Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:9 - ಕನ್ನಡ ಸತ್ಯವೇದವು C.L. Bible (BSI)

9 ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬವನು ಅವನಿಗೆ ವಿರುದ್ಧ ಒಳಸಂಚು ಮಾಡಿದನು. ಒಮ್ಮೆ ಅರಸನು ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನೆಂಬವನ ಮನೆಯಲ್ಲಿ ಕುಡಿದು ಮತ್ತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿದನು. ಅರಸನು ತಿರ್ಚದಲ್ಲಿ ತನ್ನ ಅರಮನೆಯ ಮೇಲ್ವಿಚಾರಕನಾದ ಅರ್ಚನೆಂಬುವವನ ಮನೆಯಲ್ಲಿ ಕುಡಿದು ಮತ್ತನಾಗಿರುವಾಗ ಜಿಮ್ರಿಯು ಅಲ್ಲಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬವನು ಅವನಿಗೆ ವಿರೋಧವಾಗಿ ಒಳಸಂಚುಮಾಡಿದನು. ಅರಸನು ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನೆಂಬವನ ಮನೆಯಲ್ಲಿ ಕುಡಿದು ಮತ್ತನಾಗಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜಿಮ್ರಿಯು ಏಲನ ಅಧಿಕಾರಿಗಳಲ್ಲಿ ಒಬ್ಬನಾಗಿದ್ದನು. ಏಲನ ರಥಬಲದ ಅರ್ಧಭಾಗಕ್ಕೆ ಜಿಮ್ರಿಯು ಅಧಿಪತಿ. ಆದರೆ ಏಲನ ವಿರುದ್ಧ ಜಿಮ್ರಿಯು ಸಂಚುಮಾಡಿದನು. ರಾಜನಾದ ಏಲನು ತಿರ್ಚದಲ್ಲಿದ್ದನು. ಅವನು ಅರ್ಚನ ಮನೆಯಲ್ಲಿ ಕುಡಿದು ಮತ್ತನಾದನು. ಅರ್ಚನು ತಿರ್ಚದಲ್ಲಿದ್ದ ಅರಮನೆಯ ಮೇಲ್ವಿಚಾರಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿರುವಾಗ, ಅರ್ಧ ರಥಗಳಿಗೆ ಅಧಿಪತಿಯಾಗಿರುವ ಅವನ ಸೇವಕನಾದ ಜಿಮ್ರಿಯನು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:9
28 ತಿಳಿವುಗಳ ಹೋಲಿಕೆ  

ಆದುದರಿಂದ ಅಹಾಬನು ತನ್ನ ಉಗ್ರಾಣಿಕನಾದ ಓಬದ್ಯ ಎಂಬವನನ್ನು ಕರೆಯಿಸಿದನು.


ಜೋಸೆಫ್ ಅವನ ಕೃಪೆಗೆ ಪಾತ್ರನಾದ. ದಣಿ ಅವನನ್ನು ತನ್ನ ಆಪ್ತಸೇವಕನನ್ನಾಗಿ ನೇಮಿಸಿಕೊಂಡ. ಅದು ಮಾತ್ರವಲ್ಲ, ತನ್ನ ಮನೆಯಲ್ಲೇ ಮೇಲ್ವಿಚಾರಕನನ್ನಾಗಿ ಮಾಡಿ, ತನ್ನ ಆಸ್ತಿಪಾಸ್ತಿಯನ್ನೆಲ್ಲ ಅವನ ವಶಕ್ಕೆ ಒಪ್ಪಿಸಿದ.


ಒಮ್ಮೆ ಅವನು, ತನ್ನ ಆಸ್ತಿಯನ್ನು ನೋಡಿಕೊಳ್ಳುತ್ತಿದ್ದ ಹಿರಿಯ ಸೇವಕನಿಗೆ,


“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!


ಆತನ ವೈರಿಗಳು ಹೆಣೆದುಕೊಂಡಿದ್ದರೂ ಮುಳ್ಳುಗಳಂತೆ ಕುಡಿದು ಮತ್ತರಾಗಿ ಮುಳುಗಿದ್ದರೂ ಮದ್ಯದಲ್ಲೆ ತುತ್ತಾಗುವರು ಬೆಂಕಿಗೆ ತೀರ ಒಣಗಿದ ಕೂಳೆಯಂತೆ.


ಅದೇ ರಾತ್ರಿ ಬಾಬಿಲೋನಿನ ರಾಜ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.


ಬಾಬಿಲೋನಿನ ರಾಜ್ಯಪಾಲರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಯೋಧರು, ಇವರೆಲ್ಲರಿಗೆ ತಲೆಗೇರುವ ತನಕ ಕುಡಿಸುವೆನು. ಅವರು ಎಂದೆಂದಿಗೂ ಎಚ್ಚರಗೊಳ್ಳದೆ ಚಿರನಿದ್ರೆ ಮಾಡುವರು ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರನೆಂಬ ರಾಜಾಧಿರಾಜರು.”


ಆಗ ಏಲನ ಮಗ ಹೋಶೇಯನು, ರೆಮಲ್ಯನ ಮಗ ಪೆಕಹನಿಗೆ ವಿರುದ್ಧ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು, ಇವನ ಸ್ಥಾನದಲ್ಲಿ ತಾನೇ ಅರಸನಾದನು.


ಇವನ ಸರದಾರನೂ ರೆಮಲ್ಯನ ಮಗನೂ ಆಗಿದ್ದ ಪೆಕಹ್ಯನು ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರುದ್ಧ ಒಳಸಂಚುಮಾಡಿ ಸಮಾರಿಯದಲ್ಲಿರುವ ಅರಮನೆಯ ಗರ್ಭಗೃಹದಲ್ಲೇ ಇವನನ್ನು ಮತ್ತು ಅರ್ಗೋಬ್, ಅರ್ಯೇ ಎಂಬವರನ್ನು ಕೊಂದು ಇವನಿಗೆ ಬದಲಾಗಿ ತಾನೇ ಅರಸನಾದನು.


ಯಾಬೇಷನ ಮಗ ಶಲ್ಲೂಮನು ಅವರಿಗೆ ವಿರುದ್ಧ ಒಳಸಂಚುಮಾಡಿ ಪ್ರಜೆಗಳ ಮುಂದೆಯೇ ಅವನನ್ನು ಕೊಂದು ಅವನಿಗೆ ಬದಲಾಗಿ ತಾನೇ ಅರಸನಾದನು.


ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದರು.


ಹೀಗೆ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಯೋರಾಮನಿಗೆ ಒಳಸಂಚು ಮಾಡಿದನು. (ಸಿರಿಯಾದವರ ಅರಸನಾದ ಹಜಾಯೇಲನು ರಾಮೋತ್ ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯೋರಾಮನು ಅದನ್ನು ಕಾಪಾಡುವುದಕ್ಕಾಗಿ ಎಲ್ಲಾ ಇಸ್ರಯೇಲರ ಸಹಿತ ಹೋಗಿ, ಹಜಾಯೇಲನೊಡನೆ ಯುದ್ಧಮಾಡಿದನು.


ಮಧ್ಯಾಹ್ನದಲ್ಲಿ, ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಮಂದಿ ರಾಜರ ಸಂಗಡ ಮದ್ಯಪಾನಮಾಡಿ ಮತ್ತನಾಗಿ, ಡೇರೆಯಲ್ಲಿ ಕುಳಿತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.


ಇವನು ಇಸ್ರಯೇಲರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ ಅಹೀಯನ ಮಗನೂ ಆದ ಬಾಷನೆಂಬವನು ಇವನಿಗೆ ವಿರುದ್ಧ ಒಳಸಂಚು ಮಾಡಿ ಇವನನ್ನು ಕೊಂದನು.


ಈ ಮನೆಯಲ್ಲಿ ನನಗಿಂತ ಹೆಚ್ಚಿನ ಅಧಿಕಾರ ಪಡೆದವರು ಒಬ್ಬರೂ ಇಲ್ಲ; ನಿಮ್ಮನ್ನು ಬಿಟ್ಟು ಮಿಕ್ಕ ಎಲ್ಲವನ್ನು ನನಗೆ ಅಧೀನಮಾಡಿದ್ದಾರೆ. ನೀವು ಅವರ ಧರ್ಮಪತ್ನಿ ಅಲ್ಲವೆ? ಹೀಗಿರುವಲ್ಲಿ, ನಾನು ಇಂತಹ ಮಹಾದುಷ್ಕೃತ್ಯವೆಸಗಿ ದೇವರಿಗೆ ವಿರುದ್ಧ ಹೇಗೆ ಪಾಪಮಾಡಲಿ?” ಎಂದು ಆಕೆಗೆ ಉತ್ತರಕೊಟ್ಟ.


ತರುವಾಯ ಆ ಸೇವಕ ತನ್ನ ಒಡೆಯನ ಒಂಟೆಗಳಲ್ಲಿ ಹತ್ತನ್ನು ಸಿದ್ಧಮಾಡಿಕೊಂಡು, ಅವನ ಆಸ್ತಿಯಿಂದ ಶ್ರೇಷ್ಠವಾದ ಒಡವೆಗಳನ್ನು ತೆಗೆದುಕೊಂಡು ಹೊರಟನು. ಎರಡು ನದಿಗಳ ಮಧ್ಯೆ ಇರುವ ಉತ್ತರ ಮೆಸಪೊಟೇಮಿಯಾ ನಾಡಿಗೆ ಬಂದನು. ಅಲ್ಲಿಂದ ನಾಹೋರನು ವಾಸಿಸಿದ್ದ ಊರನ್ನು ಮುಟ್ಟಿದನು.


ಅದಕ್ಕೆ ಪ್ರತ್ಯುತ್ತರವಾಗಿ ಅಬ್ರಾಮನು - “ಸ್ವಾಮಿ ಸರ್ವೇಶ್ವರಾ, ನನಗೇ ಏನು ಕೊಟ್ಟರೇನು? ನಾನು ಪುತ್ರಸಂತಾನವಿಲ್ಲದವನು. ನನ್ನ ಮನೆಮಾರುಗಳಿಗೆ ಉತ್ತರಾಧಿಕಾರಿ ದಮಸ್ಕದ ಎಲೀಯೆಜರನೇ ಹೊರತು ಮತ್ತಾರೂ ಇಲ್ಲ;


ಯೆಹೂದ್ಯರ ಅರಸ ಆಸನ ಆಳ್ವಿಕೆಯ ಇಪ್ಪತ್ತಾರನೆಯ ವರ್ಷದಲ್ಲಿ ಬಾಷನ ಮಗ ಏಲನು ತಿರ್ಚದಲ್ಲಿ ಇಸ್ರಯೇಲರ ಅರಸನಾಗಿ ಎರಡು ವರ್ಷ ಆಳಿದನು.


ಆಗ ಜಿಮ್ರಿ ಅಲ್ಲಿಗೆ ಹೋಗಿ ಅವನನ್ನು ಕೆಡವಿ ಕೊಂದುಹಾಕಿದನು. ಅವನಿಗೆ ಬದಲಾಗಿ ತಾನೇ ಅರಸನಾದನು. ಇದು ಜುದೇಯದ ಅರಸ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ನಡೆಯಿತು.


ತನ್ನ ರಾಜರುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೇ, ಪಟ್ಟಣಕ್ಕೆ ಲಗ್ಗೆ ಹತ್ತುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.


ಕುಡುಕತನ ರಾಜನಿಗೆ ತಕ್ಕುದ್ದಲ್ಲ; ಲೆಮೂವೇಲನೇ ಕೇಳು, ಅದು ರಾಜನಿಗೆ ಯೋಗ್ಯವಲ್ಲ; ಮದ್ಯಪಾನಾಸಕ್ತಿ ಅಧಿಕಾರಿಗಳಿಗೆ ಹಿತವಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು