Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:27 - ಕನ್ನಡ ಸತ್ಯವೇದವು C.L. Bible (BSI)

27 ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿದನು: “ಗಟ್ಟಿಯಾಗಿ ಕೂಗಿರಿ; ಅವನು ದೇವರಲ್ಲವೆ? ಈಗ ಒಂದು ವೇಳೆ ಅವನು ಧ್ಯಾನದಲ್ಲಿ ಇರಬಹುದು; ಇಲ್ಲವೇ, ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು; ಇಲ್ಲದಿದ್ದರೆ, ನಿದ್ರೆಮಾಡುತ್ತಿರಬೇಕು; ಎಚ್ಚರವಾಗಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿ, “ಗಟ್ಟಿಯಾಗಿ ಕೂಗಿರಿ, ಅವನು ದೇವರಾಗಿರುತ್ತಾನಲ್ಲಾ. ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು, ಇಲ್ಲವೇ ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯಮಾಡಿ - ಗಟ್ಟಿಯಾಗಿ ಕೂಗಿರಿ; ಅವನು ದೇವರಾಗಿರುತ್ತಾನಲ್ಲಾ! ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು; ಇಲ್ಲವೆ ಯಾವದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮಧ್ಯಾಹ್ನವಾದಾಗ ಎಲೀಯನು ಅವರನ್ನು ಅಪಹಾಸ್ಯ ಮಾಡಲಾರಂಭಿಸಿದನು. ಎಲೀಯನು, “ಬಾಳನು ನಿಜವಾದ ದೇವರಾಗಿದ್ದರೆ, ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ! ಬಹುಶಃ ಅವನು ಯೋಚನಾನಿರತನಾಗಿರಬಹುದು! ಅಥವಾ ಕಾರ್ಯನಿರತನಾಗಿರಬಹುದು! ಅಥವಾ ಸಂಚಾರನಿರತನಾಗಿರಬಹುದು! ಅಥವಾ ನಿದ್ರಾಮಗ್ನನಾಗಿರಬಹುದು! ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ, ಅವನನ್ನು ಎಚ್ಚರಗೊಳಿಸಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಮಧ್ಯಾಹ್ನದಲ್ಲಿ ಎಲೀಯನು ಅವರನ್ನು ಗೇಲಿಮಾಡಿ ಅವರಿಗೆ, “ದೊಡ್ಡ ಶಬ್ದದಿಂದ ಕೂಗಿರಿ, ಏಕೆಂದರೆ ಅವನು ಒಬ್ಬ ದೇವರಲ್ಲವೇ? ಒಂದು ವೇಳೆ ಅವನು ಧ್ಯಾನದಲ್ಲಿರಬಹುದು; ಇಲ್ಲವೆ ಯಾವುದೋ ಕೆಲಸದಲ್ಲಿರಬಹುದು; ಇಲ್ಲವೆ ಪ್ರಯಾಣದಲ್ಲಿದ್ದಾನೆ; ಇಲ್ಲವೆ ಅವನು ನಿದ್ದೆಯಲ್ಲಿದ್ದಾನೆ; ಈಗ ಅವನು ಎಚ್ಚರವಾಗಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:27
19 ತಿಳಿವುಗಳ ಹೋಲಿಕೆ  

ತಿಳಿಸಿ ನಮಗೆ ಮುಂದೆ ನಡೆಯಬೇಕಾದವುಗಳನು ನಂಬುವೆವು ಆಗ ನೀವು ದೇವರುಗಳೆಂಬುದನು, ಪ್ರದರ್ಶಿಸಿ ಒಳಿತನ್ನಾಗಲಿ ಕೆಡುಕನ್ನಾಗಲಿ ಆಗ ನೋಡುವೆವು ಒಟ್ಟಿಗೆ ನಿಬ್ಬೆರಗಾಗಿ !


ಯೇಸು ಮೂರನೆಯ ಸಾರಿ ಅವರ ಬಳಿಗೆ ಬಂದು, “ನೀವು ಇನ್ನೂ ನಿದ್ರಿಸಿ ವಿಶ್ರಮಿಸುತ್ತಿರುವಿರಾ? ಸಾಕು, ಸಮಯವು ಸಮೀಪಿಸಿತು;


ಸಂಪ್ರದಾಯದ ನೆವದಲ್ಲಿ ದೇವರ ಆಜ್ಞೆಗಳನ್ನು ನೀವು ಜಾಣ್ಮೆಯಿಂದ ಬದಿಗೊತ್ತಿರುವುದು ಬಲು ಚೆನ್ನಾಗಿದೆ!


ಅದಾದ ಬಳಿಕ ಶಿಷ್ಯರನ್ನು ಸಮೀಪಿಸಿ, “ನೀವು ಇನ್ನೂ ನಿದ್ರಿಸಿ ವಿಶ್ರಮಿಸುತ್ತಾ ಇರುವಿರೋ? ಸಾಕು, ಸಮಯ ಸಮೀಪಿಸಿಬಿಟ್ಟಿತು. ನರಪುತ್ರನು ದುರ್ಜನರ ಕೈವಶವಾಗಲಿದ್ದಾನೆ.


“ಇಸ್ರಯೇಲ್ ವಂಶದವರೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಹೋಗಿರಿ, ನಿಮ್ಮ ವಿಗ್ರಹಗಳನ್ನು ಪೂಜಿಸಿರಿ; ಮುಂದಕ್ಕಾದರು ನನ್ನ ಮಾತನ್ನು ಕೇಳಿಯೇ ಕೇಳುವಿರಿ; ಇನ್ನು ಮೇಲಾದರು ನನ್ನ ಪರಿಶುದ್ಧನಾಮವನ್ನು ನಿಮ್ಮ ಬಲಿಗಳಿಂದ ಹಾಗೂ ವಿಗ್ರಹಗಳಿಂದ ನೀವು ಅಪಕೀರ್ತಿಗೆ ಒಳಪಡಿಸಲಾರಿರಿ.


ಇಗೋ, ಇಸ್ರಯೇಲನು ಕಾಯುವಾತನು I ನಿದ್ರಿಸಲಾರನು, ತೂಕಡಿಸಲಾರನು II


ಪ್ರಭೂ, ಎದ್ದೇಳು, ನಿದ್ರಿಸಬೇಡ I ನಮ್ಮನು ಎಂದೆಂದಿಗೂ ತೊರೆಯಬೇಡ II


ನೀವೇ ಹೋಗಿ ಕಾರ್ಯವನ್ನು ನಿರ್ವಹಿಸಿರಿ. ಧೈರ್ಯದಿಂದ ಯುದ್ಧಮಾಡಿ. ಹಾಗೆ ಮಾಡದಿದ್ದರೆ ದೇವರು ಶತ್ರುಗಳಿಂದ ನಿಮ್ಮನ್ನು ಅಪಜಯಗೊಳಿಸುವರು. ಜಯಾಪಜಯಗಳನ್ನು ನೀಡಲು ಅವರು ಶಕ್ತರು ಆಗಿರುತ್ತಾರಲ್ಲವೆ?” ಎಂದನು.


ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ, ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬಾರದೋ?” ಎಂದು ಕೇಳಿದನು. ಅವನು, “ಹೋಗಬಹುದು, ಕೃತಾರ್ಥರಾಗಿ ಬರುವಿರಿ; ಸರ್ವೇಶ್ವರ ಪಟ್ಟಣವನ್ನು ಅರಸರ ಕೈಗೆ ಒಪ್ಪಿಸುವರು,” ಎಂದು ಹೇಳೀದನು.


ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?


ಅಂತೆಯೇ ತರಲಾದ ಹೋರಿಗಳಲ್ಲಿ ಒಂದನ್ನು ಅವರು ತೆಗೆದುಕೊಂಡು ಸಿದ್ಧಪಡಿಸಿದರು. ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ, ನಮಗೆ ಕಿವಿಗೊಡು,” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರು. ಆದರೆ ಯಾವ ವಾಣಿಯೂ ಕೇಳಿಸಲಿಲ್ಲ; ಅವರು ಪೀಠದ ಸುತ್ತಲೂ ಕುಣಿದಾಡಿದರು. ಆದರೂ ಯಾರೂ ಉತ್ತರಕೊಡಲಿಲ್ಲ.


ಅವರು ಗಟ್ಟಿಯಾಗಿ ಕೂಗಿ ತಮ್ಮ ಪದ್ಧತಿಯ ಪ್ರಕಾರ ಈಟಿಕತ್ತಿಗಳಿಂದ ರಕ್ತಸೋರುವಷ್ಟು ಗಾಯಮಾಡಿಕೊಂಡರು.


ಎದೆಯ ತಾಪ ಹೆಚ್ಚಿತು, ಚಿಂತೆ ಕಾವೇರಿತು I ಆಗತಾನೆ ಬಾಯ್ತೆರೆದೆ ನಾನಿಂತೆಂದು: II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು