Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:5 - ಕನ್ನಡ ಸತ್ಯವೇದವು C.L. Bible (BSI)

5 ಆದರೆ ಸರ್ವೇಶ್ವರ ಅವನಿಗೆ, ಯಾರೊಬ್ಬಾಮನ ಹೆಂಡತಿ ಅಸ್ವಸ್ಥನಾದ ತನ್ನ ಮಗನ ವಿಷಯದಲ್ಲಿ ದೈವೋತ್ತರವನ್ನು ಕೇಳುವುದಕ್ಕೆ ತನ್ನನ್ನು ಅನ್ಯಳೆಂದು ತೋರ್ಪಡಿಸಿಕೊಂಡು ಬರುತ್ತಾಳೆ; ಆಕೆಗೆ ಇಂಥಿಂಥ ಉತ್ತರಕೊಡು, ಎಂದು ತಿಳಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೆ ಯೆಹೋವನು ಅವನಿಗೆ, “ಯಾರೊಬ್ಬಾಮನ ಹೆಂಡತಿಯು ಅಸ್ವಸ್ಥನಾದ ತನ್ನ ಮಗನ ವಿಷಯದಲ್ಲಿ ದೈವೋಕ್ತಿಯನ್ನು ಕೇಳುವುದಕ್ಕೆ ತನ್ನನ್ನು ಅನ್ಯಳ ಹಾಗೆ ವೇಷಮರೆಸಿಕೊಂಡು ಬರುತ್ತಾಳೆಂದೂ, ಆಕೆಗೆ ಇಂಥಿಂಥ ಉತ್ತರ ಕೊಡಬೇಕು” ಎಂದು ತಿಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದರೆ ಯೆಹೋವನು ಅವನಿಗೆ - ಯಾರೊಬ್ಬಾಮನ ಹೆಂಡತಿಯು ಅಸ್ವಸ್ಥನಾದ ತನ್ನ ಮಗನ ವಿಷಯದಲ್ಲಿ ದೈವೋತ್ತರವನ್ನು ಕೇಳುವದಕ್ಕೆ ತನ್ನನ್ನು ಅನ್ಯಳೆಂದು ತೋರ್ಪಡಿಸಿಕೊಂಡು ಬರುತ್ತಾಳೆಂದೂ ಆಕೆಗೆ ಇಂಥಿಂಥ ಉತ್ತರ ಕೊಡಬೇಕೆಂದೂ ತಿಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಯೆಹೋವನು ಅವನಿಗೆ, “ಯಾರೊಬ್ಬಾಮನ ಪತ್ನಿಯು ಅಸ್ವಸ್ಥನಾಗಿರುವ ತನ್ನ ಮಗನ ಬಗ್ಗೆ ಕೇಳಲು ನಿನ್ನ ಬಳಿಗೆ ಬರುತ್ತಿದ್ದಾಳೆ” ಎಂದು ಹೇಳಿದ್ದನು. ಅಹೀಯನು ಏನು ಹೇಳಬೇಕೆಂಬುದನ್ನು ಯೆಹೋವನು ಅವನಿಗೆ ತಿಳಿಸಿದ್ದನು. ಯಾರೊಬ್ಬಾಮನ ಪತ್ನಿಯು ಅಹೀಯನ ಮನೆಗೆ ಬಂದಳು. ತಾನಾರೆಂಬುದು ಜನರಿಗೆ ತಿಳಿಯಬಾರದೆಂದು ಅವಳು ಪ್ರಯತ್ನಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಯೆಹೋವ ದೇವರು ಅಹೀಯನಿಗೆ, “ಯಾರೊಬ್ಬಾಮನ ಪತ್ನಿಯು ತನ್ನ ಮಗನಿಗೋಸ್ಕರ ನಿನ್ನಿಂದ ದೈವೋತ್ತರವನ್ನು ಕೇಳುವುದಕ್ಕೆ ಬರುತ್ತಾಳೆ. ಏಕೆಂದರೆ ಅವಳ ಮಗನು ರೋಗದಲ್ಲಿದ್ದಾನೆ. ನೀನು ಅವಳಿಗೆ ಹೀಗೀಗೆ ಹೇಳು, ಅವಳು ಒಳಗೆ ಬರುವಾಗ ಮತ್ತೊಬ್ಬಳ ಹಾಗೆ ವೇಷಹಾಕಿಕೊಂಡು ಬರುವಳು,” ಎಂದು ಹೇಳಿಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:5
8 ತಿಳಿವುಗಳ ಹೋಲಿಕೆ  

ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.


ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.


ಗೇಹಜಿಯು ಆಕೆಯನ್ನು ದೂಡುವುದಕ್ಕಾಗಿ ಹತ್ತಿರ ಬಂದನು. ದೈವಪುರುಷನು, “ಬಿಡು, ತಡೆಯಬೇಡ; ಆಕೆಗೆ ಮನಸ್ಸಿನಲ್ಲಿ ತೀವ್ರ ದುಃಖವಿರುವ ಹಾಗೆ ತೋರುತ್ತದೆ. ಸರ್ವೇಶ್ವರ ಆಕೆಯ ದುಃಖವನ್ನು ನನಗೆ ತಿಳಿಸಲಿಲ್ಲ; ಮರೆಮಾಡಿದ್ದಾರೆ,” ಎಂದು ಹೇಳಿದನು.


ಅವನು ತೆಕೋವದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆಕಳುಹಿಸಿ ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹುದಿವಸಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ನಟಿಸಿ ಶೋಕವಸ್ತ್ರಗಳನ್ನು ಧರಿಸಿಕೋ;


ಆಕೆ ಅಹೀಯನ ಮನೆಯನ್ನು ಪ್ರವೇಶಿಸುವಾಗಲೇ ಅಹೀಯನು ಆಕೆಯ ಕಾಲುಸಪ್ಪಳವನ್ನು ಕೇಳಿ, “ಯಾರೊಬ್ಬಾಮನ ಹೆಂಡತಿಯೇ, ಬಾ; ಏಕೆ ನೀನು ಅನ್ಯಳೆಂದು ನಟಿಸುತ್ತಿರುವೆ? ನಿನಗೆ ಕಠಿಣವಾದ ಉತ್ತರವನ್ನು ಕೊಡಬೇಕೆಂದು ನನಗೆ ಅಪ್ಪಣೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು