಿನ್ನನ್ನೂ ನಿನ್ನ ಮನೆಯವರನ್ನೂ ಅಳಿಸಿಬಿಡುವೆನು; ನೆಬಾಟನ ಮಗ ಯಾರೊಬ್ಬಾಮನ ಮನೆಗಾದ ಗತಿ ನಿನ್ನ ಮನೆಗೂ ಆಗುವುದು.


ನೀವು ಸಾವಿರಾರು ತಲಾಂತರಗಳವರೆಗೂ ದಯೆತೋರುವವರು. ಆದರೆ ಹೆತ್ತವರ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವರು. ನೀವು ಮಹಾಪರಾಕ್ರಮಿಯಾದ ದೇವರು, ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದು ನಿಮ್ಮ ನಾಮಧೇಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು