Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:29 - ಕನ್ನಡ ಸತ್ಯವೇದವು C.L. Bible (BSI)

29 ಯೆಹೂದ್ಯರ ಅರಸ ಆಸನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಒಮ್ರಿಯ ಮಗ ಅಹಾಬನು ಇಸ್ರಯೇಲರ ಅರಸನಾದನು; ಸಮಾರಿಯ ಪಟ್ಟಣದಲ್ಲಿ ಇಪ್ಪತ್ತೆರಡು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಒಮ್ರಿಯ ಮಗನಾದ ಅಹಾಬನು ಇಸ್ರಾಯೇಲರ ಅರಸನಾಗಿ ಸಮಾರ್ಯಪಟ್ಟಣದಲ್ಲಿ ಇಪ್ಪತ್ತೆರಡು ವರ್ಷ ಆಳ್ವಿಕೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯೆಹೂದ್ಯರ ಅರಸನಾದ ಆಸನ ಆಳಿಕೆಯ ಮೂವತ್ತೆಂಟನೆಯ ವರುಷದಲ್ಲಿ ಒಮ್ರಿಯ ಮಗನಾದ ಅಹಾಬನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯಪಟ್ಟಣದಲ್ಲಿ ಇಪ್ಪತ್ತೆರಡು ವರುಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆಸನು ಯೆಹೂದದ ರಾಜನಾಗಿದ್ದ ಮೂವತ್ತೆಂಟನೇ ವರ್ಷದಲ್ಲಿ ಒಮ್ರಿಯ ಮಗನಾದ ಅಹಾಬನು ಇಸ್ರೇಲಿನ ರಾಜನಾದನು. ಅಹಾಬನು ಇಸ್ರೇಲನ್ನು ಸಮಾರ್ಯ ಪಟ್ಟಣದಲ್ಲಿ ಇಪ್ಪತ್ತೆರಡು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೆಹೂದದ ಅರಸನಾದ ಆಸನ ಮೂವತ್ತೆಂಟನೆಯ ವರ್ಷದಲ್ಲಿ ಒಮ್ರಿಯ ಮಗ ಅಹಾಬನು ಇಸ್ರಾಯೇಲಿನ ಮೇಲೆ ಅರಸನಾಗಿ ಸಮಾರ್ಯದಲ್ಲಿ ಇಪ್ಪತ್ತೆರಡು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:29
11 ತಿಳಿವುಗಳ ಹೋಲಿಕೆ  

ಅನಂತರ ಶೆಮೆರ್ ಎಂಬವನಿಗೆ ಆರು ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟು ಅವನಿಂದ ಸಮಾರಿಯ ಎಂಬ ಗುಡ್ಡವನ್ನು ಕೊಂಡುಕೊಂಡನು. ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ ಅದಕ್ಕೆ ಆ ಭೂಮಿಯ ಒಡೆಯನಾಗಿದ್ದ ಶೆಮೆರಿನ ಜ್ಞಾಪಕಾರ್ಥವಾಗಿ ಸಮಾರಿಯ ಎಂಬ ಹೆಸರಿಟ್ಟನು.


ಒಮ್ರಿ ಸತ್ತು ಪಿತೃಗಳ ಬಳಿಗೆ ಸೇರಿದಾಗ ಇವನ ಶವವನ್ನು ಸಮಾರಿಯ ಪಟ್ಟಣದಲ್ಲಿ ಸಮಾಧಿಮಾಡಿದರು. ಇವನ ಸ್ಥಾನದಲ್ಲಿ ಇವನ ಮಗ ಅಹಾಬನು ಅರಸನಾದನು.


ಇವನು ತನ್ನ ಹಿಂದಿನ ಅಧಿಕಾರಿಗಳೆಲ್ಲರಿಗಿಂತಲೂ ದುಷ್ಟನು. ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿ.


ಇದಲ್ಲದೆ, ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿದನು; ಹೀಗೆ ಇನ್ನು ಎಷ್ಟೋ ಅಧರ್ಮ ಕೆಲಸಗಳನ್ನು ಮಾಡಿ, ಮುಂದೆಯಿದ್ದ ಎಲ್ಲ ಇಸ್ರಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ರೇಗಿಸಿದನು.


“ನೀನು ಹೋಗಿ ಸಮಾರಿಯಲ್ಲಿ ವಾಸಿಸುವ ಇಸ್ರಯೇಲ್ ಅರಸನನ್ನು ಕಾಣು; ಅವನು ಈಗ ನಾಬೋತನ ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಅಲ್ಲಿಗೆ ಹೋಗಿದ್ದಾನೆ;


ಇಂತಿರಲು ಗಡ್ಡ ಬೋಳಿಸಿ, ಬಟ್ಟೆ ಹರಿದು, ಗಾಯಮಾಡಿಕೊಂಡಿದ್ದ ಎಂಬತ್ತು ಜನರು ಶೆಕೆಮ್, ಶಿಲೋ, ಸಮಾರಿಯ ಎಂಬ ಊರುಗಳಿಂದ ಬಂದು, ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋಗುತ್ತಿದ್ದರು.


“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”


ಆ ಕಾಲದಲ್ಲಿ ಇಸ್ರಯೇಲರಲ್ಲಿ ಎರಡು ಪಂಗಡಗಳಿದ್ದವು; ಒಂದು ಪಂಗಡದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು; ಇನ್ನೊಂದು ಪಂಗಡದವರು ಒಮ್ರಿಯನ್ನು ಹಿಂಬಾಲಿಸಿದರು.


ಯೆಹೂದ್ಯರ ಅರಸ ಆಸನ ಆಳ್ವಿಕೆಯ ಮೂವತ್ತೊಂದನೆಯ ವರ್ಷದಲ್ಲಿ ಒಮ್ರಿ ಇಸ್ರಯೇಲರ ಅರಸನಾಗಿ ಹನ್ನೆರಡು ವರ್ಷ ಆಳಿದನು. ಆರು ವರ್ಷಗಳವರೆಗೆ ತಿರ್ಚವೇ ಅವನ ರಾಜಧಾನಿಯಾಗಿತ್ತು.


ಅಷ್ಟರಲ್ಲಿ ಅಮಚ್ಯನು ತನ್ನ ಜೊತೆಯಲ್ಲಿ ಯುದ್ಧಕ್ಕೆ ಬರಬಾರದೆಂದು ಹಿಂದಕ್ಕೆ ಕಳುಹಿಸಿದ ಗುಂಪಿನವರು, ಸಮಾರಿಯಾಕ್ಕೂ ಬೇತ್ಹೋರೋನಿಗೂ ಮಧ್ಯದಲ್ಲಿರುವ ಜುದೇಯ ಪಟ್ಟಣಗಳ ಮೇಲೆ ದಾಳಿಮಾಡಿ, ಮೂರು ಸಾವಿರ ಜನರನ್ನು ಕೊಂದು, ದೊಡ್ಡ ಕೊಳ್ಳೆಯನ್ನು ಕೂಡಿಸಿಕೊಂಡು ಹೋದರು.


ಪೂರ್ವದಲ್ಲಿ ಎಫ್ರಯಿಮ್ ಮಾತನಾಡಿದಾಗ ಎಲ್ಲರೂ ನಡುಗುತ್ತಿದ್ದರು. ಅದು ಇಸ್ರಯೇಲಿನಲ್ಲಿ ಅಷ್ಟು ಉನ್ನತ ಸ್ಥಿತಿಗೆ ಏರಿತ್ತು. ಆದರೆ ಅದು ಬಾಳ್ ದೇವತೆಗೆ ಆರಾಧನೆ ಸಲ್ಲಿಸಿದ್ದರಿಂದ ಪಾಪಕಟ್ಟಿಕೊಂಡು ಪತನವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು