Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:43 - ಕನ್ನಡ ಸತ್ಯವೇದವು C.L. Bible (BSI)

43 ಅವನು ತನ್ನ ಸೇವಕನಿಗೆ, “ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು,” ಎಂದು ಆಜ್ಞಾಪಿಸಿದನು. ಸೇವಕನು ಹೋಗಿ, ನೋಡಿಬಂದು ಏನೂ ತೋರುವುದಿಲ್ಲವೆಂದು ಹೇಳಿದನು. ಹೀಗೆ ಅವನನ್ನು ಏಳುಸಾರಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅವನು ತನ್ನ ಸೇವಕನಿಗೆ, “ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು” ಎಂದು ಆಜ್ಞಾಪಿಸಿದನು. ಸೇವಕನು ಹೋಗಿ ನೋಡಿ ಬಂದು, “ಏನೂ ಕಾಣುವುದಿಲ್ಲ” ಎಂದು ಹೇಳಿದನು. ಹೀಗೆ ಅವನನ್ನು ಏಳು ಸಾರಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಅವನು ತನ್ನ ಸೇವಕನಿಗೆ - ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು ಎಂದು ಆಜ್ಞಾಪಿಸಿದನು. ಸೇವಕನು ಹೋಗಿ ನೋಡಿ ಬಂದು ಏನೂ ತೋರುವದಿಲ್ಲ ಎಂದು ಹೇಳಿದನು. ಹೀಗೆ ಅವನನ್ನು ಏಳು ಸಾರಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಎಲೀಯನು ತನ್ನ ಸೇವಕನಿಗೆ, “ಸಮುದ್ರದ ಕಡೆಗೆ ನೋಡು” ಎಂದು ಹೇಳಿದನು. ಸಮುದ್ರವು ಕಾಣುವ ಸ್ಥಳಕ್ಕೆ ಆ ಸೇವಕನು ಹೋದನು. ನಂತರ ಸೇವಕನು ಹಿಂದಿರುಗಿ ಬಂದು, “ನನಗೆ ಏನೂ ಕಾಣುತ್ತಿಲ್ಲ” ಎಂದನು. ಎಲೀಯನು ಆ ಸೇವಕನಿಗೆ, “ಹೋಗಿ ಮತ್ತೆ ನೋಡು” ಎಂದನು. ಹೀಗೆ ಆ ಸೇವಕನು ಏಳು ಸಲ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ತನ್ನ ಸೇವಕನಿಗೆ, “ನೀನು ಹೋಗಿ ಸಮುದ್ರದ ಕಡೆಗೆ ನೋಡು,” ಎಂದನು. ಅವನು ಹೋಗಿ ನೋಡಿ, “ಏನೂ ಇಲ್ಲ,” ಎಂದನು. ಅವನು, “ಏಳು ಸಾರಿ ತಿರುಗಿ ಹೋಗಿ ನೋಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:43
11 ತಿಳಿವುಗಳ ಹೋಲಿಕೆ  

ನಿಯಮಿತ ಕಾಲದಲ್ಲಿ ಆ ದರ್ಶನ ನೆರವೇರುವುದು. ಅದರ ಅಂತಿಮ ಪರಿಣಾಮ ಶೀಘ್ರದಲ್ಲಿ ಗೊತ್ತಾಗುವುದು. ತಡವಾದರೂ ಕಾದಿರು; ಮೋಸಮಾಡದು. ಅದು ಖಂಡಿತವಾಗಿ ಕೈಗೂಡುವುದು; ತಾಮಸವಾಗದು.


ಪವಿತ್ರಾತ್ಮರಿಂದ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲೂ ಪ್ರಾರ್ಥಿಸಿರಿ. ನಿಮ್ಮ ಕೋರಿಕೆ, ಬೇಡಿಕೆಗಳನ್ನು ದೇವರಿಗೆ ಅರ್ಪಿಸಿರಿ. ಎಚ್ಚರವಾಗಿದ್ದು ಎಲ್ಲಾ ದೇವಜನರಿಗಾಗಿ ಎಡೆಬಿಡದೆ ಪ್ರಾರ್ಥಿಸಿರಿ.


ಹೀಗಿರುವಲ್ಲಿ ದೇವರು, ತಾವಾಗಿ ಆಯ್ಕೆಮಾಡಿಕೊಂಡ ಜನರು ಹಗಲುರಾತ್ರಿ ತಮಗೆ ಮೊರೆಯಿಡುವಾಗ ನ್ಯಾಯ ತೀರಿಸದೆ ಹೋಗುವರೆ? ತಡಮಾಡಿಯಾರೆ?


ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು:


ಉದಯಕಾಲದಲ್ಲಿ ಪ್ರಭು, ನಿನಗೆ ಕೇಳಿಬರುವುದು ನನ್ನ ಸ್ವರ I ಉದಯಾರಾಧನೆ ಮಾಡಿ ಎದುರು ನೋಡುತ್ತಿರುವೆ ನಾ ಸದುತ್ತರ II


ಆ ಪುರುಷ, “ನನ್ನನ್ನು, ಹೋಗಬಿಡು, ಬೆಳಗು ಆಗುತ್ತಿದೆ,” ಎನ್ನಲು ಯಕೋಬನು, “ನೀವು ನನ್ನನ್ನು ಆಶೀರ್ವದಿಸಿದ ಹೊರತು, ನಿಮ್ಮನ್ನು ಹೋಗಬಿಡುವುದಿಲ್ಲ,” ಎಂದನು.


ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ, ಎಲೀಯನು ಕರ್ಮೆಲಿನ ತುದಿಗೆ ಹೋಗಿ, ಅಲ್ಲಿ ನೆಲದ ಮೇಲೆ ಬಿದ್ದುಕೊಂಡು, ಮೊಣಕಾಲಿನ ಮಧ್ಯೆ ತಲೆಯನ್ನಿಟ್ಟನು.


ಏಳನೆಯ ಸಾರಿ ಆ ಸೇವಕನು, “ಅಂಗೈಯಷ್ಟು ಚಿಕ್ಕದಾದ ಮೋಡವು ಸಮುದ್ರದಿಂದ ಏರಿ ಬರುತ್ತಲಿದೆ,” ಎಂದು ತಿಳಿಸಿದನು. ಆಗ ಎಲೀಯನು ಅವನಿಗೆ, “ನೀನು ಹೋಗಿ ಅಹಾಬನಿಗೆ, ‘ಬೇಗನೆ ರಥವನ್ನು ಹೂಡಿಸಿಕೊಂಡು, ಮಳೆಯು ನಿನ್ನನ್ನು ತಡೆಯದಂತೆ ಬೆಟ್ಟವನ್ನಿಳಿದು ಹೋಗು’ ಎಂದು ಹೇಳು,” ಎಂದನು.


ಏಳುಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿವಸ ನೀವು ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ಕೊಂಬುಗಳನ್ನು ಊದಬೇಕು.


ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯನ್ನು ತುಸುಹೊತ್ತು ಅತ್ತಿತ್ತ ಅಡ್ಡಾಡಿ, ತಿರುಗಿ ಅವನ ಮೇಲೆ ಬೋರಲು ಬೀಳಲು, ಹುಡುಗನು ಏಳು ಸಾರಿ ಸೀತು ಕಣ್ತೆರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು