Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:13 - ಕನ್ನಡ ಸತ್ಯವೇದವು C.L. Bible (BSI)

13 ಆಗ ಎಲೀಯನು, “ಹೆದರಬೇಡ, ನೀನು ಹೇಳಿದಂತೆ ಮಾಡು; ಆದರೆ ಮೊದಲು ಅದರಿಂದ ನನಗೆ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ; ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಎಲೀಯನು ಆಕೆಗೆ, “ಹೆದರಬೇಡ, ನೀನು ಹೇಳಿದಂತೆಯೇ ಮಾಡು. ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ. ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಎಲೀಯನು ಆಕೆಗೆ - ಹೆದರಬೇಡ; ನೀನು ಹೇಳಿದಂತೆ ಮಾಡು, ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ; ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಎಲೀಯನು ಆ ಸ್ತ್ರೀಗೆ, “ಚಿಂತಿಸದಿರು, ಮನೆಗೆ ಹೋಗಿ ನೀನು ಹೇಳಿದಂತೆ ಆಹಾರವನ್ನು ಸಿದ್ಧಪಡಿಸು. ಆದರೆ ನಿನ್ನಲ್ಲಿರುವ ಹಿಟ್ಟಿನಿಂದ ಮೊದಲು ಒಂದು ಚಿಕ್ಕ ರೊಟ್ಟಿಯನ್ನು ಮಾಡು. ಆ ರೊಟ್ಟಿಯನ್ನು ನನಗೆ ತಂದುಕೊಡು; ನಂತರ ನಿನಗೆ ಮತ್ತು ನಿನ್ನ ಮಗನಿಗೆ ಅಡಿಗೆ ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಎಲೀಯನು ಅವಳಿಗೆ, “ಭಯಪಡಬೇಡ, ನೀನು ಹೇಳಿದ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿಮಾಡಿ, ನನ್ನ ಬಳಿಗೆ ತೆಗೆದುಕೊಂಡು ಬಾ. ತರುವಾಯ ನಿನಗೂ, ನಿನ್ನ ಮಗನಿಗೂ ಸಿದ್ಧಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:13
19 ತಿಳಿವುಗಳ ಹೋಲಿಕೆ  

ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.


ನನ್ನ ಆಲಯದಲ್ಲಿ ಆಹಾರಕ್ಕೆ ಕೊರತೆಯಿಲ್ಲದಿರುವಂತೆ ದಶಮಾಂಶವನ್ನು ಪೂರ್ತಿಯಾಗಿ ನನ್ನ ಭಂಡಾರಕ್ಕೆ ತೆಗೆದುಕೊಂಡು ಬನ್ನಿ. ಆ ಬಳಿಕ ಪರಲೋಕದ ದ್ವಾರಗಳನ್ನು ತೆರೆದು, ತುಂಬಿತುಳುಕುವಷ್ಟು ವರದಾನಗಳನ್ನು ನಿಮ್ಮ ಮೇಲೆ ಸುರಿಸುವೆನೋ ಇಲ್ಲವೋ ಎಂಬುದನ್ನು ಪರೀಕ್ಷಿಸಿನೋಡಿ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.


‘ಪೌಲನೇ, ಭಯಪಡಬೇಡ. ನೀನು ಚಕ್ರವರ್ತಿಯ ಸಮ್ಮುಖದಲ್ಲಿ ನಿಲ್ಲಲೇಬೇಕಾಗಿದೆ; ಇಗೋ, ನಿನ್ನ ಸಂಗಡ ಪ್ರಯಾಣಮಾಡುವ ಎಲ್ಲರ ಪ್ರಾಣಗಳನ್ನು ದೇವರು ನಿನ್ನ ನಿಮಿತ್ತ ಉಳಿಸಿದ್ದಾರೆ,’ ಎಂದು ಅಭಯವಿತ್ತನು.


ಆಗ ದೂತನು ಆ ಮಹಿಳೆಯರಿಗೆ, “ಹೆದರಬೇಡಿ, ಶಿಲುಬೆಗೇರಿಸಿದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆ. ಅವರು ಇಲ್ಲಿಲ್ಲ;


ನಿನ್ನ ದೇವರಾದ ಸರ್ವೇಶ್ವರ ನಾನೇ ಭಯಪಡಬೇಡ, ನಿನಗೆ ನಾನೇ ನೆರವಾಗುವೆ ಎಂತಲೇ, ನಿನ್ನ ಕೈ ಹಿಡಿದುಕೊಳ್ಳುವೆ.


ನಿನ್ನ ಆಸ್ತಿಯನ್ನರ್ಪಿಸಿ ಸರ್ವೇಶ್ವರನನ್ನು ಸನ್ಮಾನಿಸು, ನಿನ್ನ ಬೆಳೆಯ ಪ್ರಥಮ ಫಲವನ್ನು ಕಾಣಿಕೆಯಾಗಿಕೊಡು.


ಈ ಸಾರಿ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಜೆರುಸಲೇಮಿನವರೇ, ಸುಮ್ಮನೆ ನಿಂತುಕೊಂಡು ಸರ್ವೇಶ್ವರ ನಿಮಗಾಗಿ ನಡೆಸುವ ರಕ್ಷಣಾಕಾರ್ಯವನ್ನು ನೋಡಿರಿ; ಹೆದರಬೇಡಿ, ಕಳವಳಗೊಳ್ಳಬೇಡಿ. ನಾಳೆ ಅವರೆದುರಿಗೆ ಹೊರಡಿರಿ; ಸರ್ವೇಶ್ವರ ನಿಮ್ಮೊಂದಿಗೆ ಇರುವರು!” ಎಂದು ಹೇಳಿದನು.


ಆಗ ಎಲೀಷನು, “ಹೆದರಬೇಡ; ಅವರ ಕಡೆ ಇರುವವರಿಗಿಂತಲೂ ನಮ್ಮ ಕಡೆ ಇರುವವರು ಹೆಚ್ಚಾಗಿದ್ದಾರೆ,” ಎಂದು ಹೇಳಿ,


ಅದಕ್ಕೆ ಮೋಶೆ ಆ ಜನರಿಗೆ, “ಅಂಜಬೇಡಿ, ಸುಮ್ಮನಿರಿ, ಈ ದಿನ ಸರ್ವೇಶ್ವರ ನಿಮ್ಮನ್ನು ಹೇಗೆ ರಕ್ಷಿಸುತ್ತಾರೆಂದು ನೋಡಿ! ಈ ದಿನ ನೀವು ನೋಡುವ ಈಜಿಪ್ಟಿನವರನ್ನು ಇನ್ನೆಂದಿಗೂ ನೋಡುವುದಿಲ್ಲ.


ವಿಶ್ವಾಸವಿದ್ದುದರಿಂದಲೇ ಅಬ್ರಹಾಮನು ತಾನು ಪರಿಶೋಧಿತನಾದಾಗ ಇಸಾಕನನ್ನು ಬಲಿಯಾಗಿ ಅರ್ಪಿಸಲು ಮುಂದೆ ಬಂದನು.


“ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆಯನ್ನು ಅಥವಾ ತಾಯಿಯನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಅಥವಾ ಮಗಳನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಆಕೆ, “ನಿನ್ನ ದೇವರಾದ ಸರ್ವೇಶ್ವರನಾಣೆ, ನನ್ನ ಹತ್ತಿರ ರೊಟ್ಟಿಯಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆ, ಇವುಗಳ ಹೊರತು ಬೇರೇನೂ ಇಲ್ಲ. ಈಗ ಸೌದೆ ಆಯ್ದುಕೊಂಡು ಹೋಗಿ ನನಗೂ ನನ್ನ ಮಗನಿಗೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ,” ಎಂದು ಉತ್ತರ ಕೊಟ್ಟಳು.


ಇಸ್ರಯೇಲ್ ದೇವರಾದ ಸರ್ವೇಶ್ವರ ನಿನಗೆ, “ನಾನು ನಾಡಿಗೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಕೆಯಲ್ಲಿರುವ ಹಿಟ್ಟು ತೀರುವುದಿಲ್ಲ, ಕುಡಿಕೆಯಲ್ಲಿರುವ ಎಣ್ಣೆ ಮುಗಿದುಹೋಗುವುದಿಲ್ಲ,” ಎಂದು ಹೇಳುತ್ತಾರೆ ಎಂದನು.


ಆ ರಾತ್ರಿ ಸರ್ವೇಶ್ವರ ಅವನಿಗೆ ದರ್ಶನವಿತ್ತು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ ಅಂಜಬೇಡ, ನಿನ್ನ ಸಂಗಡ ನಾನಿರುವೆ. ಆ ನನ್ನ ದಾಸ ಅಬ್ರಹಾಮನ ನಿಮಿತ್ತ ನಿನ್ನ ಹರಸಿ ನಾ ಹೆಚ್ಚಿಸುವೆ ನಿನ್ನ ಸಂತಾನವ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು