Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:24 - ಕನ್ನಡ ಸತ್ಯವೇದವು C.L. Bible (BSI)

24 ಅನಂತರ ಶೆಮೆರ್ ಎಂಬವನಿಗೆ ಆರು ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟು ಅವನಿಂದ ಸಮಾರಿಯ ಎಂಬ ಗುಡ್ಡವನ್ನು ಕೊಂಡುಕೊಂಡನು. ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ ಅದಕ್ಕೆ ಆ ಭೂಮಿಯ ಒಡೆಯನಾಗಿದ್ದ ಶೆಮೆರಿನ ಜ್ಞಾಪಕಾರ್ಥವಾಗಿ ಸಮಾರಿಯ ಎಂಬ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅನಂತರ ಶೆಮೆರ್ ಎಂಬವನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಅವನಿಂದ ಸಮಾರ್ಯವೆಂಬ ಗುಡ್ಡವನ್ನು ಕೊಂಡುಕೊಂಡು, ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ, ಅದಕ್ಕೆ ಆ ಭೂಮಿಯ ಒಡೆಯನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ಸಮಾರ್ಯ ಎಂಬ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅನಂತರ ಶೆಮೆರ್ ಎಂಬವನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಅವನಿಂದ ಸಮಾರ್ಯವೆಂಬ ಗುಡ್ಡವನ್ನು ಕೊಂಡುಕೊಂಡು ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ ಅದಕ್ಕೆ ಆ ಭೂವಿುಯ ಒಡೆಯನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ಸಮಾರ್ಯವೆಂಬ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದರೆ ಒಮ್ರಿಯು ಸಮಾರ್ಯ ಬೆಟ್ಟವನ್ನು ಶೆಮೆರನಿಂದ ಅರವತ್ತೆಂಟು ಕಿಲೋಗ್ರಾಂ ಬೆಳ್ಳಿಗೆ ಕೊಂಡುಕೊಂಡನು. ಒಮ್ರಿಯು ಆ ಬೆಟ್ಟದ ಮೇಲೆ ಒಂದು ನಗರವನ್ನು ಕಟ್ಟಿಸಿದನು. ಅವನು ಆ ನಗರಕ್ಕೆ ಸಮಾರ್ಯವೆಂದು ಅದರ ಒಡೆಯನಾದ ಶೆಮೆರನ ಹೆಸರನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವನು ಶೆಮೆರ್ ಎಂಬವನಿಗೆ ಆರು ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟು ಸಮಾರಿಯ ಎಂಬ ಬೆಟ್ಟವನ್ನು ಕೊಂಡುಕೊಂಡನು. ಆ ಬೆಟ್ಟದ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ, ಅದಕ್ಕೆ ಆ ಜಮೀನಿನ ಯಜಮಾನನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:24
16 ತಿಳಿವುಗಳ ಹೋಲಿಕೆ  

ಅವನು ಸರ್ವೇಶ್ವರನ ಅಪ್ಪಣೆಯಿಂದ ಬೇತೇಲಿನ ಬಲಿಪೀಠಕ್ಕೆ ವಿರುದ್ಧ ಹಾಗು ಸಮಾರಿಯದ ಪಟ್ಟಣಗಳಲ್ಲಿರುವ ಎಲ್ಲಾ ಪೂಜಾಸ್ಥಳಗಳಿಗೆ ವಿರುದ್ಧ ಹೇಳಿದ ಮಾತುಗಳು ನಿಸ್ಸಂದೇಹವಾಗಿ ನೆರವೇರುವುವು,” ಎಂದನು.


ಅಸ್ಸೀರಿಯಾದ ಅರಸನು ಸಮಾರಿಯಾ ಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಯೇಲರನ್ನು ಸೆರೆಯಾಗಿ ಒಯ್ದನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಕಳುಹಿಸಿದನು. ಅವರು ಸಮಾರಿಯಾ ನಾಡನ್ನು ಸ್ವತಂತ್ರಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಿಸಿದರು.


ಅದು ಹೋಶೇಯನ ಆಳ್ವಿಕೆಯ ಒಂಬತ್ತನೆಯ ವರ್ಷದಲ್ಲಿ ಅವನ ಸ್ವಾಧೀನವಾಯಿತು. ಅವನು ಎಲ್ಲಾ ಇಸ್ರಯೇಲರನ್ನು ಅಸ್ಸೀರಿಯ ದೇಶಕ್ಕೆ ಒಯ್ದು ಹಲಹು ಎಂಬ ಪ್ರಾಂತ್ಯದಲ್ಲಿ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯದಲ್ಲಿ ಹಾಗು ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.


ಜುದೇಯದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಏಲನ ಮಗ ಹೋಶೇಯನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಒಂಬತ್ತು ವರ್ಷ ಆಳಿದನು.


ಅರಸನ ಶವವನ್ನು ಸಮಾರಿಯಕ್ಕೆ ತಂದು ಅಲ್ಲಿ ಸಮಾಧಿಮಾಡಿದರು.


ಸಿರಿಯಾದವರ ಅರಸ ಬೆನ್ಹದದನು ತನ್ನ ಇಡೀ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತು ಎರಡು ಮಂದಿ ರಾಜರೊಡನೆ ಹೊರಟು ಬಂದು, ಸಮಾರಿಯ ಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.


ಎಲೀಯನು ಅಹಾಬನನ್ನು ನೋಡುವುದಕ್ಕೆ ಹೊರಟನು. ಆಗ ಸಮಾರಿಯದಲ್ಲಿ ಕ್ಷಾಮ ಬಹಳ ಭೀಕರವಾಗಿತ್ತು.


ಬಾಳ್ ದೇವರಿಗಾಗಿ ಸಮಾರಿಯದಲ್ಲಿ ಒಂದು ಗುಡಿ ಕಟ್ಟಿಸಿ, ಅದರಲ್ಲಿ ಬಲಿಪೀಠವನ್ನು ಕಟ್ಟಿಸಿದನು;


ಸಮಾರಿಯ ಪಟ್ಟಣದಲ್ಲಿ ಅಹಾಬನ ಸಂತಾನದ ಎಪ್ಪತ್ತು ಮಂದಿ ರಾಜಪುತ್ರರಿದ್ದರು. ಯೇಹುವು ಆ ಪಟ್ಟಣದಲ್ಲಿದ್ದ ಜೆಸ್ರೀಲಿನ ಅಧಿಕಾರಿಗಳಾದ ಹಿರಿಯರಿಗೂ ರಾಜಪುತ್ರಪಾಲಕರಿಗೂ ಪತ್ರಗಳನ್ನು ಬರೆದು ಅವುಗಳನ್ನು ದೂತರ ಮುಖಾಂತರ ಕಳುಹಿಸಿದನು.


ಜುದೇಯದ ಅರಸ ಉಜ್ಜೀಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಯಾಬೇಷನ ಮಗ ಶಲ್ಲೂಮನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಒಂದು ತಿಂಗಳು ಆಳಿದನು.


ಇಂತಿರಲು ಗಡ್ಡ ಬೋಳಿಸಿ, ಬಟ್ಟೆ ಹರಿದು, ಗಾಯಮಾಡಿಕೊಂಡಿದ್ದ ಎಂಬತ್ತು ಜನರು ಶೆಕೆಮ್, ಶಿಲೋ, ಸಮಾರಿಯ ಎಂಬ ಊರುಗಳಿಂದ ಬಂದು, ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋಗುತ್ತಿದ್ದರು.


ಇಸ್ರಯೇಲಿನ ಜನರು ನಿಮ್ಮ ಸಹಾಯ ಕೋರಿ ನಿಮ್ಮನ್ನು ಹುಡುಕಿಕೊಂಡು ಬರುವಷ್ಟು ಪ್ರತಿಭಾವಂತರಾಗಿರುವವರೇ, ನಿಮಗೆ ಧಿಕ್ಕಾರ!


ಇದಕ್ಕೆಲ್ಲಾ ಕಾರಣ ಯಕೋಬನ ದ್ರೋಹ. ಇಸ್ರಯೇಲ್ ಮನೆತನದ ಪಾಪ. ಯಕೋಬನ ದ್ರೋಹಕ್ಕೆ ಕಾರಣ ಯಾವುದು? ಸಮಾರ್ಯ ಅಲ್ಲವೆ? ಜುದೇಯದ ವಿಗ್ರಹಾರಾಧನೆಯ ಸ್ಥಳ ಯಾವುದು? ಜೆರುಸಲೇಮ್ ಅಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು