Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:18 - ಕನ್ನಡ ಸತ್ಯವೇದವು C.L. Bible (BSI)

18 ಅದಕ್ಕೆ ಎಲೀಯನು, “ಅವರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ; ಸರ್ವೇಶ್ವರನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ನಿನ್ನ ಮನೆಯವರೂ ಅದಕ್ಕೆ ಕಾರಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದಕ್ಕೆ ಅವನು, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ. ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ಮತ್ತು ನಿನ್ನ ಮನೆಯವರೂ ಅದಕ್ಕೆ ಕಾರಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅದಕ್ಕೆ ಅವನು - ಅವರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ; ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ನಿನ್ನ ಮನೆಯವರೂ ಅದಕ್ಕೆ ಕಾರಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಎಲೀಯನು, “ಇಸ್ರೇಲಿನ ತೊಂದರೆಗೆ ನಾನು ಕಾರಣನಲ್ಲ. ನೀನು ಮತ್ತು ನಿನ್ನ ತಂದೆಯ ಕುಟುಂಬವು ಈ ತೊಂದರೆಗಳಿಗೆಲ್ಲ ಕಾರಣ. ಯೆಹೋವನ ಆಜ್ಞೆಗಳಿಗೆ ವಿಧೇಯನಾಗದೆ ಸುಳ್ಳುದೇವರುಗಳನ್ನು ಅನುಸರಿಸತೊಡಗಿದ್ದರಿಂದ ಆ ತೊಂದರೆಗಳಿಗೆಲ್ಲಾ ನೀನೇ ಕಾರಣನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅದಕ್ಕೆ ಅವನು, “ನಾನು ಇಸ್ರಾಯೇಲನ್ನು ಕಳವಳಪಡಿಸುವುದಿಲ್ಲ. ಆದರೆ ನೀನೂ, ನಿನ್ನ ತಂದೆಯ ಕುಟುಂಬದವರೂ ಯೆಹೋವ ದೇವರ ಆಜ್ಞೆಯನ್ನು ತೊರೆದುಬಿಟ್ಟು, ಬಾಳನನ್ನು ಹಿಂಬಾಲಿಸುವ ನೀವೇ ಕಳವಳಪಡಿಸುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:18
23 ತಿಳಿವುಗಳ ಹೋಲಿಕೆ  

ಅವನು ಆಸನನ್ನು ಭೇಟಿಯಾಗಲು ಬಂದು, ಅವನಿಗೆ, “ಆಸ ರಾಜನೇ, ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿ; ನೀವು ಸರ್ವೇಶ್ವರನನ್ನು ಹೊಂದಿಕೊಂಡಿರುವ ತನಕ ಅವರೂ ನಿಮ್ಮೊಂದಿಗಿರುವರು; ನೀವು ಅವರನ್ನು ಅರಸಿದರೆ ನಿಮಗೆ ಸಿಕ್ಕುವರು. ಅವರನ್ನು ಬಿಟ್ಟರೆ ಅವರೂ ನಿಮ್ಮನ್ನು ಬಿಟ್ಟುಬಿಡುವರು.


ಆಗ ಅವರಿಗೆ, ‘ಈ ನಾಡಿನವರು ತಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಬರಮಾಡಿದ ದೇವರಾದ ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಆರಾಧಿಸಿದ್ದರಿಂದಲೇ ಸರ್ವೇಶ್ವರ ಈ ಎಲ್ಲಾ ಆಪತ್ತು-ವಿಪತ್ತುಗಳನ್ನು ಬರಮಾಡಿದ್ದಾರೆ’ ಎಂಬ ಉತ್ತರಸಿಕ್ಕುವುದು,” ಎಂದರು.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವುವು. ನಿನಗೆ ನನ್ನ ಭಯವಿಲ್ಲದೆ ನಿನ್ನ ದೇವರಾದ ಸರ್ವೇಶ್ವರನಾದ ನನ್ನನ್ನು ತೊರೆದುಬಿಟ್ಟದ್ದು ನಿನಗೆ ಕೆಟ್ಟದ್ದಾಗಿಯೂ ಕಹಿಯಾಗಿಯೂ ಪರಿಣಮಿಸುವುದು. ಇದನ್ನು ಚೆನ್ನಾಗಿ ಗ್ರಹಿಸಿಕೊ, ಕಣ್ಣಾರೆ ನೋಡು. ಇದು ಸರ್ವಶಕ್ತನೂ, ಸ್ವಾಮಿ ಸರ್ವೇಶ್ವರನೂ ಆದ ನನ್ನ ನುಡಿ.”


ಇವನು ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗದಲ್ಲಿ ನಡೆದದ್ದು ಸಾಲದೆಂದು, ಸಿದೋನ್ಯರ ಅರಸ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆ ಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.


ಹೆಂಡತಿ ಈಜೆಬೆಲಳಿಂದ ಪ್ರಚೋದಿತನಾಗಿ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ಅಥವಾ, ನಾನು ನ್ಯಾಯಸಭೆಯ ಮುಂದೆ ನಿಂತಿದ್ದಾಗ ನನ್ನಲ್ಲಿ ಯಾವ ಅಪರಾಧಗಳು ಕಂಡುಬಂದವೆಂದು, ಈ ಜನರೇ ಹೇಳಲಿ.


ಇವರು ಈಗ ನನ್ನ ಮೇಲೆ ಹೊರಿಸುವ ಆಪಾದನೆಗಳನ್ನು ತಮ್ಮ ಮುಂದೆ ಸಮರ್ಥಿಸಲು ಇವರಿಂದಾಗದು.


ಏಕೆಂದರೆ ಆತನು, ‘ನಿನ್ನ ಸಹೋದರನ ಧರ್ಮಪತ್ನಿಯನ್ನು ನೀನು ಇಟ್ಟುಕೊಂಡಿರುವುದು ಅಕ್ರಮ,” ಎಂದು ಹೆರೋದನಿಗೆ ಹೇಳುತ್ತಿದ್ದನು.


ಇಗೋ, ಅವರ ಕಠಿಣ ಹೃದಯಕ್ಕೆ ವಿರುದ್ಧ ನಿನ್ನ ಹೃದಯವನ್ನು ಕಠಿಣಪಡಿಸಿದ್ದೇನೆ; ಅವರ ಹಟಮಾರಿತನಕ್ಕೆ ಪ್ರತಿಯಾಗಿ ನಿನ್ನನ್ನು ಹಟವಾದಿಯನ್ನಾಗಿ ಮಾಡಿದ್ದೇನೆ.


“ನನ್ನ ಜನರು ಇಬ್ಬಗೆಯ ಅಪರಾಧಗಳನ್ನು ಎಸಗಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನೇ ತೊರೆದುಬಿಟ್ಟಿದ್ದಾರೆ! ತೊಟ್ಟಿಗಳನ್ನು, ನೀರುನಿಲ್ಲದ ಬಿರುಕು ತೊಟ್ಟಿಗಳನ್ನು ತಮಗಾಗಿ ಕೊರೆದುಕೊಂಡಿದ್ದಾರೆ!”


ದುರ್ಜನರಿಗೆ ಧಿಕ್ಕಾರ! ಅವರ ಕೃತ್ಯಗಳಿಗೆ ಕಹಿಫಲ ದೊರಕುತ್ತದೆ.


ಅಮಂಗಳವು ಪಾಪಿಗಳನ್ನು ಹಿಂಬಾಲಿಸುವುದು; ಮಂಗಳವು ಸತ್ಪುರುಷರಿಗೆ ಸಿಗುವ ಪ್ರತಿಫಲವು.


ಧರ್ಮನಿರತನಿಗೆ ದೊರಕುವುದು ಜೀವ; ಅಧರ್ಮಾಸಕ್ತನಿಗೆ ಸಿಗುವುದು ಮರಣ.


ಸರ್ವೇಶ್ವರ ಮೋಶೆಗೆ, “ನೀನು ಮೃತನಾಗಿ ಪಿತೃಗಳಲ್ಲಿಗೆ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು, ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ, ದೇವದ್ರೋಹಿಗಳಾಗಿ ತಾವು ಹೋಗುವ ನಾಡಿನಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


“ನನ್ನ ತಂದೆ ನಾಡಿಗೆ ನಷ್ಟವನ್ನುಂಟುಮಾಡಿದ್ದಾರೆ; ನಾನು ಸ್ವಲ್ಪ ಜೇನುತುಪ್ಪವನ್ನು ತಿಂದುದರಿಂದ ನನ್ನ ಕಣ್ಣುಗಳು ಹೇಗೆ ಕಳೆಗೊಂಡಿರುತ್ತವೆ ನೋಡು;


ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆ ಬಹಳ ಅಸಹ್ಯವಾಗಿತ್ತು.


ಧರ್ಮಶಾಸ್ತ್ರವನ್ನು ಕೈಗೊಳ್ಳದವರು ದುಷ್ಟರನ್ನು ಹೊಗಳುವರು; ಕೈಗೊಳ್ಳುವವರು ಅವರ ವಿರುದ್ಧ ಹೋರಾಡುವರು.


“ಸಮಾರ್ಯದ ಪ್ರವಾದಿಗಳ ಅಸಹ್ಯ ಕಾರ್ಯಗಳನ್ನು ನೋಡಿರುವೆನು ಬಾಳ್‍ದೇವತೆಯ ಆವೇಶದಿಂದ ಪ್ರವಾದಿಸಿದರವರು ಹೀಗೆ ಇಸ್ರಯೇಲೆಂಬ ನನ್ನ ಜನರನ್ನು ಮಾರ್ಗ ತಪ್ಪಿಸಿದರು.


ಈ ಪದಾಧಿಕಾರಿಗಳು ಅರಸನ ಬಳಿಗೆ ಬಂದು, “ಒಡೆಯಾ, ಈ ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇವನು ನಗರದಲ್ಲಿರುವ ಸೈನಿಕರಿಗೂ ಜನರೆಲ್ಲರಿಗೂ ಇಂಥ ಭವಿಷ್ಯವನ್ನು ನುಡಿಯುತ್ತಾ ಅವರು ಎದೆಗುಂದುವಂತೆ ಮಾಡುತ್ತಿದ್ದಾನೆ. ಅವನು ಹಾರೈಸುವುದು ಜನರ ಕ್ಷೇಮವನ್ನಲ್ಲ ಹಾನಿಯನ್ನೇ,” ಎಂದು ದೂರಿತ್ತರು.


ಬಾಳ್ ದೇವರಿಗಾಗಿ ಸಮಾರಿಯದಲ್ಲಿ ಒಂದು ಗುಡಿ ಕಟ್ಟಿಸಿ, ಅದರಲ್ಲಿ ಬಲಿಪೀಠವನ್ನು ಕಟ್ಟಿಸಿದನು;


ಯೆಹೂದ್ಯರನ್ನು ಅಧರ್ಮಕ್ಕೆ ಪ್ರಚೋದಿಸಿ ಸರ್ವೇಶ್ವರನಿಗೆ ದ್ರೋಹಮಾಡಿದ ಇಸ್ರಯೇಲ ಅರಸ ಅಹಾಜನ ನಿಮಿತ್ತ ಸರ್ವೇಶ್ವರ ಯೆಹೂದ್ಯರನ್ನು ಈ ಪ್ರಕಾರ ತಗ್ಗಿಸಿದ್ದರು.


ದುರುಳನನ್ನು ಅವನ ದ್ರೋಹಗಳೆ ಆಕ್ರಮಿಸುತ್ತವೆ; ಅವನ ಪಾಪಪಾಶಗಳೇ ಅವನನ್ನು ಬಂಧಿಸುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು