Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:39 - ಕನ್ನಡ ಸತ್ಯವೇದವು C.L. Bible (BSI)

39 ಜನರೆಲ್ಲರೂ ಅದನ್ನು ಕಂಡು ಬೋರಲಬಿದ್ದರು; “ಸರ್ವೇಶ್ವರನೇ ದೇವರು, ಸರ್ವೇಶ್ವರನೇ ದೇವರು,” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು - ಯೆಹೋವನೇ ದೇವರು, ಯೆಹೋವನೇ ದೇವರು ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಈ ದೃಶ್ಯವನ್ನು ಜನರೆಲ್ಲರೂ ನೋಡಿದರು. ಜನರು ನೆಲಕ್ಕೆ ಬಾಗಿ ನಮಸ್ಕರಿಸುತ್ತಾ, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಜನರೆಲ್ಲರು ಇದನ್ನು ಕಂಡಾಗ ಬೋರಲು ಬಿದ್ದು, “ಯೆಹೋವ ದೇವರೇ ದೇವರು! ಯೆಹೋವ ದೇವರೇ ದೇವರು!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:39
19 ತಿಳಿವುಗಳ ಹೋಲಿಕೆ  

ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಅನಂತರ ನಾನು ಸರ್ವೇಶ್ವರನ ಹೆಸರು ಹೇಳಿ ಪ್ರಾರ್ಥಿಸುವೆನು. ಅವರಿಬ್ಬರಲ್ಲಿ ಯಾರು ಆಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದು ನಿಶ್ಚಯಿಸೋಣ,” ಎಂದನು. ಜನರೆಲ್ಲರು, “ಸರಿ, ನೀನು ಹೇಳಿದಂತೆಯೇ ಆಗಲಿ,” ಎಂದು ಉತ್ತರಕೊಟ್ಟರು.


ಇಸ್ರಯೇಲರೆಲ್ಲರು ಬೆಂಕಿ ಇಳಿದು ಬರುವುದನ್ನೂ ಸರ್ವೇಶ್ವರನ ತೇಜಸ್ಸು ಆಲಯದಲ್ಲಿರುವುದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿದರು; “ಸರ್ವೇಶ್ವರ ಒಳ್ಳೆಯವರು; ಅವರ ಅಚಲ ಪ್ರೀತಿ ಶಾಶ್ವತ” ಎಂದು ಕೃತಜ್ಞತಾಸ್ತುತಿ ಮಾಡಿದರು.


ಎಲೀಯನು ಜನರೆಲ್ಲರ ಬಳಿಗೆ ಹೋಗಿ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ? ಸರ್ವೇಶ್ವರಸ್ವಾಮಿ ನಿಮಗೆ ದೇವರಾಗಿದ್ದರೆ ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ,” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡು, ಅವನು ಮತ್ತೆ ಅವರಿಗೆ,


“ಇವರನ್ನು ಏನು ಮಾಡೋಣ? ಇವರು ಮಾಡಿರುವ ಅಪರೂಪ ಅದ್ಭುತ ಜೆರುಸಲೇಮಿನ ಸರ್ವರಿಗೂ ತಿಳಿದುಹೋಗಿದೆ. ಅದನ್ನು ಅಲ್ಲಗಳೆಯುವಂತಿಲ್ಲ.


ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, “ಸಹೋದರರೇ, ಈಗ ನಾವು ಮಾಡಬೇಕಾದುದು ಏನು?” ಎಂದು ಕೇಳಿದರು.


ಯೊವಾನ್ನನು ಉಜ್ವಲವಾಗಿ ಉರಿಯುವ ದೀಪದಂತೆ ಇದ್ದನು. ಆ ಬೆಳಕಿನಲ್ಲಿ ನೀವು ಸ್ವಲ್ಪಕಾಲ ನಲಿದಾಡಿದಿರಿ.


ದಾವೀದನು ಕಣ್ಣೆತ್ತಿ ನೋಡಿ ಸರ್ವೇಶ್ವರನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ ಚಾಚಿದ ಕೈಯಲ್ಲಿ ಜೆರುಸಲೇಮಿಗೆ ವಿರೋಧವಾಗಿ ಹಿರಿದ ಕತ್ತಿ ಇರುವುದನ್ನೂ ಕಂಡನು. ಆಗ ಅವನೂ ಹಿರಿಯರೂ ಗೋಣಿತಟ್ಟನ್ನು ಉಟ್ಟುಕೊಂಡು ಬೋರಲಾಗಿ ಬಿದ್ದರು.


ಅದೇನೆಂದರೆ ಬಲಿಪೀಠದಿಂದ ಆಕಾಶಕ್ಕೆ ಹೋಗುತ್ತಿದ್ದ ಅಗ್ನಿಜ್ವಾಲೆಯೊಳಗೆ ಅವನು ಮೇಲಕ್ಕೇರಿಹೋದನು. ಅವರು ಇದನ್ನು ನೋಡುತ್ತಲೆ ನೆಲದ ಮೇಲೆ ಬೋರಲಾಗಿ ಬಿದ್ದರು.


ಸರ್ವೇಶ್ವರನ ಸನ್ನಿಧಿಯಿಂದ ಅಗ್ನಿ ಹೊರಟು ಬಲಿಪೀಠದ ಮೇಲಿದ್ದ ದಹನಬಲಿದ್ರವ್ಯವನ್ನೂ, ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರು ಅದನ್ನು ಕಂಡು ಜಯ ಜಯಕಾರ ಮಾಡಿದರು; ಅಡ್ಡಬಿದ್ದು ನಮಸ್ಕರಿಸಿದರು.


ಭೂಲೋಕದ ಜನರೆಲ್ಲರೂ ಸರ್ವೇಶ್ವರನ ಹೊರತು ಬೇರೆ ದೇವರಿಲ್ಲವೆಂಬುದನ್ನು ತಿಳಿದುಕೊಳ್ಳುವಂತೆ, ಅವರು ಅವಶ್ಯವಿರುವಾಗೆಲ್ಲಾ ತಮ್ಮ ದಾಸನ ಹಾಗು ಪ್ರಜೆಗಳಾದ ಇಸ್ರಯೇಲರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.


ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅಂಥವರು ಜುದೇಯ ನಾಡಿನ ಜೆರುಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ, ಒಂದು ದೇವಾಲಯವನ್ನು ಕಟ್ಟಲಿ; ಅವರ ಸಂಗಡ ಅವರ ದೇವರಿರಲಿ!


ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು I ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು I ಆತನ ಜನ, ಆತನೆ ಮೇಯಿಸುವ ಕುರಿಗಳು, ನಾವು II


ಪ್ರಭುವೆ ದೇವನು, ನಮ್ಮ ಮೇಲೆ ಜ್ಯೋತಿಯನು ಬೆಳಗಿದವನು I ಪ್ರದಕ್ಷಿಣೆ ಮಾಡಿರಿ, ಬಲಿಪೀಠದ ಸುತ್ತ, ಹಿಡಿದು ರೆಂಬೆಗಳನು II


“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.


ಆಗ ಒಬ್ಬ ಪ್ರವಾದಿ ಇಸ್ರಯೇಲರ ಅರಸ ಅಹಾಬನ ಬಳಿಗೆ ಬಂದು ಅವನಿಗೆ, “ಈ ಮಹಾಸಮೂಹವನ್ನು ನೋಡಿದಿಯೋ? ‘ನಾನೇ ಸರ್ವೇಶ್ವರ’ ಎಂಬುದು ನಿನಗೆ ಮನದಟ್ಟಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೊಪ್ಪಿಸುವೆನು, ಎನ್ನುತ್ತಾರೆ ಸರ್ವೇಶ್ವರ,” ಎಂದು ಹೇಳಿದನು.


ಅವರು ಆಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿದರು. ಅವನನ್ನು ಮರಳಿ ಜೆರುಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟರು. ಆಗ ಸರ್ವೇಶ್ವರಸ್ವಾಮಿಯೇ ದೇವರು ಎಂಬುದು ಅವನಿಗೆ ಮನದಟ್ಟಾಯಿತು.


“ಎಲೈ ಪ್ರಜೆ ಇಸ್ರಯೆಲ್, ನಾನು ನಿನ್ನ ದೇವರು I ಕಿವಿಗೊಟ್ಟು ಆಲಿಸು ನಾನು ನಿನ್ನ ವಿರುದ್ಧ ವಾದಿಸುವುದನು II


ದುರುಳರಿಗೆದುರಾಗಿ ನನ್ನ ಪಕ್ಷ ವಹಿಸುವರಾರು? I ಕೆಡುಕರಿಗೆ ವಿರುದ್ಧ ನನ್ನ ಪರ ನಿಲ್ಲುವವರಾರು? II


ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಾನು ಇಸ್ರಯೇಲರನ್ನು ಆರಿಸಿಕೊಂಡ ದಿನದಂದು ಯಕೋಬ ಸಂತಾನದವರಿಗೆ ಮಾತುಕೊಟ್ಟು, ‘ನಾನೇ ನಿಮ್ಮ ದೇವರಾದ ಸರ್ವೇಶ್ವರ’ ಎಂದು ಈಜಿಪ್ಟ್ ದೇಶದಲ್ಲಿ ಪ್ರಮಾಣಪೂರ್ವಕವಾಗಿ ತಿಳಿಯಪಡಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು