Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:26 - ಕನ್ನಡ ಸತ್ಯವೇದವು C.L. Bible (BSI)

26 ಇಸ್ರಯೇಲರು ವಿಗ್ರಹಗಳಿಂದ ತಮ್ಮ ದೇವರಾದ ಸರ್ವೇಶ್ವರನನ್ನು ರೇಗಿಸಿದಂತೆ ಅವರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗದಲ್ಲೇ ಇವನೂ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇಸ್ರಾಯೇಲರು ವಿಗ್ರಹಗಳಿಂದ ತಮ್ಮ ದೇವರಾದ ಯೆಹೋವನಿಗೆ ಕೋಪ ಬರಿಸುವಂತೆ ಅವರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ಅವನೂ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇಸ್ರಾಯೇಲ್ಯರು ವಿಗ್ರಹಗಳಿಂದ ತಮ್ಮ ದೇವರಾದ ಯೆಹೋವನನ್ನು ರೇಗಿಸುವಂತೆ ಅವರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ಇವನೂ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಗಳನ್ನೇ ಅವನೂ ಮಾಡಿದನು, ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಆದ್ದರಿಂದ ಅವರು ಇಸ್ರೇಲಿನ ದೇವರಾದ ಯೆಹೋವನನ್ನು ಹೆಚ್ಚು ಕೋಪಗೊಳಿಸಿದರು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಆರಾಧಿಸಿದ್ದರಿಂದ ಯೆಹೋವನು ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವನು ನೆಬಾಟನ ಮಗ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:26
18 ತಿಳಿವುಗಳ ಹೋಲಿಕೆ  

ಅವನು ಯಾರೊಬ್ಬಾಮನಂತೆ ತಾನು ಪಾಪಮಾಡಿದ್ದಲ್ಲದೆ ಇಸ್ರಯೇಲರ ಪಾಪಕ್ಕೆ ಕಾರಣವಾಗಿದ್ದನು. ಹೀಗೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದುದರಿಂದ ಈ ದುರ್ಗತಿ ಸಂಭವಿಸಿತು.


ಈ ಕಾರಣ ಪ್ರವಾದಿ ಯೇಹುವಿನ ಮುಖಾಂತರ ಸರ್ವೇಶ್ವರ ಬಾಷನ ಮನೆಗೆ ದುರ್ಗತಿಯನ್ನು ಮುಂತಿಳಿಸಿದ್ದರು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು.


“ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು.


ನನ್ನ ಜನರಾದರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಾರತಿ ಎತ್ತಿದ್ದುಂಟು. ಸನಾತನ ಸನ್ಮಾರ್ಗಗಳಲ್ಲಿ ಮುಗ್ಗರಿಸಿ ಸರಿಯಲ್ಲದ ಸೀಳುದಾರಿಯಲ್ಲಿ ಅಲೆದದ್ದುಂಟು.


“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.


ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ.


ಕೇವಲ ಪಶುಪ್ರಾಯರು, ಮಂದಮತಿಗಳು, ಅವರೆಲ್ಲರು ಬೊಂಬೆ ಪೂಜೆಯಿಂದ ಬರುವ ಜ್ಞಾನ ಮರದಂತೆ ಮೊದ್ದು.


ಆ ಜನಾಂಗಗಳ ಧಾರ್ಮಿಕ ಪದ್ಧತಿಗಳು ಶೂನ್ಯ. ಅರಣ್ಯದ ಮರಗಳನ್ನು ಅವರು ಕತ್ತರಿಸುತ್ತಾರೆ ಬಡಗಿಯ ಕೈಯಿಂದ, ಅವನ ಉಳಿಯಿಂದ, ಅದನ್ನು ರೂಪಿಸುತ್ತಾರೆ.


ಇದೋ, ದೂರ ನಾಡಿನಿಂದ ಕೇಳಿಬರುತ್ತಿದೆ ನನ್ನ ಪ್ರಜೆಯೆಂಬಾಕೆಯ ಈ ಮೊರೆ : “ಸಿಯೋನಿನಲ್ಲಿ ಇನ್ನು ಸರ್ವೇಶ್ವರನಿಲ್ಲವೊ? ಅದರ ರಾಜನು ಅಲ್ಲಿ ವಾಸವಾಗಿಲ್ಲವೊ?” ಅದಕ್ಕೆ ಸರ್ವೇಶ್ವರ : “ಇವರು ತಮ್ಮ ವಿಗ್ರಹಾರಾಧನೆಯಿಂದ ಅನ್ಯದೇವತೆಗಳ ಶೂನ್ಯರೂಪಗಳಿಂದ ನನ್ನನ್ನು ಕೆಣಕಿದ್ದೇಕೆ?”


ಇಲ್ಲಸಲ್ಲದ ದೇವರನು ಅವಲಂಬಿಪರನು ನೀ ಒಲ್ಲೆ I ನಾನಾದರೋ ಪ್ರಭು, ಭರವಸೆಯಿಟ್ಟಿರುವುದು ನಿನ್ನಲ್ಲೆ II


ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಸರ್ವೇಶ್ವರನನ್ನು ರೇಗಿಸಿ ಅವರ ದೃಷ್ಟಿಯಲ್ಲಿ ದ್ರೋಹಿಯಾದನು. ಆದ್ದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಸರ್ವೇಶ್ವರನು ಹನಾನೀಯ ಮಗ ಯೇಹುವಿನ ಮುಖಾಂತರ ಅವನಿಗೂ ಅವನ ಕುಟುಂಬಕ್ಕೂ ಸಂಭವಿಸಲಿರುವ ದುರ್ಗತಿಯನ್ನು ಮುಂತಿಳಿಸಿದ್ದರು.


“ನಾನು ನಿನ್ನನ್ನು ಧೂಳಿನಿಂದ ಎತ್ತಿ ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನನ್ನಾಗಿ ಮಾಡಿದೆ. ಆದರೂ ನೀನು ಯಾರೊಬ್ಬಾಮನ ಮಾರ್ಗದಲ್ಲೇ ನಡೆದು, ನನ್ನ ಜನರಾದ ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದೆ. ಅವರ ಪಾಪದ ಮೂಲಕ ನನಗೆ ಕೋಪವನ್ನೆಬ್ಬಿಸಿದೆ.


‘ರೇಗಿಸಿದರೆನ್ನನು ದೇವರಲ್ಲದವುಗಳ ಮೂಲಕ, ಸಿಟ್ಟೇರಿಸಿದರು ಅಚೇತ ವಿಗ್ರಹಗಳ ಮೂಲಕ. ನಾನವರಲಿ ಅಸೂಯೆ ಹುಟ್ಟಿಸುವೆನು ಜನಾಂಗವಲ್ಲದವರ ಮುಖಾಂತರ, ನಾನವರನು ಸಿಟ್ಟಿಗೆಬ್ಬಿಸುವೆನು ಸಭ್ಯರಲ್ಲದಾ ಜನರ ಮುಖಾಂತರ.


ಇವನ ಉಳಿದ ಚರಿತ್ರೆ, ಪರಾಕ್ರಮ ಹಾಗು ಕಾರ್ಯಕಲಾಪಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.


“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು