Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:15 - ಕನ್ನಡ ಸತ್ಯವೇದವು C.L. Bible (BSI)

15 ಆಕೆ ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ ಆಕೆಯ ಮನೆಯವರೂ ಎಲೀಯನೂ ಅದನ್ನು ಅನೇಕ ದಿವಸಗಳವರೆಗೆ ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಕೆಯು ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ, ಆಕೆಯ ಮನೆಯವರೂ ಮತ್ತು ಎಲೀಯನು ಅದನ್ನು ಅನೇಕ ದಿನಗಳವರೆಗೆ ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಕೆಯು ಹೋಗಿ ಅವನು ಹೇಳಿದಂತೆಯೇ ಮಾಡಿದಳು; ಆಕೆಯೂ ಆಕೆಯ ಮನೆಯವರೂ ಎಲೀಯನೂ ಅದನ್ನು ಅನೇಕ ದಿವಸಗಳವರೆಗೆ ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆ ಸ್ತ್ರೀಯು ತನ್ನ ಮನೆಗೆ ಹೋದಳು. ಎಲೀಯನು ಹೇಳಿದಂತೆ ಆಕೆಯು ಮಾಡಿದಳು. ಎಲೀಯನು, ಆ ಸ್ತ್ರೀಯು ಮತ್ತು ಅವಳ ಮಗನು ಅನೇಕ ದಿನಗಳಿಗಾಗುವಷ್ಟು ಆಹಾರವನ್ನು ಹೊಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಅವಳು ಹೋಗಿ ಎಲೀಯನ ಮಾತಿನ ಹಾಗೆಯೇ ಮಾಡಿದಳು. ಎಲೀಯನಿಗೂ, ಮಹಿಳೆಗೂ, ಆಕೆಯ ಮಗನಿಗೂ ಪ್ರತಿದಿನ ಸಾಕಾಗುವಷ್ಟು ಆಹಾರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:15
13 ತಿಳಿವುಗಳ ಹೋಲಿಕೆ  

ವಿಶ್ವಾಸವಿದ್ದುದರಿಂದಲೇ ಅಬ್ರಹಾಮನು ತಾನು ಪರಿಶೋಧಿತನಾದಾಗ ಇಸಾಕನನ್ನು ಬಲಿಯಾಗಿ ಅರ್ಪಿಸಲು ಮುಂದೆ ಬಂದನು.


ಆಗ ಯೇಸು ತಮ್ಮ ಶಿಷ್ಯರನ್ನು ಕರೆದು, “ಕಾಣಿಕೆ ಪೆಟ್ಟಿಗೆಯಲ್ಲಿ ಹಣ ಹಾಕಿದ ಎಲ್ಲರಿಗಿಂತಲೂ ಈ ವಿಧವೆ ಹೆಚ್ಚಾಗಿ ಅರ್ಪಿಸಿದಳು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ;


ಆಗ ಯೇಸು, “ತಾಯಿ, ನಿನ್ನ ವಿಶ್ವಾಸ ಅಚಲವಾದುದು. ನಿನ್ನ ಕೋರಿಕೆ ನೆರವೇರಲಿ,” ಎಂದರು. ಅದೇ ಕ್ಷಣದಲ್ಲಿ ಆಕೆಯ ಮಗಳು ಗುಣಹೊಂದಿದಳು.


ನೋಹನು ಹಾಗೆಯೇ ಮಾಡಿದನು. ದೇವರ ಆಜ್ಞಾನುಸಾರ ನಡೆದುಕೊಂಡನು.


“ನಿನಗೆ ವಿಶ್ವಾಸವಿದ್ದಲ್ಲಿ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ಹೇಳಲಿಲ್ಲವೇ?” ಎಂದು ಮರು ನುಡಿದರು ಯೇಸು.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಮರುಭೂಮಿಗೆ ಹೊರಟರು. ಹೊರಡುವಾಗ ಯೆಹೋಷಾಫಾಟನು ಎದ್ದು ನಿಂತು, “ಯೆಹೂದ್ಯರೇ, ಜೆರುಸಲೇಮಿನವರೇ, ನನ್ನ ಮಾತನ್ನು ಕೇಳಿರಿ; ಸರ್ವೇಶ್ವರನಲ್ಲಿ ಭರವಸೆ ಇಡಿ, ಆಗ ಸುರಕ್ಷಿತರಾಗುವಿರಿ; ಸರ್ವೇಶ್ವರನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ,” ಎಂದು ಹೇಳಿದನು.


ಅಬ್ರಹಾಮನು ಮುಂಜಾನೆಯೇ ಎದ್ದು ತನ್ನ ಹೇಸರಗತ್ತೆಗೆ ತಡಿಹಾಕಿಸಿ ಹೋಮಬಲಿಗೆ ಬೇಕಾದ ಕಟ್ಟಿಗೆಯನ್ನು ಸಿಗಿದು ಸಿದ್ಧಮಾಡಿಕೊಂಡು ಸೇವಕರಿಬ್ಬರನ್ನು ಹಾಗೂ ತನ್ನ ಮಗ ಇಸಾಕನನ್ನು ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.


ಸರ್ವೇಶ್ವರ ಹೀಗೆಂದು ಹೇಳಿದ ಮೇಲೆ ಅಬ್ರಾಮನು ಹೊರಟನು. ಲೋಟನು ಅವನ ಸಂಗಡವೆ ಹೋದನು. ಆ ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಅಬ್ರಾಮನಿಗೆ ಎಪ್ಪತ್ತೈದು ವರ್ಷಗಳಾಗಿದ್ದವು.


ಇಸ್ರಯೇಲ್ ದೇವರಾದ ಸರ್ವೇಶ್ವರ ನಿನಗೆ, “ನಾನು ನಾಡಿಗೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಕೆಯಲ್ಲಿರುವ ಹಿಟ್ಟು ತೀರುವುದಿಲ್ಲ, ಕುಡಿಕೆಯಲ್ಲಿರುವ ಎಣ್ಣೆ ಮುಗಿದುಹೋಗುವುದಿಲ್ಲ,” ಎಂದು ಹೇಳುತ್ತಾರೆ ಎಂದನು.


ಸರ್ವೇಶ್ವರ ಎಲೀಯನ ಮುಖಾಂತರ ಹೇಳಿದಂತೆ ಮಡಕೆಯಲ್ಲಿದ್ದ ಹಿಟ್ಟು ತೀರಲಿಲ್ಲ; ಕುಡಿಕೆಯಲ್ಲಿದ್ದ ಎಣ್ಣೆ ಮುಗಿದು ಹೋಗಲಿಲ್ಲ.


ಆಕೆ ಹೋಗಿ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ, ಅವರು ಮುಂದಿಟ್ಟ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು