Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:37 - ಕನ್ನಡ ಸತ್ಯವೇದವು C.L. Bible (BSI)

37 ನಮಗೆ ಕಿವಿಗೊಡಿ; ಸರ್ವೇಶ್ವರಾ ನಮಗೆ ಕಿವಿಗೊಡಿ; ಸರ್ವೇಶ್ವರನಾದ ನೀವೊಬ್ಬರೇ ದೇವರು ಹಾಗು ಈ ಜನರ ಮನಸ್ಸನ್ನು ನಿಮ್ಮಕಡೆಗೆ ತಿರುಗಿಸಿಕೊಳ್ಳುವವರು ಆಗಿರುತ್ತೀರಿ ಎಂಬುದನ್ನು ಇವರಿಗೆ ತಿಳಿಯಪಡಿಸಿ,” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಕಿವಿಗೊಡು, ಯೆಹೋವನೇ ಕಿವಿಗೊಡು, ಯೆಹೋವನಾದ ನೀನೊಬ್ಬನೇ ದೇವರೂ! ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ನೀನೇ ಆಗಿರುತ್ತೀ ಎಂಬುದನ್ನು ಇವರಿಗೆ ತಿಳಿಯಪಡಿಸು” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಕಿವಿಗೊಡು; ಯೆಹೋವನೇ, ಕಿವಿಗೊಡು; ಯೆಹೋವನಾದ ನೀನೊಬ್ಬನೇ ದೇವರೂ ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ಆಗಿರುತ್ತೀ ಎಂಬದನ್ನು ಇವರಿಗೆ ತಿಳಿಯಪಡಿಸು ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ಯೆಹೋವನೇ, ನೀನು ದೇವರೆಂಬುದನ್ನು ಈ ಜನರಿಗೆಲ್ಲ ತೋರಿಸು. ಈ ಜನರನ್ನೆಲ್ಲ ಮತ್ತೆ ನೀನು ನಿನ್ನ ಬಳಿಗೆ ತರುತ್ತಿರುವೆ ಎಂಬುದನ್ನೂ ಈ ಜನರು ತಿಳಿದುಕೊಳ್ಳಲಿ” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ನೀವು ದೇವರಾದ ಯೆಹೋವ ದೇವರೆಂದೂ, ನೀವು ಅವರ ಹೃದಯವನ್ನು ತಿರುಗಿಸಿದ್ದೀರೆಂದೂ ಈ ಜನರು ತಿಳಿಯುವ ಹಾಗೆ ನನಗೆ ಉತ್ತರಕೊಡಿರಿ. ಯೆಹೋವ ದೇವರೇ, ನನಗೆ ಉತ್ತರಕೊಡಿರಿ” ಎಂದು ಬೇಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:37
22 ತಿಳಿವುಗಳ ಹೋಲಿಕೆ  

ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಅನಂತರ ನಾನು ಸರ್ವೇಶ್ವರನ ಹೆಸರು ಹೇಳಿ ಪ್ರಾರ್ಥಿಸುವೆನು. ಅವರಿಬ್ಬರಲ್ಲಿ ಯಾರು ಆಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದು ನಿಶ್ಚಯಿಸೋಣ,” ಎಂದನು. ಜನರೆಲ್ಲರು, “ಸರಿ, ನೀನು ಹೇಳಿದಂತೆಯೇ ಆಗಲಿ,” ಎಂದು ಉತ್ತರಕೊಟ್ಟರು.


ಆದರೂ, ತನ್ನ ಗೆಳೆಯ ಇವನು ಎಂದು ಎದ್ದುಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದುಬಂದು ಕೇಳಿದಷ್ಟನ್ನು ಕೊಡುತ್ತಾನೆಂಬುದು ನಿಜ.


ಆಸನು ತನ್ನ ದೇವರಾದ ಸರ್ವೇಶ್ವರನಿಗೆ, “ಸರ್ವೇಶ್ವರಾ, ಬಲಿಷ್ಠನು ಬಲಹೀನನ ಮೇಲೆ ಬೀಳುವಾಗ, ನಿಮ್ಮ ಹೊರತು ರಕ್ಷಕನಿಲ್ಲ. ನಿಮ್ಮಲ್ಲಿ ಭರವಸೆ ಇಟ್ಟು ನಿಮ್ಮ ಹೆಸರಿನಲ್ಲಿ ಈ ಮಹಾ ಸೇನೆಗೆ ವಿರುದ್ಧ ಯುದ್ಧಕ್ಕೆ ಬಂದಿದ್ದೇವೆ. ಸರ್ವೇಶ್ವರಾ, ನಮ್ಮ ದೇವರು ನೀವು; ನರರು ನಿಮ್ಮನ್ನು ಎದುರಿಸಿ ಗೆಲ್ಲಬಾರದು,” ಎಂದು ಮೊರೆ ಇಟ್ಟನು.


ಸಂಧ್ಯಾನೈವೇದ್ಯದ ಹೊತ್ತಿಗೆ, ಪ್ರವಾದಿ ಎಲೀಯನು ಪೀಠದ ಹತ್ತಿರ ಬಂದು, “ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರೇ, ಸರ್ವೇಶ್ವರಾ, ನೀವೊಬ್ಬರೇ ಇಸ್ರಯೇಲರ ದೇವರಾಗಿರುತ್ತೀರಿ ಎಂಬುದನ್ನು, ನಾನು ನಿನ್ನ ದಾಸನಾಗಿರುತ್ತೇನೆಂಬುದನ್ನು ಹಾಗು ಇದನ್ನೆಲ್ಲಾ ನಿಮ್ಮ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನು ಈ ದಿನ ತೋರಿಸಿಕೊಡಿ.


ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಿದ್ದರು. ಆದರೂ ಯಾವ ವಾಣಿಯೂ ಕೇಳಿಸಲಿಲ್ಲ; ಯಾವನೂ ಅವರಿಗೆ ಉತ್ತರಕೊಡಲಿಲ್ಲ; ಅವರನ್ನು ಯಾವನೂ ಲಕ್ಷಿಸಲೂ ಇಲ್ಲ.


ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.


ಆ ಪುರುಷ, “ನನ್ನನ್ನು, ಹೋಗಬಿಡು, ಬೆಳಗು ಆಗುತ್ತಿದೆ,” ಎನ್ನಲು ಯಕೋಬನು, “ನೀವು ನನ್ನನ್ನು ಆಶೀರ್ವದಿಸಿದ ಹೊರತು, ನಿಮ್ಮನ್ನು ಹೋಗಬಿಡುವುದಿಲ್ಲ,” ಎಂದನು.


ಯಕೋಬನು ಒಂಟಿಗನಾಗಿ ಹಿಂದೆ ನಿಂತಿದ್ದನು, ಯಾರೋ ಒಬ್ಬ ಪುರುಷ ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.


ಕೂಡಲೆ ಸರ್ವೇಶ್ವರನ ಕಡೆಯಿಂದ ಬೆಂಕಿ ಇಳಿದುಬಂದು ಬಲಿಮಾಂಸವನ್ನೂ ಕಟ್ಟಿಗೆ ಕಲ್ಲುಮಣ್ಣುಗಳನ್ನೂ ದಹಿಸಿಬಿಟ್ಟಿತು. ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.


ಅವರು ಈ ದಿನ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವರು. ನಾನು ನಿನ್ನನ್ನು ಕೊಂದು, ನಿನ್ನ ತಲೆಯನ್ನು ಕಡಿದು, ಫಿಲಿಷ್ಟಿಯ ಸೈನ್ಯದ ಶವಗಳನ್ನು ಆಕಾಶದ ಪಕ್ಷಿಗಳಿಗೂ ವನ್ಯಮೃಗಗಳಿಗೂ ಹಂಚಿಕೊಡುವೆನು. ಇದರಿಂದ ಇಸ್ರಯೇಲರ ಸಂಗಡ ದೇವರಿದ್ದಾರೆಂಬುದು ಜಗತ್ತಿಗೆಲ್ಲಾ ತಿಳಿದುಬರುವುದು.


‘ಸರ್ವಶಕ್ತರಾದ ಸರ್ವೆಶ್ವರ, ಇಸ್ರಯೇಲರ ದೇವರು,’ ಎಂಬ ತಮ್ಮ ನಾಮಧೇಯಗಳಿಗೆ ಸದಾಕಾಲವೂ ಮಹಿಮೆ ಉಂಟಾಗಲಿ! ತಮ್ಮ ದಾಸ ದಾವೀದನ ಮನೆತನವು ನಿಮ್ಮ ಸನ್ನಿಧಿಯಲ್ಲಿ ಸ್ಥಿರವಾಗಿರಲಿ.


ಆಗ ದೈವಪುರುಷನೊಬ್ಬನು ಇಸ್ರಯೇಲರ ಅಹಾಬನ ಬಳಿಗೆ ಬಂದು, “ಸರ್ವೇಶ್ವರ ಹೀಗೆನ್ನುತ್ತಾರೆ, ‘ಸರ್ವೇಶ್ವರ ಕಣಿವೆಗಳ ದೇವರಲ್ಲ, ಬೆಟ್ಟಗಳ ದೇವರಾಗಿ ಮಾತ್ರ ಇರುತ್ತಾರೆಂದುಕೊಂಡು ಬಂದಿರುವ ಈ ಸಿರಿಯಾದವರ ಮಹಾಸೈನ್ಯವನ್ನು ನಿನ್ನ ಕೈಗೆ ಒಪ್ಪಿಸುವೆನು; ಇದರಿಂದ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು,” ಎಂದು ಹೇಳಿದನು.


ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ದೇವರು ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಈ ಅಸ್ಸೀರಿಯನ ಕೈಯಿಂದ ಬಿಡಿಸಿರಿ.”


ನನ್ನ ರಕ್ಷಣೆ ನಿನ್ನ ಕೈಯಿಂದಾದುದೆಂದು ಅವರರಿಯಲಿ I ಅದು ನಿನ್ನಿಂದಲೇ ಹೇ ಪ್ರಭು, ಆದುದೆಂದು ಖಚಿತವಾಗಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು