Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:11 - ಕನ್ನಡ ಸತ್ಯವೇದವು C.L. Bible (BSI)

11 ಇವನು ತನ್ನ ಪೂರ್ವಜ ದಾವೀದನಂತೆ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇವನು ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಸನು ತನ್ನ ಪೂರ್ವಿಕನಾದ ದಾವೀದನು ಮಾಡಿದಂತೆ, ಯೆಹೋವನು ಇಚ್ಛಿಸಿದ ಕಾರ್ಯಗಳನ್ನೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಸನು ತನ್ನ ತಂದೆಯಾದ ದಾವೀದನ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:11
15 ತಿಳಿವುಗಳ ಹೋಲಿಕೆ  

ಆಸನು ತನ್ನ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ನಡೆದನು.


ಇಸ್ರಯೇಲ್ ಪ್ರಾಂತ್ಯದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದೆ ಇದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಚಿತ್ತನಾಗಿ ನಡೆದುಕೊಂಡನು.


ಆಸನು ತನ್ನ ದೇವರಾದ ಸರ್ವೇಶ್ವರನಿಗೆ, “ಸರ್ವೇಶ್ವರಾ, ಬಲಿಷ್ಠನು ಬಲಹೀನನ ಮೇಲೆ ಬೀಳುವಾಗ, ನಿಮ್ಮ ಹೊರತು ರಕ್ಷಕನಿಲ್ಲ. ನಿಮ್ಮಲ್ಲಿ ಭರವಸೆ ಇಟ್ಟು ನಿಮ್ಮ ಹೆಸರಿನಲ್ಲಿ ಈ ಮಹಾ ಸೇನೆಗೆ ವಿರುದ್ಧ ಯುದ್ಧಕ್ಕೆ ಬಂದಿದ್ದೇವೆ. ಸರ್ವೇಶ್ವರಾ, ನಮ್ಮ ದೇವರು ನೀವು; ನರರು ನಿಮ್ಮನ್ನು ಎದುರಿಸಿ ಗೆಲ್ಲಬಾರದು,” ಎಂದು ಮೊರೆ ಇಟ್ಟನು.


ತನ್ನ ತಂದೆ ಮಾಡಿದ ಪಾಪಕೃತ್ಯಗಳನ್ನು ಇವನೂ ಮಾಡಿದನು. ಇವನ ಪೂರ್ವಜ ದಾವೀದನು ದೇವರಾದ ಸರ್ವೇಶ್ವರನಿಗೆ ಪೂರ್ಣಮನಸ್ಸಿನಿಂದ ಸೇವೆಸಲ್ಲಿಸಿದಂತೆ ಇವನು ಸೇವೆಸಲ್ಲಿಸಲಿಲ್ಲ.


ವೇಶ್ಯೆಯರಾಗಿ ವರ್ತಿಸುತ್ತಿದ್ದ, ಹೆಂಗಸರು ಹಾಗು ಗಂಡಸರನ್ನೆಲ್ಲಾ ನಾಡಿನಿಂದ ಹೊರಡಿಸಿ ತನ್ನ ಹಿರಿಯರು ಮಾಡಿಸಿಟ್ಟಿದ್ದ ವಿಗ್ರಹಗಳನ್ನೆಲ್ಲಾ ತೆಗೆದು ಹಾಕಿದನು.


ಸೊಲೊಮೋನನು ಸರ್ವೇಶ್ವರನನ್ನು ಪ್ರೀತಿಸಿ, ತನ್ನ ತಂದೆ ದಾವೀದನ ವಿಧಿಗಳನ್ನು ಕೈಗೊಳ್ಳುತ್ತಿದ್ದರೂ ಆ ಪೂಜಾಸ್ಥಳಗಳಲ್ಲೇ ಬಲಿಯರ್ಪಿಸುತ್ತಿದ್ದನು; ಅಲ್ಲಿಯೇ ಧೂಪಾರತಿ ಎತ್ತುತ್ತಿದ್ದನು.


ತನ್ನ ತಂದೆ ಆಸನ ಮಾರ್ಗದಲ್ಲಿ ಇವನು ತಪ್ಪದೆ ನಡೆಯುತ್ತಾ, ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಇದ್ದನು. ಆದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಬಲಿಕೊಡುತ್ತಾ, ಧೂಪಾರತಿ ಎತ್ತುತ್ತಾ ಇದ್ದರು.


ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ. ಆದುದರಿಂದ ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.


ಇವನು ತನ್ನ ತಂದೆ ಯೆಹೋವಾಷನ ಸನ್ಮಾರ್ಗದಲ್ಲಿ ತಪ್ಪದೆ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾದನು. ಆದರೂ ತನ್ನ ಪೂರ್ವಜ ದಾವೀದನಷ್ಟು ಉತ್ತಮನಾಗಿರಲಿಲ್ಲ.


ಇವನು ತನ್ನ ತಂದೆಯಾದ ಅಮಚ್ಯನಂತೆ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.


ಇವನು ಎಲ್ಲಾ ವಿಷಯಗಳಲ್ಲೂ ತನ್ನ ಪೂರ್ವಜ ದಾವೀದನಂತೆ ಸರ್ವೇಶ್ವರನ ಚಿತ್ತಾನುಸಾರ ನಡೆದನು.


ಅವನು ಎಡಕ್ಕಾಗಲಿ ಬಲಕ್ಕಾಗಲಿ ವಾಲದೆ ತನ್ನ ಪೂರ್ವಜ ದಾವೀದನ ಮಾರ್ಗದಲ್ಲಿ ನೇರವಾಗಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.


ಅಬೀಯನು ಮೃತನಾಗಿ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಸನು ಅರಸನಾದನು. ಇವನ ಕಾಲದಲ್ಲಿ, ನಾಡಿನಲ್ಲಿ ಹತ್ತು ವರ್ಷ ಶಾಂತಿಸಮಾಧಾನವಿತ್ತು.


ತಂದೆ ಆಸನ ಮಾರ್ಗದಲ್ಲಿ ಇವನು ತಪ್ಪದೆ ನಡೆಯುತ್ತಾ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು