Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:13 - ಕನ್ನಡ ಸತ್ಯವೇದವು C.L. Bible (BSI)

13 ಇವನ ತಾಯಿ ಮಾಕಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ ಆಸನು ಆಕೆಯನ್ನು ‘ರಾಜಮಾತೆ’ ಎಂಬ ಪದವಿಯಿಂದ ತೆಗೆದುಹಾಕಿ ಆ ಮೂರ್ತಿಯನ್ನು ಕಡಿದು ಕಿದ್ರೋನ್ ಹಳ್ಳದ ಹತ್ತಿರ ಸುಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನ ತಾಯಿಯಾದ ಮಾಕಳೂ ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ ಆಸನು ಆಕೆಯನ್ನು ಗದ್ದುಗೆಯಿಂದ ತಳ್ಳಿ, ಆ ಮೂರ್ತಿಯನ್ನು ಕಡಿದು, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇವನ ತಾಯಿಯಾದ ಮಾಕಳು ಅಶೇರದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದದರಿಂದ ಆಸನು ಆಕೆಯನ್ನು ಗದ್ದುಗೆಯಿಂದ ತಳ್ಳಿ ಆ ಮೂರ್ತಿಯನ್ನು ಕಡಿದು ಕಿದ್ರೋನ್‍ಹಳ್ಳದ ಹತ್ತಿರ ಸುಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಸನು ತನ್ನ ಅಜ್ಜಿ ಮಾಕಳನ್ನು ರಾಣಿಯ ಪಟ್ಟದಿಂದ ಕೆಳಗಿಳಿಸಿದನು. ಮಾಕಳು ಅಶೇರ ದೇವತೆಯ ಒಂದು ಭೀಕರ ಮೂರ್ತಿಯನ್ನು ಮಾಡಿಸಿದ್ದಳು. ಅವನು ಅದನ್ನು ಕಿದ್ರೋನ್ ಕಣಿವೆಯಲ್ಲಿ ಸುಟ್ಟುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ, ಆಸನು ತನ್ನ ಅಜ್ಜಿ ಮಾಕ ಎಂಬವಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ, ಅವಳನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಆ ಮೂರ್ತಿಯನ್ನು ಕಡಿದುಹಾಕಿ ಕಿದ್ರೋನ್ ಹಳ್ಳದ ಹತ್ತಿರ ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:13
25 ತಿಳಿವುಗಳ ಹೋಲಿಕೆ  

ಜನರು ಮಾಡಿಸಿಕೊಂಡಿದ್ದ ಆ ಹೋರಿಕರುವನ್ನು ತೆಗೆದು ಬೆಂಕಿಯಿಂದ ಸುಟ್ಟು, ಅರೆದು, ಪುಡಿಪುಡಿಮಾಡಿ, ನೀರಿನಲ್ಲಿ ಕಲಸಿ, ಇಸ್ರಯೇಲರಿಗೆ ಆ ನೀರನ್ನು ಕುಡಿಸಿದನು.


ಅವರ ಈ ನಡತೆ, ಶುಭಸಂದೇಶದ ಸತ್ಯಕ್ಕೆ ಅನುಗುಣವಾದುದಲ್ಲ ಎಂದು ನನಗೆ ಮನದಟ್ಟಾಯಿತು. ಆಗ ನಾನು ಅವರೆಲ್ಲರ ಸಮ್ಮುಖದಲ್ಲೇ ಕೇಫನಿಗೆ: “ನೀನು ಯೆಹೂದ್ಯನಾಗಿದ್ದೂ ಯೆಹೂದ್ಯರಂತೆ ನಡೆಯದೆ ಅನ್ಯಧರ್ಮೀಯರಂತೆ ನಡೆದುಕೊಳ್ಳುತ್ತ ಇದ್ದಿಯಲ್ಲವೇ? ಹೀಗಿರುವಲ್ಲಿ ಅನ್ಯಧರ್ಮೀಯರು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ನೀನು ಒತ್ತಾಯಪಡಿಸುವುದಾದರೂ ಹೇಗೆ?” ಎಂದು ಕೇಳಿದೆ.


ಇನ್ನು ಮುಂದೆ ನಾವು ಯಾರನ್ನೂ ಕೇವಲ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಂದು ಕಾಲದಲ್ಲಿ, ಕ್ರಿಸ್ತಯೇಸುವನ್ನು ನಾವು ಹಾಗೆ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ.


ಯೇಸು ಸ್ವಾಮಿ ಹೀಗೆ ಹೇಳಿದ ಬಳಿಕ ತಮ್ಮ ಶಿಷ್ಯರೊಡನೆ ಹೊರಟು, ಕೆದ್ರೋನ್ ಹಳ್ಳವನ್ನು ದಾಟಿ, ಅಲ್ಲೇ ಇದ್ದ ತೋಟವನ್ನು ಹೊಕ್ಕರು.


“ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆಯನ್ನು ಅಥವಾ ತಾಯಿಯನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಅಥವಾ ಮಗಳನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


ಯಾವನಾದರೂ ಪ್ರವಾದನೆ ಮಾಡಲು ಯತ್ನಿಸಿದರೆ, ಅವನ ತಾಯಿತಂದೆಗಳೇ, “ಇವನು ಸರ್ವೇಶ್ವರಸ್ವಾಮಿಯ ಹೆಸರೆತ್ತಿ ಸುಳ್ಳಾಡುವುದರಿಂದ ಅವನು ಬದುಕಬಾರದು,” ಎಂದು ಹೇಳುವರು. ಅಷ್ಟೇ ಅಲ್ಲ, ಅವನು ಮಾಡಿದ ಪ್ರವಾದನೆಯ ನಿಮಿತ್ತ ಅವರೇ ಅವನನ್ನು ತಿವಿದು ಕೊಂದುಹಾಕುವರು.


ಇದಲ್ಲದೆ, ಅವನು ಬಾಳ್‍ದೇವತೆಗಳ ಬಲಿಪೀಠಗಳನ್ನು ತನ್ನೆದುರಿನಲ್ಲೇ ಹಾಳುಮಾಡಿಸಿ, ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಸಿ, ಅಶೇರಸ್ತಂಭ, ಕೆತ್ತಿದ ಮತ್ತು ಎರಕದ ವಿಗ್ರಹ, ಇವುಗಳನ್ನು ಒಡಿಸಿ, ಪುಡಿಪುಡಿಮಾಡಿಸಿ, ಅವುಗಳಿಗೆ ಬಲಿಯರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.


ಸರ್ವೇಶ್ವರನ ಆಲಯದಲ್ಲಿದ್ದ ಅಶೇರವಿಗ್ರಹಸ್ತಂಭವನ್ನು ತರಿಸಿ, ಜೆರುಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ, ಅಲ್ಲಿ ಅದನ್ನು ಸುಡಿಸಿ, ಪುಡುಪುಡಿಮಾಡಿಸಿ, ಆ ಪುಡಿಯನ್ನು ಸಾರ್ವಜನಿಕ ಸ್ಮಶಾನದಲ್ಲಿ ಹಾಕಿಸಿದನು.


ಪೂಜಾಸ್ಥಳಗಳನ್ನು ಹಾಳುಮಾಡಿದನು. ಕಲ್ಲುಗಂಬಗಳನ್ನು ಒಡೆದುಹಾಕಿದನು. ಅಶೇರ ವಿಗ್ರಹಸ್ಥಂಭಗಳನ್ನು ಕೆಡವಿಬಿಟ್ಟನು. ಮೋಶೆ ಮಾಡಿಸಿದ ತಾಮ್ರಸರ್ಪವನ್ನು ಚೂರುಚೂರು ಮಾಡಿದನು. ಇಸ್ರಯೇಲರು ಅದಕ್ಕೆ ಆವರೆಗೂ ಧೂಪಸುಡುತ್ತಿದ್ದರು. ಅದಕ್ಕೆ ‘ನೆಹುಷ್ಟಾನ್’ ಎಂಬ ಹೆಸರಿತ್ತು.


ಇವನು ಜೆರುಸಲೇಮಿನಲ್ಲಿ ನಾಲ್ವತ್ತೊಂದು ವರ್ಷ ಆಳಿದನು. ಅಬ್ಷಾಲೋಮನ ಮಗಳಾದ ಮಾಕಾ ಎಂಬಾಕೆ ಇವನ ತಾಯಿ.


ಜುದೇಯದ ಅರಸನಾಗಿ ಜೆರುಸಲೇಮಿನಲ್ಲಿ ಮೂರು ವರ್ಷ ಆಳಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆ ಅವನ ತಾಯಿ.


ಇವರೆಲ್ಲರೂ ಬಹಳವಾಗಿ ನಡೆಯುವಾಗ ಸುತ್ತ-ಮುತ್ತಿನವರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲ ಜನರೂ ಕಿದ್ರೋನ್ ಹಳ್ಳವನ್ನು ದಾಟಿ ಅರಣ್ಯಮಾರ್ಗ ಹಿಡಿದರು.


ಬಳಿಕ ನಗರವನ್ನೂ - ಅದರಲ್ಲಿದ್ದುದೆಲ್ಲವನ್ನೂ ಬೆಂಕಿಯಿಂದ ಸುಟ್ಟುಹಾಕಿದರು. ಆದರೆ ಬೆಳ್ಳಿ ಬಂಗಾರವನ್ನು, ಕಂಚುಕಬ್ಬಿಣಗಳ ಪಾತ್ರೆ ಸರ್ವೇಶ್ವರನ ಆಲಯದ ಭಂಡಾರಕ್ಕೆ ಒಪ್ಪಿಸಿದರು.


ನಿನ್ನ ಆಜ್ಞೆಗಳನ್ನು ಕೈಗೊಳ್ಳಲೆಂದು ನಿನ್ನ ಒಡಂಬಡಿಕೆಯನು ಕಾದಿರಿಸಲೆಂದು ‘ತಂದೆತಾಯಿಗಳ ಪರಿಚಯವಿಲ್ಲ ಅಣ್ಣತಮ್ಮಂದಿರ ಅರಿವಿಲ್ಲ ಸ್ವಂತ ಮಕ್ಕಳ ಗುರುತಿಲ್ಲ’ ಎಂದನಿವನು.


ಮತ್ತು ನಿಮ್ಮ ಪಾಪಕ್ಕೆ ಕಾರಣವಾದ ಆ ಹೋರಿಕರುವನ್ನು ನಾನು ತೆಗೆದುಕೊಂಡು, ಬೆಂಕಿಯಿಂದ ಸುಟ್ಟು, ಒಡೆದು, ಅರೆದು, ಧೂಳುಮಾಡಿ ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬಿಸಾಡಿಬಿಟ್ಟೆ.


ಆದುದರಿಂದ ನೀವು ಹೀಗೆ ಮಾಡಬೇಕು; ಅವರ ಯಜ್ಞವೇದಿಗಳನ್ನು ಕೆಡವಬೇಕು, ಅವರ ಪವಿತ್ರಶಿಲೆಗಳನ್ನು ಒಡೆಯಬೇಕು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಬಡಿದು ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು. ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು. ನಿಮ್ಮ ಬೊಂಬೆಗಳ ಬುರುಡೆಗಳ ಮೇಲೆ ನಿಮ್ಮ ಬುರುಡೆಗಳನ್ನು ಬಿಸಾಡುವೆನು; ನಿಮ್ಮ ಬಗ್ಗೆ ಅಸಹ್ಯಪಡುವೆನು.


ಆಕೆ ಅದೋನೀಯನ ಪರವಾಗಿ ಮಾತಾಡಲು ಅರಸ ಸೊಲೊಮೋನನ ಬಳಿಗೆ ಬರುತ್ತಿರುವಾಗ ಅರಸನೇ ಎದ್ದುಹೋಗಿ ಆಕೆಯನ್ನು ಎದುರುಗೊಂಡು ನಮಸ್ಕರಿಸಿದನು. ಅನಂತರ ತಾನು ಸಿಂಹಾಸನದ ಮೇಲೆ ಕುಳಿತು ರಾಜಮಾತೆಗಾಗಿ ಒಂದು ಆಸನವನ್ನು ತರಿಸಿದನು. ಆಕೆ ಅವನ ಬಲಗಡೆಯಲ್ಲಿ ಕುಳಿತುಕೊಂಡಳು.


ಬಾಳ್ ದೇವತೆಯ ದೇವಸ್ಥಾನಕ್ಕೆ ಸೇರಿದ ಕೇರಿಯನ್ನು ಪ್ರವೇಶಿಸಿ ಅಲ್ಲಿನ ವಿಗ್ರಹಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಬಿಟ್ಟರು.


ತರುವಾಯ ಅವನು ಪ್ರಧಾನ ಯಾಜಕ ಹಿಲ್ಕೀಯನ, ಮುಖ್ಯ ಯಾಜಕರ ಹಾಗು ದ್ವಾರಪಾಲಕರ ಮುಖಾಂತರ ಬಾಳ್, ಅಶೇರ ಎಂಬ ದೇವತೆಗಳಿಗಾಗಿ ಹಾಗು ಆಕಾಶಸೈನ್ಯಗಳಿಗಾಗಿ ಉಪಯೋಗಿಸುತ್ತಿದ್ದ ಎಲ್ಲಾ ವಸ್ತುಗಳನ್ನು ಸರ್ವೇಶ್ವರನ ಆಲಯದಿಂದ ತರಿಸಿ, ಜೆರುಸಲೇಮಿನ ಹೊರಗಿರುವ ಕಿದ್ರೋನ್ ಬೈಲಿನಲ್ಲಿ ಅವುಗಳನ್ನು ಸುಡಿಸಿ, ಆ ಬೂದಿಯನ್ನು ಬೇತೇಲಿಗೆ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು