Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:6 - ಕನ್ನಡ ಸತ್ಯವೇದವು C.L. Bible (BSI)

6 ಕಾಗೆಗಳು ಅವನಿಗೆ ಬೆಳಿಗ್ಗೆ ಹಾಗು ಸಂಜೆ ರೊಟ್ಟಿ, ಮಾಂಸ, ಇವುಗಳನ್ನು ತಿನ್ನಲು ತಂದುಕೊಡುತ್ತಿದ್ದವು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕಾಗೆಗಳು ಅವನಿಗೆ ಪ್ರಾತಃಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿ ಮತ್ತು ಮಾಂಸಗಳನ್ನು ತಂದುಕೊಡುತ್ತಿದ್ದವು. ಅವನು ಇವುಗಳನ್ನು ತಿನ್ನುತ್ತಿದ್ದನು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕಾಗೆಗಳು ಅವನಿಗೆ ಪ್ರಾತಃಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿ, ಮಾಂಸ ಇವುಗಳನ್ನು ತಂದುಕೊಡುತ್ತಿದ್ದವು. ಅವನು ಇವುಗಳನ್ನು ತಿನ್ನುತ್ತಿದ್ದನು; ಹಳ್ಳದ ನೀರು ಅವನಿಗೆ ಪಾನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕಾಗೆಗಳು ಪ್ರತಿ ಮುಂಜಾನೆ ಮತ್ತು ಸಂಜೆ ಎಲೀಯನಿಗೆ ರೊಟ್ಟಿ ಮತ್ತು ಮಾಂಸವನ್ನು ತಂದುಕೊಡುತ್ತಿದ್ದವು. ಎಲೀಯನು ಹಳ್ಳದ ನೀರನ್ನು ಕುಡಿಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕಾಗೆಗಳು ಅವನಿಗೆ ಉದಯಕಾಲದಲ್ಲಿ ರೊಟ್ಟಿಯನ್ನೂ, ಮಾಂಸವನ್ನೂ, ಸಂಜೆಯಲ್ಲಿ ರೊಟ್ಟಿಯನ್ನೂ, ಮಾಂಸವನ್ನೂ ತೆಗೆದುಕೊಂಡು ಬಂದವು, ಅವನು ಆ ಹೊಳೆಯ ನೀರನ್ನು ಕುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:6
25 ತಿಳಿವುಗಳ ಹೋಲಿಕೆ  

ಬಳಿಕ ಯೇಸುಸ್ವಾಮಿ, “ನಾನು ನಿಮ್ಮನ್ನು ಬುತ್ತಿ, ಜೋಳಿಗೆ, ಜೋಡು ಒಂದೂ ಇಲ್ಲದೆ ಕಳಿಸಿದಾಗ ನಿಮಗೇನಾದರೂ ಕೊರತೆ ಆಯಿತೇ?” ಎಂದು ಶಿಷ್ಯರನ್ನು ಕೇಳಿದರು. ಅದಕ್ಕೆ ಅವರು, “ಇಲ್ಲ,” ಎಂದು ಉತ್ತರಕೊಟ್ಟರು.


ಯೇಸು ಅವರನ್ನು ನಿಟ್ಟಿಸಿ ನೋಡುತ್ತಾ, “ಮನುಷ್ಯರಿಗಿದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದರು.


ಆಗ ಅರಸ ಚಿದ್ಕೀಯನು ಅಂತೆಯೆ ಅಪ್ಪಣೆಕೊಡಲು, ಯೆರೆಮೀಯನನ್ನು ರಾಜ್ಯದ ಕಾರಾಗೃಹದ ಅಂಗಳಕ್ಕೆ ಸ್ಥಳಾಂತರಿಸಲಾಯಿತು. ರೊಟ್ಟಿ ಮಾರುಕಟ್ಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದುಕೊಡುತ್ತಿದ್ದರು. ನಗರದ ರೊಟ್ಟಿಯೆಲ್ಲ ತೀರುವ ತನಕ ಹಾಗೆ ಮಾಡುತ್ತಿದ್ದರು. ಯೆರೆಮೀಯನು ರಾಜ್ಯದ ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.


ಅಂಥವನಿಗೆ ಗಿರಿದುರ್ಗವೇ ಆಶ್ರಯ, ಅನ್ನ ಆಹಾರ ಉಚಿತ, ನೀರುನಿಡಿ ನಿಸ್ಸಂದೇಹ.


ಮಾನನಷ್ಟವಿರದು ಕಷ್ಟಕಾಲದಲಿ I ಕುಂದುಕೊರತೆಯಿರದು ಬರಗಾಲದಲಿ II


ದೇವರ ವಾಗ್ದಾನ ಮತ್ತು ಶಪಥ ಇವೆರಡೂ ಅಚಲವಾದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಮೋಸಮಾಡುವವರೇ ಅಲ್ಲ. ಇದರಿಂದಾಗಿ, ದೇವರ ಆಶ್ರಯಕ್ಕಾಗಿ ಧಾವಿಸಿಬಂದಿರುವ ನಾವು, ನಮ್ಮ ಮುಂದಿರಿಸಿರುವ ನಂಬಿಕೆ ನಿರೀಕ್ಷೆಯಲ್ಲಿ ಸ್ಥಿರವಾಗಿ ನಿಲ್ಲಲು ಬಲವಾದ ಪ್ರೋತ್ಸಾಹ ದೊರೆತಂತಾಯಿತು.


ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು I ಸುರಕ್ಷಿತನಾಗಿ ಬಾಳು ಸಿರಿನಾಡಿನಲ್ಲಿದ್ದು II


ಆಗ ಅವನು, “ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು ಕ್ರೂರವಾದದ್ದರಿಂದ ಮಧುರವಾದದ್ದು ಸಿಕ್ಕಿತು” ಎಂದು ಹೇಳಿದನು. ಮೂರು ದಿನಗಳಾದರೂ ಅವರು ಅದನ್ನು ಬಿಡಿಸಲಾರದೆ ಹೋದರು.


ಸರ್ವೇಶ್ವರ ಅವನಿಗೆ, “ಸರ್ವೇಶ್ವರನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನೇ ನೋಡುವೆ” ಎಂದರು.


ನೋಡು, ನಿನ್ನ ಕೈಗೆ ಹಾಕಿದ್ದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸಿದ್ದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸ್ಸಿಲ್ಲದಿದ್ದರೆ ಬರಬೇಕಾಗಿಲ್ಲ. ಇಗೋ ದೇಶವೆಲ್ಲ ನಿನ್ನ ಕಣ್ಣೆದುರಿಗಿದೆ. ನಿನಗೆ ಯಾವ ಕಡೆಗೆ ಹೋಗುವುದು ಸರಿಯೆಂದು, ಒಳ್ಳೆಯದೆಂದು ತೋರುತ್ತದೋ ಆ ಕಡೆಗೆ ಹೋಗು,” ಎಂದು ಹೇಳಿದನು.


ಇಸ್ರಯೇಲರು ಜನವಾಸವಿರುವ ಪ್ರದೇಶಕ್ಕೆ ಬರುವ ತನಕ ಅಂದರೆ ಕಾನಾನ್ ನಾಡಿನ ಮೇರೆಯನ್ನು ಸೇರುವ ತನಕ ನಾಲ್ವತ್ತು ವರ್ಷ ಮನ್ನವನ್ನೇ ಊಟ ಮಾಡುತ್ತಿದ್ದರು.


ಸರ್ವೇಶ್ವರನ ಅಪ್ಪಣೆಯಂತೆ ಜೋರ್ಡನಿನ ಪೂರ್ವಕ್ಕಿರುವ ಕೆರೀತ್ ಹಳ್ಳದಲ್ಲಿ ಅವನು ವಾಸಿಸಿದನು.


ಕೆಲವು ದಿವಸಗಳಾದ ನಂತರ ನಾಡಿನಲ್ಲಿ ಮಳೆಯಿಲ್ಲದ್ದರಿಂದ ಹಳ್ಳವು ಬತ್ತಿಹೋಯಿತು.


ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನೂ ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.


ಎಲೀಯನು ಎದ್ದು ಸುತ್ತಲೂ ನೋಡಿದನು. ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ತನ್ನ ತಲೆಯ ಹತ್ತಿರ ಇದ್ದುವು. ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ಪುನಃ ಮಲಗಿದನು.


ಅವನು ಎದ್ದು, ತಿಂದು, ಕುಡಿದು ಅದರ ಬಲದಿಂದ ನಾಲ್ವತ್ತು ದಿವಸ ಹಗಲಿರುಳು ಪ್ರಯಾಣ ಮಾಡಿದನು;


ಪ್ರಭುವಾದರೋ ಕಟಾಕ್ಷಿಸುವನು ತನಗಂಜಿ ನಡೆದವರನು I ಲಕ್ಷಿಸುವನು ತನ್ನ ಕೃಪೆಯನು ನಿರೀಕ್ಷಿಸುವವರನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು