Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:1 - ಕನ್ನಡ ಸತ್ಯವೇದವು C.L. Bible (BSI)

1 ಅನೇಕ ದಿವಸಗಳಾದನಂತರ ಎಲೀಯನಿಗೆ ಸರ್ವೇಶ್ವರನ ವಾಣಿ ಉಂಟಾಯಿತು. ಬರಗಾಲದ ಮೂರನೆಯವರ್ಷದಲ್ಲಿ ಸರ್ವೇಶ್ವರ ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು; ನಾನು ನಾಡಿಗೆ ಮಳೆಕೊಡುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನೇಕ ದಿನಗಳಾದ ನಂತರ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. ಬರಗಾಲದ ಮೂರನೆಯ ವರ್ಷದಲ್ಲಿ ಯೆಹೋವನು ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು. ನಾನು ದೇಶಕ್ಕೆ ಮಳೆ ಕೊಡುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅನೇಕ ದಿವಸಗಳಾದನಂತರ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. ಬರಗಾಲದ ಮೂರನೆಯ ವರುಷದಲ್ಲಿ ಆತನು ಅವನಿಗೆ - ನೀನು ಹೋಗಿ ಅಹಾಬನನ್ನು ಕಾಣು; ನಾನು ದೇಶಕ್ಕೆ ಮಳೆ ಕೊಡುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬರಗಾಲದ ಮೂರನೆ ವರ್ಷದಲ್ಲಿ ಯೆಹೋವನು ಎಲೀಯನಿಗೆ, “ಹೋಗಿ, ರಾಜನಾದ ಅಹಾಬನನ್ನು ಭೇಟಿಮಾಡು. ನಾನು ಬೇಗ ಮಳೆಯನ್ನು ಸುರಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅನೇಕ ದಿವಸಗಳಾದ ತರುವಾಯ, ಮೂರನೆಯ ವರ್ಷದಲ್ಲಿ, ಯೆಹೋವ ದೇವರ ವಾಕ್ಯವು ಎಲೀಯನಿಗೆ ಬಂದಿತು, “ನೀನು ಹೋಗಿ ಅಹಾಬನಿಗೆ ನಿನ್ನನ್ನು ಪ್ರಕಟಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:1
18 ತಿಳಿವುಗಳ ಹೋಲಿಕೆ  

ಹಿಂದೆ ನಡೆದ ಒಂದು ಸಂಗತಿಯನ್ನು ಕೇಳಿ: ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಕ್ಷಾಮ ಬಂದೊದಗಿತ್ತು. ಆಗ ಇಸ್ರಯೇಲ್ ನಾಡಿನಲ್ಲಿ ಎಷ್ಟೋ ಮಂದಿ ವಿಧವೆಯರಿದ್ದರು.


ಎಲೀಯನು ನಮ್ಮಂಥ ಸಾಧಾರಣ ಮನುಷ್ಯ. ಆದರೂ ಅವನು ಮಳೆ ಬಾರದಿರಲೆಂದು ಭಕ್ತಿಯಿಂದ ಪ್ರಾರ್ಥಿಸಿದ್ದರಿಂದ ಮೂರು ವರ್ಷ ಆರು ತಿಂಗಳವರೆಗೂ ಮಳೆ ಬೀಳಲಿಲ್ಲ.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.


ಸರ್ವೇಶ್ವರ ಆಕಾಶದಲ್ಲಿರುವ ತಮ್ಮ ಜಲನಿಧಿಯನ್ನು ತೆರೆದು ನಿಮ್ಮ ನಾಡಿನ ಮೇಲೆ, ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲ ವ್ಯವಸಾಯವನ್ನೂ ಫಲಭರಿತವಾಗಿ ಮಾಡುವರು. “ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ.


ಎಲೀಯನು ಅಹಾಬನನ್ನು ನೋಡುವುದಕ್ಕೆ ಹೊರಟನು. ಆಗ ಸಮಾರಿಯದಲ್ಲಿ ಕ್ಷಾಮ ಬಹಳ ಭೀಕರವಾಗಿತ್ತು.


“ಸಿಯೋನಿನ ಜನರೇ, ಹರ್ಷಿಸಿರಿ; ಸ್ವಾಮಿ ದೇವರಾದ ಸರ್ವೇಶ್ವರ ನಿಮಗೆ ಮಾಡಿದ ಉಪಕಾರಗಳಿಗಾಗಿ ಆನಂದಿಸಿರಿ. ನಿಮಗೆ ಅವರು ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು; ಮುಂಗಾರು ಹಿಂಗಾರು ಮಳೆಗಳನ್ನು ಸುರಿಸುವರು.


ನಾನು ಮುಂಗಾರು ಹಿಂಗಾರು ಮಳೆಗಳನ್ನು ಕಾಲಕಾಲಕ್ಕೆ ಸರಿಯಾಗಿ ಬರಮಾಡುವೆನು. ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವುವು. ತೋಟದ ಮರಗಳು ಹೇರಳವಾದ ಫಲಕೊಡುವುವು.


ತಾವು ಪ್ರವಾದನೆ ಮಾಡುವ ದಿನಗಳಲ್ಲಿ ಮಳೆ ಬಾರದಂತೆ ಆಕಾಶವನ್ನು ಮುಚ್ಚಿಬಿಡುವ ಸಾಮರ್ಥ್ಯ ಇವರಿಗಿದೆ. ಇದಲ್ಲದೆ, ಇವರಿಗೆ ಇಷ್ಟಬಂದಾಗಲೆಲ್ಲಾ ನೀರನ್ನು ರಕ್ತವನ್ನಾಗಿ ಪರಿವರ್ತಿಸುವ ಹಾಗು ಸಕಲ ವಿಧವಾದ ಉಪದ್ರವಗಳಿಂದ ಜಗತ್ತನ್ನು ಪೀಡಿಸುವ ಅಧಿಕಾರ ಇವರಿಗೆ ಇರುತ್ತದೆ.


“ಸುಗ್ಗಿಗೆ ಮೂರು ತಿಂಗಳಿರುವಾಗಲೂ ಮಳೆಯನ್ನು ತಡೆದವನು ನಾನೇ. ಒಂದೂರಿಗೆ ಮಳೆಯಾಗುವಂತೆಯೂ ಮತ್ತೊಂದೂರಿಗೆ ಮಳೆಯಾಗದಂತೆಯೂ ಮಾಡಿದವನು ನಾನೇ. ಒಂದು ಹೊಲಕ್ಕೆ ಮಳೆಯಾಗುವಂತೆ, ಮತ್ತೊಂದು ಹೊಲ ಮಳೆಯಿಲ್ಲದೆ ಬಾಡಿಹೋಗುವಂತೆ ಮಾಡಿದವನು ನಾನೇ.


ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ.


ಆಕಾಶದಲ್ಲಿ ನೀರು ಭೋರ್ಗರೆಯುವಂತೆ ಭುವಿಯ ಕಟ್ಟಕಡೆಯಿಂದ ಮೋಡಗಳು ಏರುವಂತೆ ಮಳೆಗಾಗಿ ಮಿಂಚು ಹೊಳೆಯುವಂತೆ ತಮ್ಮ ಭಂಡಾರದಿಂದ ಗಾಳಿ ಬೀಸುವಂತೆ - ಮಾಡುತ್ತದೆ ಸರ್ವೇಶ್ವರನಾ ಗರ್ಜನೆ.


ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.


ಆಕೆ ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ ಆಕೆಯ ಮನೆಯವರೂ ಎಲೀಯನೂ ಅದನ್ನು ಅನೇಕ ದಿವಸಗಳವರೆಗೆ ಊಟಮಾಡಿದರು.


ಕೆಲವು ದಿವಸಗಳಾದ ನಂತರ ನಾಡಿನಲ್ಲಿ ಮಳೆಯಿಲ್ಲದ್ದರಿಂದ ಹಳ್ಳವು ಬತ್ತಿಹೋಯಿತು.


ಆಲಯದ ಹೊರ ಅಂಗಳವನ್ನು ಅಳತೆಮಾಡಬೇಡ; ಅದನ್ನು ಬಿಟ್ಟುಬಿಡು. ಅದನ್ನು ಜನರಿಗೆ ಬಿಟ್ಟುಕೊಡಲಾಗಿದೆ. ಅವರು ಪವಿತ್ರನಗರವನ್ನು ನಲವತ್ತೆರಡು ತಿಂಗಳವರೆಗೆ ತುಳಿದಾಡುವರು.


ಪರಲೋಕದಲ್ಲಿರುವ ನೀವು ಆಲಿಸಿ ನಿಮ್ಮ ಭಕ್ತರೂ ಪ್ರಜೆಗಳೂ ಆದ ಇಸ್ರಯೇಲರ ಪಾಪಗಳನ್ನು ಕ್ಷಮಿಸಿರಿ; ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿರಿ; ನಿಮ್ಮ ಪ್ರಜೆಗೆ ಸ್ವಂತ ಸೊತ್ತಾಗಿ ಕೊಟ್ಟ ನಾಡಿಗೆ ಮಳೆಯನ್ನು ಅನುಗ್ರಹಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು