Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:20 - ಕನ್ನಡ ಸತ್ಯವೇದವು C.L. Bible (BSI)

20 ಬೆನ್ಹದದನು ಅರಸ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಅಬೇಲ್ಬೇತ್ಮಾಕಾ, ಕಿನ್ನೆರೋತ್ ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಾಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಆಬೇಲ್ಬೇತ್ಮಾಕಾ, ಕಿನ್ನೆರೋತ್ ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಾಯೇಲ್ಯರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಆಬೇಲ್ಬೇತ್ಮಾಕಾ, ಕಿನ್ನೆರೋತ್‍ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ ಇವುಗಳನ್ನು ಹಾಳುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ರಾಜನಾದ ಬೆನ್ಹದದನು ರಾಜನಾದ ಆಸನ ಜೊತೆ ಒಪ್ಪಂದ ಮಾಡಿಕೊಂಡನು. ಆದ್ದರಿಂದ ಅವನು ತನ್ನ ಸೈನ್ಯವನ್ನು ಇಸ್ರೇಲಿನ ಪಟ್ಟಣಗಳ ವಿರುದ್ದ ಹೋರಾಡಲು ಕಳುಹಿಸಿದನು. ಬೆನ್ಹದದನು ಇಯ್ಯೋನ್, ದಾನ್, ಅಬೇಲ್ಬೇತ್ಮಾಕಾ ಪಟ್ಟಣಗಳನ್ನು ಮತ್ತು ಗಲಿಲಾಯ ಸರೋವರದ ಸುತ್ತಲಿನ ಎಲ್ಲಾ ಪಟ್ಟಣಗಳನ್ನು ಸೋಲಿಸಿದನು. ಅವನು ನಫ್ತಾಲಿ ಪ್ರದೇಶವನ್ನೆಲ್ಲ ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನ್ನ ಸೈನ್ಯಾಧಿಪತಿಗಳನ್ನು ಕಳುಹಿಸಿದನು. ಇಯ್ಯೋನ್, ದಾನ್, ಆಬೇಲ್ ಬೇತ್ ಮಾಕಾ ಹಾಗೂ ಸಮಸ್ತ ಕಿನ್ನೆರೆತ್, ಸಮಸ್ತ ನಫ್ತಾಲಿ ಪ್ರಾಂತ ಇವುಗಳನ್ನು ಹಾಳುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:20
10 ತಿಳಿವುಗಳ ಹೋಲಿಕೆ  

ಇಸ್ರಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಮತ್ತು ಗಿಲ್ಯಾದ್ ಹಾಗು ಗಲಿಲೇಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು, ಅವುಗಳ ನಿವಾಸಿಗಳನ್ನು ಅಸ್ಸೀರಿಯಾ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ಮುಂಚೆ ಲಯಿಷ್ ಎಂಬ ಹೆಸರಿದ್ದ ಆ ಪಟ್ಟಣಕ್ಕೆ ಈಗ ‘ದಾನ್’ ಎಂದು ಹೆಸರಿಟ್ಟರು. ದಾನ್ ಎಂಬುದು ಇವರ ಮೂಲ ಪುರುಷನೂ ಇಸ್ರಯೇಲನ ಮಗನೂ ಆದವನ ಹೆಸರು.


ಉತ್ತರದಿಕ್ಕಿನ ಪರ್ವತಪ್ರದೇಶ, ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ಕಣಿವೆಪ್ರದೇಶ, ಇಳಿಜಾರು ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಮಲೆನಾಡಿನ ಪ್ರದೇಶ, ಇವುಗಳ ಅರಸರಿಗೂ


ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿದನು; ಇನ್ನೊಂದನ್ನು ದಾನಿಗೆ ಕಳುಹಿಸಿದನು.


ಹಾಗೂ ಜೋರ್ಡನ್ ನದಿಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣ ಸಮುದ್ರ (ಮೃತ್ಯುಕಡಲು) ಎಣಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್ ಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ಕಣಿವೆ ಪ್ರದೇಶ ಇವುಗಳಿಂದ ಕೂಡಿತ್ತು.


ಅಬ್ರಾಮನು ತನ್ನ ತಮ್ಮನ ಮಗ ಸೆರೆಗೆ ಸಿಕ್ಕಿರುವುದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದು ಸುಶಿಕ್ಷಿತರಾದ 318 ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟನು. ಈ ನಾಲ್ಕು ಮಂದಿ ರಾಜರನ್ನು ದಾನೂರಿನವರೆಗೆ ಹಿಂದಟ್ಟಿದನು.


ಸಿರಿಯಾದವರ ಅರಸ ಬೆನ್ಹದದನು ತನ್ನ ಇಡೀ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತು ಎರಡು ಮಂದಿ ರಾಜರೊಡನೆ ಹೊರಟು ಬಂದು, ಸಮಾರಿಯ ಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.


ಬೆನ್ಹದದನು ಅವನಿಗೆ, “ನನ್ನ ತಂದೆ, ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ; ಅವನು ಸಮಾರಿಯಾದಲ್ಲಿ ಮಾಡಿದಂತೆ ನೀನೂ ನನಗಾಗಿ ದಮಸ್ಕದಲ್ಲಿ ಕೆಲವು ವ್ಯಾಪಾರ ಕೇಂದ್ರಗಳನ್ನು ಸ್ಥಾಪಿಸಿಕೊಳ್ಳಬಹುದು,” ಎಂದು ಹೇಳಿದನು. ಅಹಾಬನು, “ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ,” ಎಂದು ಹೇಳಿ, ಅವನಿಂದ ಪ್ರಮಾಣಮಾಡಿಸಿ ಕಳುಹಿಸಿಬಿಟ್ಟನು.


ನಫ್ತಾಲಿ ಕುಲದ ಗೋತ್ರಗಳಿಗೆ ಸಿಕ್ಕಿದ ಸೊತ್ತಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು