Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:11 - ಕನ್ನಡ ಸತ್ಯವೇದವು C.L. Bible (BSI)

11 ಆಕೆ ಹೋಗುತ್ತಿರುವಾಗ ಮತ್ತೆ ಆಕೆಯನ್ನು ಕರೆದು, “ನೀನು ಬರುವಾಗ ನನಗೆ ಒಂದು ತುಂಡು ರೊಟ್ಟಿಯನ್ನು ಸಹ ತೆಗೆದುಕೊಂಡು ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಕೆಯು ಹೋಗುತ್ತಿರುವಾಗ ಪುನಃ ಆಕೆಯನ್ನು ಕರೆದು, “ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಕೆಯು ಹೋಗುತ್ತಿರುವಾಗ ತಿರಿಗಿ ಆಕೆಯನ್ನು ಕರೆದು - ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಸ್ತ್ರೀಯು ಅವನಿಗೆ ನೀರನ್ನು ತರಲು ಹೋಗುತ್ತಿರುವಾಗ, ಎಲೀಯನು, “ದಯವಿಟ್ಟು ಒಂದು ತುಂಡು ರೊಟ್ಟಿಯನ್ನು ತೆಗೆದುಕೊಂಡು ಬಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವಳು ತೆಗೆದುಕೊಂಡು ಬರಲು ಹೋಗುತ್ತಿರುವಾಗ ಅವನು ಅವಳನ್ನು ಕರೆದು, “ನೀನು ದಯಮಾಡಿ ನಿನ್ನ ಕೈಯಲ್ಲಿ ರೊಟ್ಟಿಯ ತುಂಡನ್ನು ನನಗೆ ತೆಗೆದುಕೊಂಡು ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:11
9 ತಿಳಿವುಗಳ ಹೋಲಿಕೆ  

ಅತಿಥಿಸತ್ಕಾರ ಮಾಡುವುದನ್ನು ಮರೆಯದಿರಿ. ಅದನ್ನು ಮಾಡುವಾಗ ಅರಿಯದೆ ಕೆಲವರು ದೇವದೂತರನ್ನೇ ಉಪಚರಿಸಿದ್ದಾರೆ.


ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.”


(ಈಜೆಬೆಲಳು ಸರ್ವೇಶ್ವರನ ಪ್ರವಾದಿಗಳನ್ನು ಸಂಹರಿಸುತ್ತಿದ್ದಾಗ ಈ ಓಬದ್ಯನು ಸರ್ವೇಶ್ವರನಲ್ಲಿ ಬಹು ಭಯಭಕ್ತಿಯುಳ್ಳವನಾಗಿ ನೂರು ಮಂದಿ ಪ್ರವಾದಿಗಳನ್ನು ಕರೆದುಕೊಂಡುಹೋಗಿ ಅವರನ್ನು ಐವತ್ತೈವತ್ತು ಮಂದಿಯನ್ನಾಗಿ, ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)


ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು. ದಾಸನಿರುವ ಸ್ಥಳದ ಹತ್ತಿರ ಹಾದುಹೋಗುತ್ತಿದ್ದೀರಲ್ಲವೇ?” ಎನ್ನಲು ಅವರು “ನೀನು ಹೇಳಿದಂತೆಯೇ ಆಗಲಿ,” ಎಂದರು.


ಅವನು ಅಲ್ಲಿಂದ ಹೊರಟು ಸರೆಪ್ತಾದ ಊರು ಬಾಗಿಲಿನ ಸಮೀಪಕ್ಕೆ ಬಂದನು. ಸೌದೆ ಕೂಡಿಸುತ್ತಿದ್ದ ಒಬ್ಬ ವಿಧವೆಯನ್ನು ಕಂಡು ಆಕೆಯನ್ನು ಕರೆದು, “ದಯವಿಟ್ಟು ಕುಡಿಯುವುದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ,” ಎಂದು ಹೇಳಿದನು.


ಆಕೆ, “ನಿನ್ನ ದೇವರಾದ ಸರ್ವೇಶ್ವರನಾಣೆ, ನನ್ನ ಹತ್ತಿರ ರೊಟ್ಟಿಯಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆ, ಇವುಗಳ ಹೊರತು ಬೇರೇನೂ ಇಲ್ಲ. ಈಗ ಸೌದೆ ಆಯ್ದುಕೊಂಡು ಹೋಗಿ ನನಗೂ ನನ್ನ ಮಗನಿಗೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ,” ಎಂದು ಉತ್ತರ ಕೊಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು