Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:22 - ಕನ್ನಡ ಸತ್ಯವೇದವು C.L. Bible (BSI)

22 ಅನಂತರ ಅರಸನಾದ ಆಸನು ಯೆಹೂದ್ಯರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರೆಸಿ ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲು ಮರಗಳನ್ನು ಇವರ ಮುಖಾಂತರ ತೆಗೆದುಕೊಂಡು ಹೋಗಿ ಬೆನ್ಯಾಮೀನ್ಯರ ಗೆಬ, ಮಿಚ್ಪೆ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅನಂತರ ಅರಸನಾದ ಆಸನು ಯೆಹೂದ್ಯರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರೆಯಿಸಿ, ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲು, ಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಬೆನ್ಯಾಮೀನ್ಯರ ಗೆಬ, ಮಿಚ್ಪೆ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅನಂತರ ಅರಸನಾದ ಆಸನು ಯೆಹೂದ್ಯರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರಿಸಿ ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲುಮರಗಳನ್ನು ಇವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಬೆನ್ಯಾಮೀನ್ಯರ ಗೆಬ, ವಿುಚ್ಬೆ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ ರಾಜನಾದ ಆಸನು ಯೆಹೂದದ ಜನರಿಗೆಲ್ಲ ಒಂದು ಆಜ್ಞೆಯನ್ನು ಮಾಡಿದನು. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಯೂ ಸಹಾಯಮಾಡಬೇಕಾಯಿತು. ಬಾಷನು ರಾಮ ನಗರವನ್ನು ಬಲಪಡಿಸಲೆಂದು ಉಪಯೋಗಿಸುತ್ತಿದ್ದ ಎಲ್ಲಾ ಕಲ್ಲುಗಳನ್ನು ಮತ್ತು ಮರಗಳನ್ನು ಅವರು ರಾಮಕ್ಕೆ ಹೋಗಿ ತೆಗೆದುಕೊಂಡು ಬಂದರು. ಅವರು ಆ ವಸ್ತುಗಳನ್ನು ಬೆನ್ಯಾಮೀನ್ ದೇಶದ ಗೆಬಕ್ಕೆ ಮತ್ತು ಮಿಚ್ಛೆಗಳಿಗೆ ತೆಗೆದುಕೊಂಡು ಹೋದರು. ನಂತರ ರಾಜನಾದ ಆಸನು ಆ ಪಟ್ಟಣಗಳನ್ನು ಮತ್ತಷ್ಟು ಬಲಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಅರಸನಾದ ಆಸನು ಯೆಹೂದರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರೆಯಿಸಿ, ಬಾಷನು ಕಟ್ಟಿಸುತ್ತಾ ಇದ್ದ ರಾಮ ಪಟ್ಟಣದ ಕಲ್ಲುಗಳನ್ನೂ, ಅದರ ತೊಲೆಗಳನ್ನೂ ತೆಗೆದುಕೊಂಡುಹೋಗಿ ಅವುಗಳಿಂದ ಬೆನ್ಯಾಮೀನನ ಗಿಬೆಯ ಮತ್ತು ಮಿಚ್ಪೆ ಎಂಬ ನಗರಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:22
11 ತಿಳಿವುಗಳ ಹೋಲಿಕೆ  

ಹಾಗೂ ಬೆನ್ಯಾಮೀನ್ ಕುಲದಿಂದ


ಮಿಚ್ಫೆ, ಕೆಫೀರಾ, ಮೋಚಾ, ರೆಕೆಮ್, ಇರ್ಪೇಲ್, ತರಲಾ, ಚೇಲ,‌


ನಾನಂತು ಮಿಚ್ಪದಲ್ಲಿ ವಾಸವಾಗಿರುವೆನು. ನಮ್ಮ ಬಳಿಗೆ ಬರುವ ಬಾಬಿಲೋನಿಯರ ಮುಂದೆ ನಿಮ್ಮ ಪ್ರತಿನಿಧಿಯಾಗಿರುವೆನು. ನೀವು ಹೋಗಿ ದ್ರಾಕ್ಷಾರಸ, ಹಣ್ಣು, ಎಣ್ಣೆ ಮುಂತಾದವುಗಳನ್ನು ಸಂಗ್ರಹಿಸಿ ನಿಮ್ಮ ಉಗ್ರಾಣಗಳಲ್ಲಿ ತುಂಬಿಸಿಡಿ. ನೀವು ಹಿಡಿದಿರುವ ಪಟ್ಟಣಗಳಲ್ಲೆ ವಾಸವಾಗಿರಿ,” ಎಂದು ಶಪಥಮಾಡಿ ಹೇಳಿದನು.


ಆಗ ಯೆರೆಮೀಯನು ಅಹೀಕಾಮನ ಮಗ ಗೆದಲ್ಯನು ಇದ್ದ ಮಿಚ್ಪಕ್ಕೆ ಹೋಗಿ ಅವನೊಡನೆ ಹಾಗು ನಾಡಿನ ಉಳಿದ ಜನರ ನಡುವೆ ವಾಸಮಾಡಿದನು.


ಅನಂತರ ಅರಸ ಆಸನು ಎಲ್ಲಾ ಯೆಹೂದ್ಯರನ್ನು ಕರೆಸಿ ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲುಮರಗಳನ್ನು ಇವರ ಮುಖಾಂತರ ತೆಗೆದುಕೊಂಡು ಹೋಗಿ ಗೆಬ, ಮಿಚ್ಪ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.


ಸಮುವೇಲನು ಪುನಃ ಅವರಿಗೆ, “ಇಸ್ರಯೇಲರೆಲ್ಲರೂ ಮಿಚ್ಪೆಯಲ್ಲಿ ಕೂಡಿಬರಲಿ; ನಾನು ನಿಮಗೋಸ್ಕರ ಸರ್ವೇಶ್ವರನನ್ನು ಪ್ರಾರ್ಥಿಸುವೆನು,” ಎಂದನು.


ಇಸ್ರಯೇಲರ ಅರಸ ಬಾಷನು ಯೆಹೂದ್ಯರಿಗೆ ವಿರುದ್ಧ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ‘ರಾಮ್’ ಎಂಬ ಕೋಟೆಯನ್ನು ಕಟ್ಟಿಸಿದನು.


ಅನಂತರ ಗೆಬದಿಂದ ಬೇರ್ಷೆಬದವರೆಗಿರುವ ಜುದೇಯದ ಪಟ್ಟಣಗಳ ಯಾಜಕರನ್ನೆಲ್ಲಾ ಕರೆಯಿಸಿಕೊಂಡು ಅವರು ಧೂಪಸುಡುತ್ತಿದ್ದ ಪೂಜಾಸ್ಥಳಗಳನ್ನು ಹೊಲೆಮಾಡಿದನು. ಪುರಾಧಿಕಾರಿ ಯೆಹೋಶುವನ ಬಾಗಿಲಿನ ಎಡಗಡೆಯಲ್ಲಿದ್ದ ದ್ವಾರದೇವತೆಗಳ ಪೂಜಾ ಸ್ಥಳಗಳನ್ನು ಕೆಡವಿಬಿಟ್ಟನು.


ಉತ್ತರದಲ್ಲಿರುವ ಗೆಬದಿಂದ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ನಾಡೆಲ್ಲ ಸಮತಟ್ಟಾಗಿರುವುದು. ಜೆರುಸಲೇಮ್ ನಗರ ಮಾತ್ರ ಸುತ್ತಮುತ್ತಲಿನ ಪ್ರದೇಶಗಳಿಗಿಂತ ಎತ್ತರವಾಗಿ ನಿಲ್ಲುವುದು. ಒಂದು ಕಡೆ ಬೆನ್ಯಾಮಿನ್ ಬಾಗಿಲಿನಿಂದ ಪೂರ್ವಕಾಲದ ಮೂಲೆಯ ಬಾಗಿಲ ತನಕವೂ ಹನನೇಲಿನ ಗೋಪುರದಿಂದ ಅರಸನ ದ್ರಾಕ್ಷೆಯ ಆಲೆಗಳ ಪರಿಯಂತವೂ ಹರಡಿರುವುದು.


“ಇಷ್ಮಾಯೇಲನು ತಾನು ಕೊಂದವರ ಶವಗಳನ್ನು ಗೆದಲ್ಯನ ಶವದ ಮೇಲೆ ಹಾಕಿಸಿದನು. ಹೀಗೆ ಹಾಕಿಸಿದ ಆ ಬಾವಿಯು ಇಸ್ರಯೇಲಿನ ಅರಸನಾದ ಬಾಷನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾವಿಯೇ ಆಗಿತ್ತು. ಆ ಬಾವಿಯನ್ನು ನೆತನ್ಯನ ಮಗ ಇಷ್ಮಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು