Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:11 - ಕನ್ನಡ ಸತ್ಯವೇದವು C.L. Bible (BSI)

11 ಇವನು ಸಿಂಹಾಸನದಲ್ಲಿ ಕುಳಿತು ಆಳತೊಡಗಿದ ಕೂಡಲೆ ಬಾಷನ ಮನೆಯವರನ್ನೂ ಅವನ ಬಂಧುಮಿತ್ರರನ್ನೂ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ಸಿಂಹಾಸನದ ಮೇಲೆ ಕುಳಿತು ಆಳತೊಡಗಿದ ಕೂಡಲೇ ಬಾಷನ ಮನೆಯವರನ್ನೂ ಅವನ ಬಂಧು ಮಿತ್ರರನ್ನೂ ಸಂಹರಿಸಿದನು. ಅವರಲ್ಲಿ ಒಬ್ಬ ಗಂಡಸನ್ನೂ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇವನು ಸಿಂಹಾಸನದ ಮೇಲೆ ಕೂತು ಆಳತೊಡಗಿದ ಕೂಡಲೆ ಬಾಷನ ಮನೆಯವರನ್ನೂ ಅವನ ಬಂಧು ವಿುತ್ರರನ್ನೂ ಸಂಹರಿಸಿದನು; ಅವರಲ್ಲಿ ಒಬ್ಬ ಗಂಡಸನ್ನೂ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಜಿಮ್ರಿಯು ಹೊಸ ರಾಜನಾದ ಮೇಲೆ ಬಾಷನ ಕುಟುಂಬದವರನ್ನೆಲ್ಲಾ ಕೊಂದುಹಾಕಿದನು. ಅವನು ಬಾಷನ ಕುಟುಂಬದಲ್ಲಿ ಯಾವ ಗಂಡಸನ್ನೂ ಬಿಡಲಿಲ್ಲ. ಬಾಷನ ಸ್ನೇಹಿತರನ್ನೂ ಜಿಮ್ರಿಯು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಜಿಮ್ರಿಯು ಆಳಲು ಆರಂಭಿಸಿದಾಗ, ಅವನು ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಲೇ, ಬಾಷನ ಮನೆಯವರನ್ನೆಲ್ಲಾ ಸಂಹರಿಸಿ, ಅವನ ಬಂಧುಗಳಲ್ಲಿಯೂ, ಅವನ ಸ್ನೇಹಿತರಲ್ಲಿಯೂ ಒಬ್ಬ ಗಂಡಸನನ್ನೂ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:11
10 ತಿಳಿವುಗಳ ಹೋಲಿಕೆ  

ಆದ್ದರಿಂದ ನಿನ್ನನ್ನೂ ನಿನ್ನ ಮನೆಯವರನ್ನೂ ಅಳಿಸಿಬಿಡುವೆನು; ನೆಬಾಟನ ಮಗ ಯಾರೊಬ್ಬಾಮನ ಮನೆಗಾದ ಗತಿ ನಿನ್ನ ಮನೆಗೂ ಆಗುವುದು.


ಅರಸನಾದ ಕೂಡಲೆ, ಯಾರೊಬ್ಬಾಮನ ಮನೆಯವರಲ್ಲಿ ಒಬ್ಬನನ್ನೂ ಜೀವದಿಂದುಳಿಸದೆ ಎಲ್ಲರನ್ನೂ ಸಂಹರಿಸಿದನು. ಹೀಗೆ ಸರ್ವೇಶ್ವರ ಶಿಲೋವಿನ ಪ್ರವಾದಿ ಅಹೀಯನ ಮುಖಾಂತರ ಹೇಳಿಸಿದ ಮಾತು ನೆರವೇರಿತು.


ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ!” ಎಂದು ಪ್ರತಿಜ್ಞೆ ಮಾಡಿದ್ದನು.


ಆದುದರಿಂದ ಯಾರೊಬ್ಬಾಮನೇ, ಕೇಳು; ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು; ನಿನ್ನ ಕುಟುಂಬದ ಗಂಡಸರಲ್ಲಿ, ಸ್ವತಂತ್ರರಾಗಲಿ, ಪರತಂತ್ರರಾಗಲಿ, ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಸಂಹರಿಸಿಬಿಡುವೆನು. ಕಸವನ್ನು ಗುಡಿಸಿ ಎಸೆಯುವಂತೆ ನಾನು ನಿನ್ನ ಮನೆಯವರನ್ನು ಎಸೆದುಬಿಡುವೆನು; ಅವರು ನಿರ್ನಾಮವಾಗುವರು.


ನಿನಗೆ ಕೇಡುಮಾಡದಂತೆ ನನ್ನನ್ನು ತಡೆದ ಇಸ್ರಯೇಲ್ ದೇವರಾದ ಸರ್ವೇಶ್ವರನ ಆಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದಿದ್ದರೆ ಖಂಡಿತವಾಗಿ ನಾಳೆ ಬೆಳಗಾಗುವಷ್ಟರಲ್ಲಿ ನಾಬಾಲನವರಲ್ಲಿ ಒಬ್ಬ ಗಂಡಸಾದರೂ ಖಂಡಿತವಾಗಿ ಉಳಿಯುತ್ತಿರಲಿಲ್ಲ!” ಎಂದು ಹೇಳಿದನು.


ಆಗ ಅದೋನೀಬೆಜೆಕನು, “ಎಪ್ಪತ್ತು ಮಂದಿ ಅರಸರ ಕೈಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿದೆ; ನನ್ನ ಊಟದ ಮೇಜಿನ ಕೆಳಗೆ ಬೀಳುತ್ತಿದ್ದ ಚೂರುಪಾರುಗಳನ್ನು ಅವರು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾರೆ,” ಎಂದನು. ಅವನನ್ನು ಜೆರುಸಲೇಮಿಗೆ ಕರೆತರಲು ಅವನು ಅಲ್ಲೇ ನಿಧನನಾದನು.


ಆಗ ಜಿಮ್ರಿ ಅಲ್ಲಿಗೆ ಹೋಗಿ ಅವನನ್ನು ಕೆಡವಿ ಕೊಂದುಹಾಕಿದನು. ಅವನಿಗೆ ಬದಲಾಗಿ ತಾನೇ ಅರಸನಾದನು. ಇದು ಜುದೇಯದ ಅರಸ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ನಡೆಯಿತು.


ನೀನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿ, ನನಗೆ ಕೋಪವನ್ನೆಬ್ಬಿಸಿದ್ದರಿಂದ ನೆಬಾಟನ ಮಗ ಯಾರೊಬ್ಬಾಮನ ಮನೆಗೂ ಅಹೀಯನ ಮಗ ಬಾಷನ ಮನೆಗೂ ಆದ ಗತಿ ನಿನ್ನ ಮನೆಗೂ ಆಗುವುದು,’ ಎನ್ನುತ್ತಾರೆ.


ನೆಬಾಟನ ಮಗ ಯಾರೊಬ್ಬಾಮನ ಮನೆಗೂ ಅಹೀಯನ ಮಗ ಬಾಷನ ಮನೆಗೂ ಆದ ಗತಿಯೇ ಅಹಾಬನ ಮನೆಗೂ ಆಗುವುದು.


ನಿರ್ಮೂಲವಾಗಲಿ ಅವನಾ ಪೀಳಿಗೆ I ನಿರ್ನಾಮವಾಗಲಿ ಮರುವಂಶದೊಳಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು